ಸಿಎಂ ಯೋಗಿ ಆದಿತ್ಯಾನಾಥ್ ಗೆ ಶಾಕ್ ನೀಡಿ ಎಸ್ಪಿ ಪಕ್ಷ ಸೇರಲಿದ್ದಾರೆ ಸಚಿವ, ಶಾಸಕರು..!

ಲಕ್ನೋ: ಉತ್ತರ ಪ್ರದೇಶ ಚುನಾವಣೆ ಹತ್ತಿರವಿರುವಾಗಲೇ ಪಕ್ಷದಲ್ಲಿ ಬದಲಾವಣೆ ಪರ್ವ ಶುರುವಾಗಿದೆ. ಬಿಜೆಪಿಯಿಂದ ಒಬ್ಬರು ಸಚಿವರು ಸೇರಿದಂತೆ ನಾಲ್ಕು ಜನ ಶಾಸಕರು ರಾಜೀನಾಮೆ‌ ನೀಡಿ, ಬಿಜೆಪಿ ಹಾಗೂ ಸಿಎಂ ಯೋಗಿ ಆದಿತ್ಯಾನಾಥ್ ಗೆ ಬಿಗ್ ಶಾಕ್ ನೀಡಿದ್ದಾರೆ.

ಸಚಿವ ಸ್ವಾಮಿ ಪ್ರಸಾದ್ ಮೌರ್ಯ ರಾಜೀನಾಮೆ ನೀಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಸ್ವಾಮಿ ಪ್ರಸಾದ್, ಬಿಜೆಪಿ ತೊರೆಯುತ್ತಿರುವ ಬಗ್ಗೆ ತಿಳಿಸಿದ್ದಾರೆ. ಭಿನ್ನ ಸಿದ್ಧಾಂತದ ಹೊರತಾಗಿಯೂ ಯೋಗಿ ಆದಿತ್ಯಾನಾಥ್ ಸಂಪುಟದಲ್ಲಿ ನಾನು ಸಮರ್ಪಣಾ ಮನೋಭಾವದಿಂದ ಸೇವೆ ಸಲ್ಲಿಸಿದ್ದೇನೆ. ಆದರೆ ದಲಿತರು, ರೈತರು, ನಿರುದ್ಯೋಗಿಗಳು, ಒಬಿಸಿಗಳು, ಡಣ್ಣ ಉದ್ಯಮಿಗಳ ಮೇಲೆ ಆಗುತ್ತಿರುವ ತೀವ್ರ ದಬ್ಬಾಳಿಕೆಯಿಂದ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ.

ಸ್ವಾಮಿ ಪ್ರಸಾದ್ 2016 ರಲ್ಲಿ ಮಾಯಾವತಿಯವರ ಬಿಎಸ್ಪಿ ಪಕ್ಷ ತೊರೆದು, ಬಿಜೆಪಿ ಸೇರಿದ್ದರು. ಸ್ವಾಮಿ ಪ್ರಸಾದ್ ಹಿಂದುಳಿದ ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಇದೀಗ ಬದಲಾವಣೆ ಬಯಸಿದ್ದು ಎಸ್ಪಿ ಪಕ್ಷ ಸೇರ್ಪಡೆಯಾಗಲಿದ್ದಾರೆ. ಸ್ವಾಮಿ ಪ್ರಸಾದ್ ಜೊತೆಗೆ ಆಪ್ತರೆಂದೆ ಗುರುತಿಸಿಕೊಂಡಿರುವ ರೋಷನ್ ಲಾ ವರ್ಮಾ, ಬ್ರಿಜೇಶ್ ಪ್ರಜಾಪತಿ, ಭಾಗ್ವತಿ ಸಾಗರ್, ವಿನಯ್ ಶಂಕ್ಯಾ ಸಹ ಪಕ್ಷ ತೊರೆಯುತ್ತಿದ್ದಾರೆ.

suddionenews

Recent Posts

ಕಬೀರಾನಂದಾಶ್ರಮಕ್ಕೆ ಯಾವುದೆ ಜಾತಿ, ಧರ್ಮ ಇಲ್ಲ, ಎಲ್ಲರೂ ಸಮಾನರು : ಡಾ.ಬಸವಕುಮಾರ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…

8 minutes ago

ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ : ವಿಶೇಷತೆ ಏನು ಗೊತ್ತಾ?

  ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…

45 minutes ago

ವಿಜಯೇಂದ್ರ ನೇತೃತ್ವದಲ್ಲಿಯೇ ತಾಲೂಕು, ಜಿಲ್ಲಾ ಪಂಚಾಯತಿಗೆ ಸ್ಪರ್ಧೆ : ರೇಣುಕಾಚಾರ್ಯ

    ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…

1 hour ago

ತುಮಕೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 24 , 27 ಹಾಗೂ 28ರಂದು ವಿದ್ಯುತ್ ವ್ಯತ್ಯಯ…!

  ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…

1 hour ago

ಭಾರತ vs ಪಾಕಿಸ್ತಾನ : 25 ವರ್ಷಗಳ ಹಳೆಯ ದಾಖಲೆ ಮುರಿದ ಕಿಂಗ್ ಕೊಹ್ಲಿ

    ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…

1 hour ago

ಮಕ್ಕಳ ಮನಸ್ಸು ಜಂಕ್ ಪುಡ್ ಕಡೆಗೆ ಜಾರದಂತೆ ಜಾಗೃತಿ ವಹಿಸಿ : ಡಾ. ಪೃಥ್ವೀಶ್

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 23 : ಮಕ್ಕಳ ಅರೋಗ್ಯದ ಬಗ್ಗೆ ಹೆಚ್ಚಿನ ಲಕ್ಷ್ಯವಹಿಸಿ ಜಂಕ್ ಪುಡ್ ಕಡೆಗೆ ಅವರ…

4 hours ago