ಶ್ರೀಮತಿ ರತ್ನಪ್ರಭಾ ಅವರನ್ನು ರಾಜ್ಯಸಭೆ ಸದಸ್ಯರಾಗಿ ಆಯ್ಕೆ ಮಾಡಿ : ಮಾದಿಗ ದಂಡೋರ ಯುವ ಘಟಕ ರಾಜ್ಯಾಧ್ಯಕ್ಷ ಮಲ್ಲಲಿ ವೆಂಕಟೇಶ್ ಒತ್ತಾಯ

ಚಿತ್ರದುರ್ಗ : ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯಾಗಿ ಸಮರ್ಥ ಆಡಳಿತ ನೀಡಿ, ಪ್ರಸ್ತುತ ಬಿಜೆಪಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿರುವ ರತ್ನಪ್ರಭಾ ಅವರನ್ನು ಬಿಜೆಪಿ ಪಕ್ಷ ರಾಜ್ಯಸಭೆ ಸದಸ್ಯರನ್ನಾಗಿ ಆಯ್ಕೆ ಮಾಡಲು ಮುಂದಾಗಬೇಕು ಎಂದು ಮಾದಿಗ ದಂಡೋರ ಯುವ ಘಟಕದ ರಾಜ್ಯಾಧ್ಯಕ್ಷ ಮಲ್ಲಲಿ ವೆಂಕಟೇಶ್ ಒತ್ತಾಯಿಸಿದ್ದಾರೆ.

ತೆಲಂಗಾಣ, ಆಂಧ್ರ, ಕರ್ನಾಟಕ ರಾಜ್ಯದಲ್ಲಿ ಹೆಚ್ಚು ಸಂಖ್ಯೆಯ ಅಭಿಮಾನಿಗಳು ಹೊಂದಿರುವ ರತ್ನಪ್ರಭಾ ಅವರು, ಮಾದಿಗ ಸಮುದಾಯದ ಮಹಿಳೆಯಾಗಿದ್ದು, ಮೂರು ದಶಕಗಳ ಕಾಲ ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಆಡಳಿತ ನಡೆಸಿದ ಖ್ಯಾತಿ ಹೊಂದಿದ್ದಾರೆ.

ರಾಜ್ಯದ ಎಲ್ಲೆಡೆಯೂ ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ವಿವಿಧ ರೀತಿ ಕಾರ್ಯ ನಿರ್ವಹಿಸುತ್ತಿರುವ ರತ್ನಾಪ್ರಭಾ ಅವರನ್ನು ರಾಜ್ಯಸಭೆ ಸದಸ್ಯರನ್ನಾಗಿ ಆಯ್ಕೆ ಮಾಡಲು  ಬಿಜೆಪಿ ಅಭ್ಯರ್ಥಿಯನ್ನಾಗಿಸಬೇಕು. ಈ ಮೂಲಕ ಮಾದಿಗ ಸಮುದಾಯಕ್ಕೆ ರಾಜಕೀಯ ಸ್ಥಾನಮಾನ ಕಲ್ಪಿಸಲು ಮುಂದಾಗಬೇಕು.

ಮಹಿಳೆ, ದಲಿತ, ದಕ್ಷ ಅಧಿಕಾರಿ, ಸಂಘಟನಾ ಶಕ್ತಿ, ಹಿರಿತನ, ಮೂರು ರಾಜ್ಯಗಳಲ್ಲಿ ಬೆಂಬಲಿಗರನ್ನು ಹೊಂದಿರುವ ರತ್ನಪ್ರಭಾ ಅವರನ್ನು ರಾಜ್ಯಸಭೆ ಸದಸ್ಯರನ್ನಾಗಿಸುವುದರಿಂದ ಪಕ್ಷ ಬಲವರ್ಧನೆಗೆ ಸಹಕಾರ ಆಗಲಿದೆ. ಜೊತೆಗೆ ದಲಿತ, ಮಾದಿಗ, ಮಹಿಳಾ ವರ್ಗಕ್ಕೆ ರಾಜಕೀಯ ಸ್ಥಾನ ನೀಡಿದ ಗೌರವ ಬಿಜೆಪಿಗೆ ಸಲ್ಲಲಿದೆ.  ಈ ನಿಟ್ಟಿನಲ್ಲಿ ಬಿಜೆಪಿ ವರಿಷ್ಠರು ಚಿಂತನೆ ನಡೆಸಿ, ದಲಿತ ಮಹಿಳೆಗೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಮಲ್ಲಲಿ ವೆಂಕಟೇಶ್ ಸೇರಿ ಅನೇಕರು ಮನವಿ ಮಾಡಿದ್ದಾರೆ.

ಮಲ್ಲಲಿ ವೆಂಕಟೇಶ್,
ರಾಜ್ಯಾಧ್ಯಕ್ಷರು,
ಮಾದಿಗ ದಂಡೋರ ಯುವ ಘಟಕ
ಚಿತ್ರದುರ್ಗ, ಮೊ.ನಂ: 9980170876

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

58 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago