Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರೀತಿಯ ಘಮಲು ಪಸರಿಸಲು ಫೆ.9ಕ್ಕೆ ಬರ್ತಿದೆ “ನಗುವಿನ ಹೂಗಳ ಮೇಲೆ” ಸಿನಿಮಾ

---Advertisement---

ಸುದ್ದಿಒನ್, ಬೆಂಗಳೂರು : ಪ್ರೀತಿ ಪ್ರೇಮಕ್ಕೆ ವಯಸ್ಸಿನ ಹಂಗಿಲ್ಲ. ಯಾವ ವಯಸ್ಸಲ್ಲಿ ಬೇಕಾದರೂ ಪ್ರೀತಿಯಾಗಬಹುದು. ಹೀಗಾಗಿ 18 ರಿಂದ 80ರ ತನಕ ಎಲ್ಲರೂ ಕೂತೂ ನೋಡುವ ಸಿನಿಮಾ ‘ನಗುವಿನ ಹೂಗಳ ಮೇಲೆ’. ಒಂದು ಬ್ಯೂಟಿಫುಲ್ ಲವ್ ಸ್ಟೋರಿ ಇರುವಂತ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಫೆಬ್ರವರಿ 9 ರಂದು ಸಿನಿಮಾ ತೆರೆಗೆ ಬರಲಿದೆ. ಮೆಡಿಕಲ್ ಹುಡುಗಿ, ಇಂಜಿನಿಯರಿಂಗ್ ಹುಡುಗ ಪ್ರೇಮಕಾವ್ಯವನ್ನು ಥಿಯೇಟರ್ ನಲ್ಲಿಯೇ ಸವಿದರೆ ಚೆಂದ.

ಈ ಹಿಂದೆ ಆಮ್ಲೆಟ್, ಕೆಂಪಿರ್ವೆ ಮುಂತಾದ ಸಿನಿಮಾಗಳನ್ನು ನಿರ್ದೇಶನ ಮಾಡಿ ಗಮನ ಸೆಳೆದಿರುವವರು ವೆಂಕಟ್ ಭಾರದ್ವಾಜ್. ಅವರು ನಗುವಿನ ಹೂಗಳ ಮೇಲೆ ಚಿತ್ರದ ಮೂಲಕ, ಎಲ್ಲ ವಯೋಮಾನದವರನ್ನೂ, ಎಲ್ಲ ತೆರನಾದ ಅಭಿರುಚಿಯ ಪ್ರೇಕ್ಷಕರನ್ನೂ ಅಚ್ಚರಿಗೀಡುಮಾದಲು ಸಜ್ಜಾಗಿದ್ದಾರೆ. ಈ ಚಿತ್ರವನ್ನು ತೆಲುಗಿನ ಖ್ಯಾತ ನಿರ್ಮಾಪಕ ಕೆ. ರಾಧಾ ಮೋಹನ್ ಶ್ರೀ ಸತ್ಯಸಾಯಿ ಆಟ್ರ್ಸ್ ಬ್ಯಾನರಿನಡಿಯಲ್ಲಿ ನಿರ್ಮಾಣ ಮಾಡಿದ್ದಾರೆ.

ಅಭಿ ದಾಸ್ ಮತ್ತು ಶರಣ್ಯಾ ಶೆಟ್ಟಿ ನಾಯಕ ನಾಯಕಿಯರಾಗಿ ನಟಿಸಿರುವ ಈ ಚಿತ್ರ ಈಗಾಗಲೇ ಹಾಡುಗಳು, ಟ್ರೇಲರ್ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿದೆ. ಭಿನ್ನ ಪ್ರೇಮಕಥಾನಕದ ಸ್ಪಷ್ಟ ಸುಳಿವಿನೊಂದಿಗೆ ಭರವಸೆ ಮೂಡಿಸಿರುವ ನಗುವಿನ ಹೂಗಳ ಮೇಲೆ ಸಾಕಷ್ಟು ಹೊಸತನಗಳಿದೆ.

ಬಲ ರಾಜವಾಡಿ, ಆಶಾ ಸುಜಯ್, ಗಿರೀಶ್ ನಂಜಪ್ಪ, ಹರ್ಷಿತ್ ಗೌಡ, ಅಭಿಷೇಕ್ ಐಯಂಗಾರ್, ಹರೀಶ್ ಚೌಹಾಣ್, ಹರ್ಷ ಗೋ ಭಟ್ ಮುಂತಾದವರ ತಾರಾಗಣ ಈ ಚಿತ್ರದಲ್ಲಿದೆ. ಪ್ರಮೋದ್ ಭಾರತೀಯ ಛಾಯಾಗ್ರಹಣ, ಅಭಿಷೇಕ್ ಐಯಂಗಾರ್ ಸಂಭಾಷಣೆ, ಲವ್ ಫ್ರಾನ್ ಮೆಹತಾ ಸಂಗೀತ ನಿರ್ದೇಶನ, ಚಂದನ್ ಪಿ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನದೊಂದಿಗೆ ನಗುವಿನ ಹೂಗಳ ಮೇಲೆ ರೂಪುಗೊಂಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment