Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭಾರತೀಯ ವೈದ್ಯಕೀಯ ಸಂಘಕ್ಕೆ 5 ಎಕರೆ ಭೂಮಿ ಕೊಡಿ : ಚಿತ್ರದುರ್ಗ ಜಿಲ್ಲಾ ಶಾಖೆ ಮನವಿ

---Advertisement---

 

ಸುದ್ದಿಒನ್, ಚಿತ್ರದುರ್ಗ, ಮೇ. 24 : ಭಾರತೀಯ ವೈದ್ಯಕೀಯ ಸಂಘ, ಚಿತ್ರದುರ್ಗ ಜಿಲ್ಲಾ ಶಾಖೆಗೆ 5 ಎಕರೆ ಸರ್ಕಾರಿ ಜಮೀನು ಮಂಜೂರು ಮಾಡಬೇಕೆಂದು ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಮನವಿ ಮಾಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ಮನವಿ ಪತ್ರವನ್ನು ಸಲ್ಲಿಸಿದರು.

ಸಂಘವು ಜಿಲ್ಲೆಯಲ್ಲಿ ಸಾರ್ವಜನಿಕ ಆರೋಗ್ಯ ಸೇವೆಯನ್ನು ಅವಿರಿತವಾಗಿ 50 ವರ್ಷಗಳಿಂದಲೂ ಮಾಡುತ್ತಾ ಬಂದಿದೆ.  ಸಂಘಕ್ಕೆ ಸುಮಾರು 5 ಎಕರೆ ಜಮೀನು ಅವಶ್ಯಕತೆ ಇದ್ದು, ಈಗಾಗಲೇ ಇಂಗಳದಾಳು ಕಣಿವೆ ವ್ಯಾಪ್ತಿಯಲ್ಲಿ 5 ಎಕರೆ ಸರ್ವೆಮಾಡಿಸಿ, ಸಂಘಕ್ಕೆಂದು ಕಾಯ್ದಿರಿಸಲಾಗಿದ್ದು, ಸದರಿ ಜಾಗದಲ್ಲಿ ಭಾರತೀಯ ವೈದ್ಯಕೀಯ ಸಂಘದ ವತಿಯಿಂದ, ಉಚಿತ ಆರೋಗ್ಯ ಶಿಬಿರಗಳನ್ನು ಹಾಗೂ ಇತರೆ ರಾಷ್ಟ್ರೀಯ ಆರೋಗ್ಯ ಕಾರ್ಯಗಳನ್ನು ಕೈಗೊಳ್ಳಲು ಹಾಗೂ ಸಂಘಕ್ಕೆ ಹಾಗೂ ಸದಸ್ಯರಿಗೆ ಅಒಇ ವೈದ್ಯಕೀಯ ಸಮ್ಮೇಳನಗಳನ್ನು ಮಾಡಲು ಅವಶ್ಯಕತೆ ಇದೆ.

ಕೋರೋನ ಮಹಾಮಾರಿಯಂತೆ ಮಾರಣಾಂತಿಕ ಕಾಯಿಲೆಗಳು ಬಂದಾಗ ಸದಸ್ಯೆರಿಗೆ, ಪ್ರತ್ಯೆಕಿಸಿ ಚಿಕಿತ್ಸೆ ನೀಡಲು ಅನುಕೂಲ ವಾಗುವಂತೆ ಜಮೀನಿನ ಅವಶ್ಯಕತೆ ಇರುವುದರಿಂದ ಸರ್ಕಾರಿ ಜಮೀನನ್ನು ಮಂಜೂರು ಮಾಡಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ
ಡಾ|| ಪಿ.ಟಿ. ವಿಜಯಕುಮರ್, ಕಾರ್ಯದರ್ಶಿ
ಡಾ|| ಕೆ.ಎಂ. ಬಸವರಾಜ್, ಡಾ.ಕೃಷ್ಣಮೂರ್ತಿ ಸೇರಿದಂತೆ ಇತರರು ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...