Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಂದು ಅಂತರಾಷ್ಟ್ರೀಯ ಯೋಗದಿನ : ಜನರಿಗೆ ರಾಜಕಾರಣಿಗಳ ಸಂದೇಶವೇನು..?

---Advertisement---

ಮನುಷ್ಯನಿಗೆ ಫಿಟ್ನೆಸ್ ಎಂಬುದು ಬಹಳ ಮುಖ್ಯ. ಆರೋಗ್ಯವಾಗಿರುವುದಕ್ಕೆ ಯಾವುದಾದರೊಂದು ರೀತಿಯ ವ್ಯಾಯಾಮದ ಅಗತ್ಯವಿದೆ. ಅದರಲ್ಲೂ ಯೋಗಾಭ್ಯಾಸ ಮಾಡಿದವರಂತು ಸದಾ ಆರೋಗ್ಯವಂತು ಚೆನ್ನಾಗಿಯೇ ಕಾಪಾಡಿಕೊಳ್ಳಬಹುದು. ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ. ಇದರ ಅಂಗವಾಗಿ ರಾಜಕಾರಣಿಗಳು ಯೋಗದ ಮಹತ್ವವನ್ನು ಸಾರಿದ್ದಾರೆ.

ಪ್ರಧಾನಿ ಮೋದಿ ಅವರು ಪ್ರತಿ ವರ್ಷ ಕೂಡ ಒಂದು ವಿಶೆಷ ಜಾಗಕ್ಕೆ ಹೋಗಿ ಯೋಗ ಮಾಡಿ, ಯೋಗದ ಮಹತ್ವವನ್ನು ತಿಳಿಸುತ್ತಾರೆ‌. ಈ ಬಾರಿ ಜಮ್ಮು ಕಾಶ್ಮೀರಕ್ಕೆ ತೆರಳಿದ್ದಾರೆ. ಇಡೀ ಜಗತ್ತಿನ ಒಳಿತಿಗಾಗಿ ಇರಿವ ಯೋಗವನ್ನು ಪ್ರಬಲ ವಿಷಯವಾಗಿ ಇಂದು ಜಗತ್ತು ನೋಡುತ್ತಿದೆ. ಭೂತಕಾಲದ ವಿಷಯಗಳನ್ನು ಬಿಟ್ಟು ಪ್ರಚಲಿತದಲ್ಲಿ ನೆಮ್ಮದಿಯಿಂದ, ಆರೋಗ್ಯಯುತವಾಗಿ ಹೇಗೆ ಬದುಕಬೇಕೆಂಬುದನ್ನು ಯೋಗ ನಮಗೆ ತೋರಿಸಿಕೊಟ್ಟಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಇನ್ನು ರಾಜ್ಯ ಸರ್ಕಾರದ ವತಿಯಿಂದ ಯೋಗೋತ್ಸವ ಕಾರ್ಯಕ್ರಮವನ್ನು ಆಚರಣೆ ಮಾಡಲಾಗಿದೆ. ಇದರಲ್ಲಿ ಡಿಕೆ ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು ಕೂಡ ಭಾಗಿಯಾಗಿದ್ದರು. ಈ ವೇಳೆ ಆರೋಗ್ಯ ಸುರಕ್ಷತೆಯ ಬಗ್ಗೆ ಮಾತನಾಡಿದ್ದಾರೆ. ಬಳ್ಳಾರಿಯಲ್ಲೂ ಯೋಗ ದಿನಾಚರಣೆಯನ್ನು ಆಚರಿಸಿದ್ದು, ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಿ ಯೋಗದ ಮಹತ್ವವನ್ನು ಸಾರಿದರು. ಜೊತೆಗೆ ಕನ್ನಡದ ಕಂಪನ್ನು ಅಲ್ಲಿಯೂ ಸಾರಿದರು.

ಇನ್ನು ದೆಹಲಿಯಲ್ಲಿ ಆಯೋಜನೆ ಮಾಡಿದ್ದ ಯೋಗ ದಿನಾಚರಣೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಭಾಗವಹಿಸಿದ್ದರು.ಈ ವೇಳೆ ಇಂದು ಯೋಗ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಮೊದಲ ಬಾರಿಗೆ ಯೋಗ ದಿನವನ್ನು ಮೋದಿ ಅವರು ಮೈಸೂರಿ‌ನ ಪ್ಯಾಲೇಸ್ ಗ್ರೌಂಡ್ ನಲ್ಲಿ ಆಚರಣೆ ಮಾಡಲಾಗಿತ್ತು. ವಿವಿಧ ಕಾಯಿಲೆಗಳಿಗೆ ಯೋಗ ಮುಕ್ತಿ ನೀಡುತ್ತದೆ. ಯೋಗ ಮಾಡಿ ಆರೋಗ್ಯದಿಂದ ಇರಬಹುದು ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment