Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ಅಧ್ಯಕ್ಷರಾಗಿ ನಿಶಾನಿ ಜಯ್ಯಣ್ಣ, ಉಪಾಧ್ಯಕ್ಷರಾಗಿ ಶ್ರೀಮತಿ ಎನ್.ಎಂ.ಪುಷ್ಟವಲ್ಲಿ ಆಯ್ಕೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ ಫೆ. 06 : ನಗರದ ವಾಸವಿ ವೃತ್ತದಲ್ಲಿನ ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿ ಲಿ.ಗೆ ಮುಂದಿನ 5 ವರ್ಷಕ್ಕೆ ಅಧ್ಯಕ್ಷರಾಗಿ ನಿಶಾನಿ ಜಯ್ಯಣ್ಣ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಎನ್.ಎಂ.ಪುಷ್ಟವಲ್ಲಿ ಇಂದು ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಆಯ್ಕೆಯಾಗಿದ್ದಾರೆ ಎಂದು ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿ ಲಿ.,ನ ಚುನಾವಣಾ ಅಧಿಕಾರಿಗಳು, ಹಾಗೂ ಅಧೀಕ್ಷರು, ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ, ಚಿತ್ರದುರ್ಗ ಉಪ ವಿಭಾಗದ ಅಧೀಕ್ಷಕರಾದ ಎಸ್.ಮೊಹಮ್ಮದ್ ಯೂನುಸ್ ಪರ್ವೀಜ್ ತಿಳಿಸಿದ್ದಾರೆ.


ಕಳೆದ ಜನವರಿ 27 ರಂದು ನಡೆದ ಚುನಾವಣೆಯಲ್ಲಿ ಸೊಸೈಟಿಯ 12 ಜನ ನಿರ್ದೆಶಕ ಸ್ಥಾನಕ್ಕೆ ನಿಶಾನಿ ಜಯ್ಯಣ್ಣರವರ ನೇತೃತ್ವದ ತಂಡ ಅವಿರೋಧವಾಗಿ ಆಯ್ಕೆಯಾಗಿತ್ತು. ಈ ಆಯ್ಕೆಯಲ್ಲಿ ಕುರುಬ, ಬಣಜಿಗ, ಮರಾಠ, ಲಿಂಗಾಯತ,ಹರಿಜನ ನಾಯಕ ಒಬಿಸಿಗೆ  ಅವಕಾಶವನ್ನು ನೀಡಲಾಗಿದೆ. ಈ ಚುನಾವಣೆಯಲ್ಲಿ 06 ಸಾಮಾನ್ಯ ಸ್ಥಾನದಿಂದ ಎಂ.ನಿಶಾನಿ ಜಯ್ಯಣ್ಣ, ಲಿಯಾಕತ್ ಅಲಿ ಖಾನ್, ಸಾಧೀಖ್ ಬಾಷಾ, ಜಿ.ಸುರೇಶ್ ಕುಮಾರ್ (ಭಾಫ್ನಾ) ಜೆ.ಆರ್.ಹರೀಶ್, ಜೆ.ನಿಶಾನಿ ಧಶರಥ್, ಒಂದು ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ ಚಂದ್ರಪ್ಪ, ಒಂದು ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ಓ.ತಿಪ್ಪೇಸ್ವಾಮಿ, ಒಂದು ಹಿಂದುಳಿದ ವರ್ಗಗಳ (ಪ್ರವರ್ಗ-ಎ) ಮೀಸಲು ಸ್ಥಾನ, ಶ್ರೀನಿವಾಸ್ ಮೂರ್ತಿ, ಒಂದು ಹಿಂದುಳಿದ ವರ್ಗಗಳ (ಪ್ರವರ್ಗ-ಬಿ) ಮೀಸಲು ಸ್ಥಾನದಿಂದ ಸೂರ್ಯ ಪ್ರಕಾಶ್  ಹಾಗೂ ಎರಡು ಮಹಿಳಾ ಮೀಸಲು ಸ್ಥಾನದಿಂದ ಎನ್.ಎಂ.ಪುಷ್ಪವಲ್ಲಿ ಮತ್ತು ಎ. ಚಂಪಕಾ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಂದು ಸೊಸೈಟಿಯ ಸಭಾಂಗಣದಲ್ಲಿ ನಡೆದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಮುಂದಿನ  5 ವರ್ಷದ ಅವಧಿಗೆ ಅಧ್ಯಕ್ಷರಾಗಿ ನಿಶಾನಿ ಜಯ್ಯಣ್ಣ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಎನ್.ಎಂ.ಪುಷ್ಪವಲ್ಲಿ ರವರು ಆಯ್ಕೆಯಾಗಿದ್ದಾರೆ.

ನಿಶಾನಿ ಜಯ್ಯಣ್ಣ ರವರು ಟೌನ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತಯೇ ಅವರು ಅಭಿಮಾನಿಗಳು ಸಂಘ ಸಂಸ್ಥೆಯ ಪದಾಧಿಕಾರಿಗಳು ಹಿತೈಷಿಗಳು ಆಗಮಿಸಿ ಅವರಿಗೆ ಶಾಲು, ಹಾರ ತುರಾಯಿಯನ್ನು ನೀಡಿ ಸಿಹಿಯನ್ನು ತಿನ್ನಿಸಿ ಶುಭ ಕೋರಿದರು. ಇದೇ ಸಂದರ್ಭದಲ್ಲ ಸೊಸೈಟಿಯ ಮುಭಾಗದಲ್ಲಿ ಪಟಾಕಿಯನ್ನು ಸಿಡಿಸಿ, ಅಲ್ಲಿದ್ದವರಿಗೆಲ್ಲಾ ಸಿಹಿಯನ್ನು ಹಂಚಲಾಯಿತು.

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment