Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನಾಳೆ ಚಿತ್ರಮಂದಿರದಲ್ಲಿ ‘ನಗುವಿನ ಹೂಗಳ ಮೇಲೆ’ : ಇಂದು ತೇಲಿ ಬಂತು ಮುದ್ದಾದ ಹಾಡು..!

---Advertisement---

ಬೆಂಗಳೂರು : ನಗುವಿನ ಹೂಗಳ ಮೇಲೆ.. ಕೇಳುವುದಕ್ಕೇನೆ ಟೈಟಲ್ ಎಷ್ಟು ಚೆಂದ ಎನಿಸುತ್ತದೆ ಅಲ್ವಾ. ಸಿನಿಮಾ ಕೂಡ ಮನಸ್ಸಿಗೆ ಅಷ್ಟೇ ಅಚ್ಚುಕಟ್ಟಾಗಿ ನಾಟುವಂತ ಫೀಲ್ ಕೊಡಲಿದೆ. ಈಗಾಗಲೇ ಸಿನಿಮಾದ ಟ್ರೇಲರ್, ಟೀಸರ್,‌ ಸಾಂಗ್ಸ್ ನೋಡಿದವರಿಗೆ ಅದರ ಅನುಭವವು ಖಂಡಿತ ಆಗಿರುತ್ತದೆ. ಟೈಟಲ್ ನಲ್ಲೇ ಗಮನ ಸೆಳೆಯುವ ನಗುವಿನ ಹೂಗಳ ಮೇಲೆ ಸಿನಿಮಾ ನಾಳೆ ಅಂದರೆ ಫೆಬ್ರವರಿ 9ಕ್ಕೆ ತೆರೆಗೆ ಬರುತ್ತಿದೆ. ವೆಂಕಟ್ ಭಾರಧ್ವಾಜ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಸಿನಿಮಾ, ಇಂದಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿರುವುದಂತು ಸುಳ್ಳಲ್ಲ.

ಸಿನಿಮಾ ನಾಳೆ ಬಿಡುಗಡೆಯಾಗುತ್ತಿದೆ. ಆದರೆ ಥಿಯೇಟರ್ ಗೆ ಬರುವುದಕ್ಕೂ ಮುನ್ನ ಪ್ರೇಕ್ಷಕರಿಗೆ ಒಂದಷ್ಟು ಖುಷಿಕೊಟ್ಟು, ಮನತಣಿಸಲು ಚಿತ್ರತಂಡ ನಿರ್ಧರಿಸಿದೆ. ಅದರ ಭಾಗವಾಗಿಯೇ ಹಾಡೊಂದನ್ನು ರಿಲೀಸ್ ಮಾಡಲಾಗಿದೆ. ಮುದ್ದಾದ ಹಾಡೊಂದನ್ನು ಚಿತ್ರತಂಡ ಬಿಡುಗಡೆಗೊಳಿಸಿದೆ. ಈಗಾಗಲೇ ನಗುವಿನ ಹೂಗಳ ಮೇಲೆ ಗಾಢ ನಿರೀಕ್ಷೆಗಳ ಇಬ್ಬನಿ ಮೂಡಿಕೊಂಡಿದೆ. ಅದನ್ನು ಮತ್ತಷ್ಟು ತೀವ್ರವಾಗಿಸುವ ನಿಟ್ಟಿನಲ್ಲಿ ಈ ಹಾಡು ಪರಿಣಾಮಕಾರಿಯಾಗಿ ಮೂಡಿಕೊಂಡಿದೆ. ಸದರಿ ಸನಿಮಾದಲ್ಲಿ ಪ್ರೇಮದ ನಾನಾ ಮಜಲುಗಳಿದ್ದಾವೆ. ಅದರಲ್ಲೊಂದು ಭಾವದ ಅಭಿವ್ಯಕ್ತಿಯೆಂಬಂತೆ ಸದರಿ ಹಾಡನ್ನು ರೂಪಿಸಿದಂತಿದೆ.

ಮುದ್ದು ಬೇಬಿ ಲವ್ ಯು ಬೇಬಿ ಅಂತ ಶುರುವಾಗುವ ಈ ಲವ್ ಫ್ರಾನ್ ಮೆಹತಾ ಸಂಗೀತ ಸ್ಪರ್ಶದೊಂದಿಗೆ ಮೂಡಿ ಬಂದಿದೆ. ಕಿರಣ್ ನಾಗರಾಜ್ ಸಾಹಿತ್ಯ ಮತ್ತು ರೋನಿ, ಮೇಘನಾ ಕಠಸಿರಿಯಲ್ಲಿ ಮುದ್ದಾಗಿ ರೂಪುಗೊಂಡಿರುವ ಈ ಹಾಡು ಫಲಿಸಿದ ಪ್ರೇಮದ ಎಲ್ಲ ಭಾವಗಳನ್ನೂ ಸಶಕ್ತವಾಗಿ ಹಿಡಿದಿಟ್ಟಂತೆ ಭಾಸವಾಗುತ್ತದೆ. ಜೀ ಮ್ಯೂಸಿಕ್ ಮೂಲಕ ಬಿಡುಗಡೆಗೊಂಡಿರುವ ಮುದ್ದು ಬೇಬಿ ಹಾಡು ಬಹು ಬೇಗನೆ ಸಂಗೀತ ಪ್ರಿಯರನ್ನು ಸೆಳೆಯುತ್ತಿದೆ.

ನಿರ್ದೇಶಕ ವೆಂಕಟ್ ಭಾರದ್ವಾಜ್ ಸಣ್ಣ ಸಣ್ಣ ವಿಚಾರಗಳನ್ನೂ ಗಮನದಲ್ಲಿಟ್ಟುಕೊಂಡು ಈ ಸಿನಿಮಾವನ್ನು ರೂಪಸಿದ್ದಾರೆ. ಅದರಲ್ಲಿಯೂ ಕಥೆಯ ಓಘಕ್ಕೆ ತಕ್ಕುದಾಗಿ ಹಾಡುಗಳನ್ನು ರೂಪಿಸಲು ಒಂದು ಅನವೇಷಣೆಯನ್ನೇ ನಡೆಸಿದ್ದರಂತೆ. ಅದರ ಭಾಗವಾಗಿ ಪಂಜಾಬ್ ಮೂಲದ ಪ್ರಸಿದ್ಧ ಸಂಗೀತ ನಿರ್ದೇಶಕ ಲವ್ ಫ್ರಾನ್ ಮೆಹತ ಮಾತ್ರವಲ್ಲದೇ, ಬೇರೆ ಬೇರೆ ರಾಜ್ಯಗಳ ಗಾಯಕರನ್ನೂ ಒಂದೆಡೆ ಕಲೆ ಹಾಕಿದ್ದಾರೆ.

ಇದು ಪರಿಶುದ್ಧ ಪ್ರೇಮ ಕಥನದ ಭೂಮಿಕೆಯಲ್ಲಿ ತೆರೆದುಕೊಳ್ಳುವ ಬದುಕಿಗೆ ಹತ್ತಿರವಾದ ಕಥನ. ಈ ಚಿತ್ರವನ್ನು ತೆಲುಗಿನ ಖ್ಯಾತ ನಿರ್ಮಾಪಕ ಕೆ.ಕೆ ರಾಧಾ ಮೋಹನ್ ಶ್ರೀ ಸತ್ಯಸಾಯಿ ಆಟ್ರ್ಸ್ ಬ್ಯಾನರಿನಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಅಭಿ ದಾಸ್ ಹಾಗೂ ಶರಣ್ಯಾ ಶೆಟ್ಟಿ ನಾಯಕ ನಾಯಕಿಯರಾಗಿ ನಟಿಸಿದ್ದಾರೆ. ರಾಜವಾಡಿ, ಆಶಾ ಸುಜಯ್, ಗಿರೀಶ್ ನಂಜಪ್ಪ, ಹರ್ಷಿತ್ ಗೌಡ, ಅಭಿಷೇಕ್ ಐಯಂಗಾರ್, ಹರೀಶ್ ಚೌಹಾಣ್, ಹರ್ಷ ಗೋ ಭಟ್ ಮುಂತಾದವರ ತಾರಾಗಣ ಈ ಚಿತ್ರದಲ್ಲಿದೆ. ಪ್ರಮೋದ್ ಭಾರತೀಯ ಛಾಯಾಗ್ರಹಣ, ಅಭಿಷೇಕ್ ಐಯಂಗಾರ್ ಸಂಭಾಷಣೆ, ಲವ್ ಫ್ರಾನ್ ಮೆಹತಾ ಸಂಗೀತ ನಿರ್ದೇಶನ, ಚಂದನ್ ಪಿ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment