ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ಅಧ್ಯಕ್ಷರಾಗಿ ನಿಶಾನಿ ಜಯ್ಯಣ್ಣ, ಉಪಾಧ್ಯಕ್ಷರಾಗಿ ಶ್ರೀಮತಿ ಎನ್.ಎಂ.ಪುಷ್ಟವಲ್ಲಿ ಆಯ್ಕೆ

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ ಫೆ. 06 : ನಗರದ ವಾಸವಿ ವೃತ್ತದಲ್ಲಿನ ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿ ಲಿ.ಗೆ ಮುಂದಿನ 5 ವರ್ಷಕ್ಕೆ ಅಧ್ಯಕ್ಷರಾಗಿ ನಿಶಾನಿ ಜಯ್ಯಣ್ಣ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಎನ್.ಎಂ.ಪುಷ್ಟವಲ್ಲಿ ಇಂದು ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಆಯ್ಕೆಯಾಗಿದ್ದಾರೆ ಎಂದು ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿ ಲಿ.,ನ ಚುನಾವಣಾ ಅಧಿಕಾರಿಗಳು, ಹಾಗೂ ಅಧೀಕ್ಷರು, ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ, ಚಿತ್ರದುರ್ಗ ಉಪ ವಿಭಾಗದ ಅಧೀಕ್ಷಕರಾದ ಎಸ್.ಮೊಹಮ್ಮದ್ ಯೂನುಸ್ ಪರ್ವೀಜ್ ತಿಳಿಸಿದ್ದಾರೆ.


ಕಳೆದ ಜನವರಿ 27 ರಂದು ನಡೆದ ಚುನಾವಣೆಯಲ್ಲಿ ಸೊಸೈಟಿಯ 12 ಜನ ನಿರ್ದೆಶಕ ಸ್ಥಾನಕ್ಕೆ ನಿಶಾನಿ ಜಯ್ಯಣ್ಣರವರ ನೇತೃತ್ವದ ತಂಡ ಅವಿರೋಧವಾಗಿ ಆಯ್ಕೆಯಾಗಿತ್ತು. ಈ ಆಯ್ಕೆಯಲ್ಲಿ ಕುರುಬ, ಬಣಜಿಗ, ಮರಾಠ, ಲಿಂಗಾಯತ,ಹರಿಜನ ನಾಯಕ ಒಬಿಸಿಗೆ  ಅವಕಾಶವನ್ನು ನೀಡಲಾಗಿದೆ. ಈ ಚುನಾವಣೆಯಲ್ಲಿ 06 ಸಾಮಾನ್ಯ ಸ್ಥಾನದಿಂದ ಎಂ.ನಿಶಾನಿ ಜಯ್ಯಣ್ಣ, ಲಿಯಾಕತ್ ಅಲಿ ಖಾನ್, ಸಾಧೀಖ್ ಬಾಷಾ, ಜಿ.ಸುರೇಶ್ ಕುಮಾರ್ (ಭಾಫ್ನಾ) ಜೆ.ಆರ್.ಹರೀಶ್, ಜೆ.ನಿಶಾನಿ ಧಶರಥ್, ಒಂದು ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ ಚಂದ್ರಪ್ಪ, ಒಂದು ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ಓ.ತಿಪ್ಪೇಸ್ವಾಮಿ, ಒಂದು ಹಿಂದುಳಿದ ವರ್ಗಗಳ (ಪ್ರವರ್ಗ-ಎ) ಮೀಸಲು ಸ್ಥಾನ, ಶ್ರೀನಿವಾಸ್ ಮೂರ್ತಿ, ಒಂದು ಹಿಂದುಳಿದ ವರ್ಗಗಳ (ಪ್ರವರ್ಗ-ಬಿ) ಮೀಸಲು ಸ್ಥಾನದಿಂದ ಸೂರ್ಯ ಪ್ರಕಾಶ್  ಹಾಗೂ ಎರಡು ಮಹಿಳಾ ಮೀಸಲು ಸ್ಥಾನದಿಂದ ಎನ್.ಎಂ.ಪುಷ್ಪವಲ್ಲಿ ಮತ್ತು ಎ. ಚಂಪಕಾ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಂದು ಸೊಸೈಟಿಯ ಸಭಾಂಗಣದಲ್ಲಿ ನಡೆದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಮುಂದಿನ  5 ವರ್ಷದ ಅವಧಿಗೆ ಅಧ್ಯಕ್ಷರಾಗಿ ನಿಶಾನಿ ಜಯ್ಯಣ್ಣ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಎನ್.ಎಂ.ಪುಷ್ಪವಲ್ಲಿ ರವರು ಆಯ್ಕೆಯಾಗಿದ್ದಾರೆ.

ನಿಶಾನಿ ಜಯ್ಯಣ್ಣ ರವರು ಟೌನ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತಯೇ ಅವರು ಅಭಿಮಾನಿಗಳು ಸಂಘ ಸಂಸ್ಥೆಯ ಪದಾಧಿಕಾರಿಗಳು ಹಿತೈಷಿಗಳು ಆಗಮಿಸಿ ಅವರಿಗೆ ಶಾಲು, ಹಾರ ತುರಾಯಿಯನ್ನು ನೀಡಿ ಸಿಹಿಯನ್ನು ತಿನ್ನಿಸಿ ಶುಭ ಕೋರಿದರು. ಇದೇ ಸಂದರ್ಭದಲ್ಲ ಸೊಸೈಟಿಯ ಮುಭಾಗದಲ್ಲಿ ಪಟಾಕಿಯನ್ನು ಸಿಡಿಸಿ, ಅಲ್ಲಿದ್ದವರಿಗೆಲ್ಲಾ ಸಿಹಿಯನ್ನು ಹಂಚಲಾಯಿತು.

 

suddionenews

Recent Posts

ಡಾ. ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡದ ಕಾಂಗ್ರೆಸ್ ಇಂದು ಜೈ ಭೀಮ್ ಎನ್ನುತ್ತಿದೆ : ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ

  ಸುದ್ದಿಒನ್ ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ವೇಳೆ ಪ್ರಧಾನಿ ಮೋದಿಯವರು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ…

45 minutes ago

ಚಿತ್ರದುರ್ಗಕ್ಕೆ ಆಗಮಿಸಿದ ಕರ್ನಾಟಕ ಶ್ರಮಿಕ್ ಸಮ್ಮಾನ್ ಯಾತ್ರೆ : ಫೆ.25 ರಂದು ನವದೆಹಲಿಯಲ್ಲಿ ಬೃಹತ್ ಸಮಾವೇಶ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

1 hour ago

ಫೆಬ್ರವರಿ 08 ರಂದು ಶ್ರೀ ಜೋಳ ಸಿದ್ದಿವಿನಾಯಕ ದೇವಾಲಯ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 06 :…

2 hours ago

ಟಿಬಿ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ : ಡಾ.ಕಾವ್ಯ

ಚಿತ್ರದುರ್ಗ. ಫೆ.06: ಎಲ್ಲರೂ ಕೈಜೋಡಿಸಿ ಟಿಬಿ ಮುಕ್ತ ಸಮಾಜ ನಿರ್ಮಾಣ ಮಾಡೋಣ ಎಂದು ಕಾಸವರಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ…

2 hours ago

ಚಿತ್ರದುರ್ಗ ಜಿಲ್ಲಾಸ್ಪತ್ರೆ ಕಾರ್ಯವೈಖರಿಗೆ ಡಾ.ನಾಗಲಕ್ಷ್ಮೀ ಚೌಧರಿ ಬೇಸರ

ಚಿತ್ರದುರ್ಗ, ಫೆಬ್ರವರಿ. 06 : ಜಿಲ್ಲಾಸ್ಪತ್ರೆಯ ಕಾರ್ಯವೈಖರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಬೇಸರ ವ್ಯಕ್ತಪಡಿಸಿದರು. ನಗರದ…

2 hours ago

ಬಾಲ್ಯ ವಿವಾಹ ತೊಲಗಿಸಲು ಬಡತನ ನಿರ್ಮೂಲನೆ ಅತ್ಯಗತ್ಯ : ಡಾ.ನಾಗಲಕ್ಷ್ಮೀ ಚೌಧರಿ

ಚಿತ್ರದುರ್ಗ. ಫೆ.05: ಜಿಲ್ಲೆಯಲ್ಲಿ ಬಾಲ್ಯವಿವಾಹ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಬಾಲ್ಯವಿವಾಹಕ್ಕೆ ಬಡತನವೇ ಪ್ರಮುಖ ಕಾರಣ. ಹಾಗಾಗಿ ಸರ್ಕಾರದ ಯೋಜನೆ, ಸೌಲಭ್ಯಗಳನ್ನು…

2 hours ago