Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

300ರ ಗಡಿದಾಟಲಿದೆ ಟಮೋಟೋ ಬೆಲೆ.. ಕಾರಣ ಏನು ಗೊತ್ತಾ..?

Facebook
Twitter
Telegram
WhatsApp

ಕಳೆದ ಕೆಲವು ದಿನಗಳಿಂದ ಟಮೋಟೋ ಬೆಲೆ ಗಗನಕ್ಕೇರಿದೆ. ಟಮೋಟೋ ಇಲ್ಲದೆ ಸಾಂಬಾರು ಮಾಡುವುದು ಕಷ್ಟ ಸಾಧ್ಯ. ಆದರೂ ಹಾಗೋ ಹೀಗೋ ಮನೆಯ ಹೆಣ್ಣು ಮಕ್ಕಳು ಎರಡು ಟಮೋಟೋ ಜಾಗಕ್ಕೆ ಒಂದನ್ನು ಹಾಕಿ, ಹುಣಸೆ ಹಣ್ಣನ್ನು ಬೆರೆಸಿ ಹೇಗೋ ಬ್ಯಾಲೆನ್ಸ್ ಮಾಡ್ತಾ ಇದ್ದಾರೆ. ಇಷ್ಟು ದಿನ ಆಯ್ತು. ಇನ್ನಾದರೂ ಟಮೋಟೋ ಬೆಲೆ ಕಡಿಮೆಯಾಗಬಹುದು ಎಂದು ಕಾಯುತ್ತಿದ್ದವರಿಗೆ ಮತ್ತಷ್ಟು ಏರಿಕೆಯಾಗುವ ಸೂಚನೆ ಸಿಕ್ಕಿದೆ.

ಅದು ಒಂದಲ್ಲ ಎರಡಲ್ಲ. 300ರ ಗಡಿದಾಟುವ ಸಾಧ್ಯತೆ ಇದೆ ಎನ್ನಲಾಗಿದೆ. ಈಗಾಗಲೇ 120 ರೂಪಾಯಿ ಟಮೋಟೋ ತೆಗೆದುಕೊಳ್ಳುವುದಕ್ಕೆ ಜನ ಕಣ್ಣು ಬಾಯಿ ಬಿಡುತ್ತಿದ್ದಾರೆ. ನ್ಯಾಷನಲ್ ಕಮಾಡಿಟಿ ಮ್ಯಾನೇಜ್‌ಮೆಂಟ್ ಸರ್ವಿಸಸ್ ಲಿಮಿಟೆಡ್‌ ಹೇಳುವ ಪ್ರಕಾರ ಇನ್ನು 2 ತಿಂಗಳ ಕಾಲ ಟಮೋಟೋ ಬೆಲೆ ಇಳಿಕೆಯಾಗುವುದಿಲ್ಲ. ಬದಲಿಗೆ ಏರಿಕೆಯಾಗಲಿದೆ ಎನ್ನಲಾಗಿದೆ.

ಈಗಾಗಲೇ ದೆಹಲಿ ಸುತ್ತ ಮುತ್ತಲಿನ ಪ್ರದೇಶದಲ್ಲಿ ಟಮೋಟೋ ಕೆಜಿಗೆ 250 – 300 ಆಗಿದೆ. ಈಗ ಕರ್ನಾಟಕದಲ್ಲೂ ಹೆಚ್ಚಾಗುವ ದಿನ ಹತ್ತಿರದಲ್ಲಿಯೇ ಇದೆ. ಟಮೋಟೋ ಬೆಳೆದಿರುವವರಂತು ಈ ವರ್ಷ ಕುಬೇರರಾಗಿದ್ದಾರೆ. ಉತ್ತಮ ಮಳೆಯಾಗದೆ ಇದ್ದಲ್ಲಿ, ಮಳೆಗಾಲದ ಆರಂಭದಲ್ಲಿ ಕೆಲವೊಂದು ತರಕಾರಿಗಳ ಬೆಲೆ ಗಗನಕ್ಕೇರುವುದು ಸಹಜ. ಆ ಸಮಯಕ್ಕೆ ತಕ್ಕನಾದ ತರಕಾರಿ ಬೆಳೆದವನೇ ಅದೃಷ್ಟವಂತನಾಗಿರುತ್ತಾನೆ. ಈಗ ಟಮೋಟೋ ಬೆಳೆಗಾರರ ಅದೃಷ್ಟ ಖುಲಾಯಿಸಿದಂತೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಛಾಯಾ ಟೈಲರ್ ರಮೇಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ನಗರದ ಲಕ್ಷ್ಮೀ ಬಜಾರ್‌ನಲ್ಲಿರುವ ಛಾಯಾ ಟೈಲರ್ ಅಂಗಡಿ ಮಾಲೀಕ ರಮೇಶ್ (52) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಸ್ವಗ್ರಾಮ ಹೊಸದುರ್ಗ

ಇಂದಿನಿಂದ ಹಾಸನಾಂಬೆಯ ದರ್ಶನ ಭಾಗ್ಯ : ಕ್ಯೂ ನಿಂತ ಭಕ್ತರು

  ಹಾಸನ: ವರ್ಷಕ್ಕೆ ಒಮ್ಮೆ ಬಾಗಿಲು ತೆಗೆಯುವ ದೇವಿ ಹಾಸನಾಂಬೆ. ಇದೀಗ ಮತ್ತೆ ಆ ದಿನ ಬಂದಿದೆ. ಹಾಸನಾಂಬೆಯ ಬಾಗಿಲು ತೆಗೆಯಲಾಗಿದೆ. ನಿನ್ನೆಯೇ ಹಾಸನಾಂಬೆಯ ಬಾಗಿಲು ತೆಗೆದಿದ್ದು, ಇಂದಿನಿಂದ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ರಾತ್ರಿಯಿಂದಾನೇ

ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು : ಛಲವಾದಿ ನಾರಾಯಣಸ್ವಾಮಿ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ಎಸ್ ಟಿ ಸೋಮಶೇಖರ್ ಬಿಜೆಪಿಯಿಂದ ಹೊರಗೆ ನಿಂತಿದ್ದಾರೆ. ಬಿಜೆಪಿ ಶಾಸಕರು ಯಾರೂ ಅಷ್ಟು ದಡ್ಡತನ ಮಾಡುವುದಿಲ್ಲ. ಈಗ ರಾಜ್ಯದಲ್ಲಿ ಮುಳುಗುತ್ತಿರುವ ಹಡಗು ಕಾಂಗ್ರೆಸ್ ಪಕ್ಷ ಎಂದು ಬಿಜೆಪಿ

error: Content is protected !!