ನವದೆಹಲಿ: ಗಾಂಧಿ ಜಯಂತಿಗಾಗಿ ಇಂದಿನಿಂದಾನೇ ತಯಾತಿ ನಡೆಯುತ್ತಿದೆ. ಈ ಬಾರಿಯೂ ಅರ್ಥ ಪೂರ್ಣವಾಗಿ ಗಾಂಧಿ ಜಯಂತಿ ಆಚರಿಸಲು ತೀರ್ಮಾನಿಸಲಾಗಿದೆ. ಅದಕ್ಕಾಗಿ ದೇಶದೆಲ್ಲೆಡೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಲ್ಲರ ಮೊಬೈಲ್ ನಲ್ಲೂ ಕಳೆದ ಒಂದು ವಾರದಿಂದ ಸ್ವಚ್ಛತಾ ಅಭಿಯಾನದ ಬಗ್ಗೆ ಅಲರ್ಟ್ ಮಾಡಲಾಗುತ್ತಿತ್ತು.
ನಾಳೆ ಗಾಂಧಿ ಜಯಂತಿ. ಗಾಂಧೀಜಿಯವರ 154ನೇ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಇಂದು ಸ್ವಚ್ಛತಾ ಅಭಿಯಾನ ಶುರುವಾಗಿದೆ. ದೇಶದ 6.4 ಲಕ್ಷ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದು ಬೆಳಗ್ಗೆಯೇ ಅಭಿಯಾನ ಆರಂಭವಾಗಿದ್ದು ಒಂದು ಗಂಟೆಗಳ ಕಾಲ ಸ್ವಚ್ಛತೆಯನ್ನು ಮಾಡಲಾಗುತ್ತದೆ.
ಅಂಗನವಾಡಿ, ಬಸ್ ನಿಲ್ದಾಣ, ಮಾರುಕಟ್ಟೆ, ಗೋಶಾಲೆಗಳ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಅಷ್ಟೆ ಅಲ್ಲ ಬಯಲು ಮುಕ್ತ ಶೌಚಾಲಯಕ್ಕೂ ಈ ಅಭಿಯಾನದಲ್ಲಿ ಕೂಜೋಡಿಸಲಾಗಿದೆ. ಕೇಂದ್ರ ಸರ್ಕಾರದ ಆದೇಶದಂತೆ ಇಂದು ಸ್ವಚ್ಛತಾ ಕಾರ್ಯ ನಡೆದಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















