ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ:ಫೆ.09: 2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಖರೀದಿಗೆ ಸಂಬಂಧಿಸಿದಂತೆ, ತಕ್ಷಣದಿಂದಲೇ ಖರೀದಿ ಪ್ರಕ್ರಿಯೆ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ.
ಕೇಂದ್ರ ಸರ್ಕಾರದ ಬೆಂಬಲ ಬೆಲೆ ರೂ.7,550/- ರ ಜೊತೆಗೆ ರಾಜ್ಯ ಸರ್ಕಾರದ ಪ್ರೋತಾಹ ಧನ ರೂ.450/- ಪ್ರತಿ ಕ್ವಿಂಟಾಲ್ ಗೆ, ಸೇರಿ ಒಟ್ಟು ರೂ.8,000/- ಪ್ರತಿ ಕ್ವಿಂಟಾಲ್ ರಂತೆ ತೊಗರಿ ಖರೀದಿಸಲು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ಕಳೆದ ಜನವರಿ ಮಾಹೆಯಲ್ಲಿ ಭರವಸೆ ನೀಡಿದ್ದರು. ಅದರಂತೆ ಮುಖ್ಯ ಮಂತ್ರಿಗಳು ಅನುಮೋದನೆ ನೀಡಿದ್ದು ಹಾಗೂ ಇಂದು ಆರ್ಥಿಕ ಇಲಾಖೆ ಸಹಮತಿ ನೀಡಲಾಗಿರುತ್ತದೆ. ಈ ಕುರಿತು ಸಂಬಂಧಿಸಿದ ಇಲಾಖೆಗೆ ತಕ್ಷಣದಿಂದ ಅಷ್ಠಾನಗೊಳಿಸಲು ಸೂಕ್ತ ನಿರ್ದೇಶನ ನೀಡಲಾಗಿದೆ.
ರಾಜ್ಯದ ಪ್ರಮುಖ ತೊಗರಿ ಬೆಳೆಯುವ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಚಿತ್ರದುರ್ಗ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಅಂದಾಜು 330 ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ಕ್ರಮ ವಹಿಸಲಾಗಿದೆ

ರೈತ ಬಾಂಧವರು ತಮ್ಮ ಹತ್ತಿರದ ಪಿಎಸಿಎಸ್, ಎಫ್ ಪಿ ಒ, ಟಿಎಪಿಸಿಎಂಎಸ್ ಗಳಿಗೆ ಭೇಟಿ ನೀಡಿ ನೊಂದಣಿ ಮಾಡಿಕೊಂಡು ಬೆಂಬಲ ಬೆಲೆ ಯೋಜನೆಯ ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹ ಧನದ ಸದುಪಯೋಗ ಪಡೆದುಕೊಳ್ಳಲು ಕೋರಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್