ಸುದ್ದಿಒನ್, ಗುಬ್ಬಿ, ಆಗಸ್ಟ್.11 : ತಾಲೂಕಿನ ಸಿ ಎಸ್ ಪುರ ಹೋಬಳಿಯ ಮಣ್ಣೇಕುಪ್ಪೆ ಗ್ರಾಮದಲ್ಲಿ ಶ್ರೀ ಮಾರುತಿ ಕಲ್ಯಾಣ ಮಂಟಪ ಉದ್ಘಾಟನಾ ಮಹೋತ್ಸವಕ್ಕೆ ಭಾಗವಹಿಸಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮಾತನಾಡಿದರು.
ನೀರಾವರಿ ಯೋಜನೆಗಳು ಸಂಪೂರ್ಣಗೊಳ್ಳಬೇಕು.
ಭೂಮಿ ನಂಬಿ ಬದುಕುವ ರೈತರಿಗೆ ಮುಖ್ಯವಾಗಿ ನೀರನ್ನು ಒದಗಿಸಿ ಕೊಡುವ ಕೆಲಸವಾಗಬೇಕು.ನಿರಂತರವಾಗಿ ರೈತರ ಪರ ಹೋರಾಟಗಳು ನಡೆದಿವೆ.ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗದ ಅವಶ್ಯಕತೆ ಇದ್ದು. ಮಕ್ಕಳ ಉದ್ಯೋಗದ ನಿರೀಕ್ಷೆಗೆ ತಕ್ಕಂತೆ ಸರ್ಕಾರಗಳು ಕೆಲಸ ಮಾಡಲಾಗುತ್ತಿಲ್ಲ ಎಂದ ಅವರು,

ನರೇಂದ್ರ ಮೋದಿಯವರಿಗೆ ದೇವೇಗೌಡರ ಮೇಲೆ ಇರುವಂತ ಅಭಿಮಾನ ಮತ್ತು ನನ್ನ ಮೇಲಿರುವ ವಿಶ್ವಾಸಕ್ಕೆ ಜವಾಬ್ದಾರಿಯನ್ನು ನೀಡಿದ್ದಾರೆ. ನನಗೆ ಸಿಕ್ಕಿರುವ ಅವಕಾಶದಲ್ಲಿ ರೈತರ ಬದುಕನ್ನು ಸರಿಪಡಿಸುವುದಕ್ಕೆ ಮತ್ತು ಗ್ರಾಮೀಣ ಭಾಗದ ಜನರಿಗೆ ಉದ್ಯೋಗವನ್ನು ಒದಗಿಸಿಕೊಡುವ ಯೋಜನೆಗಳನ್ನು ರೂಪಿಸಲಾಗುವುದು.ಮುಂದಿನ ದಿನಗಳಲ್ಲಿ ತುಮಕೂರು ಮತ್ತು ಮಂಡ್ಯ ಭಾಗಗಳಲ್ಲಿ ಕೈಗಾರಿಕೆಗಳನ್ನು ಖಾಸಗಿ ಅವರಿಂದ ಸ್ಥಾಪಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಶಾಸಕರಾದ ಎಂ ಟಿ ಕೃಷ್ಣಪ್ಪ , ಸುರೇಶ್ ಗೌಡ, ಸುರೇಶ್ ಬಾಬು, ಮುಖಂಡರಾದ ಬಿಎಸ್ ನಾಗರಾಜು, ನಿಂಗಪ್ಪ, ವೆಂಕಟೇಶ್, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು…
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















