Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ಏಕಾಂಗಿಯಾಗಿ ಬಿಜೆಪಿ ಸೋಲಿಸಲು ಸಾಧ್ಯವಿಲ್ಲ : ಕಾಂಗ್ರೆಸ್ ನಾಯಕ ಈ ರೀತಿ ಯಾಕ್ ಹೇಳಿದ್ರು..?

Facebook
Twitter
Telegram
WhatsApp

 

ನವದೆಹಲಿ: 2023ರ ಕರ್ನಾಟಕ ವಿಧಾನಸಭಾ ಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದೆ. ಈ ಬಾರಿಯೂ ಗೆಲುವು ಕಂಡು ಅಧಿಕಾರ ಮುಂದುವರೆಸುತ್ತೇವೆ ಎಂಬ ವಿಶ್ವಾಸದಿಂದ ಬಿಜೆಪಿ ಇದ್ದರೆ, ಜನ ಬದಲಾವಣೆ ಬಯಸುತ್ತಿದ್ದಾರೆ. ಹೀಗಾಗಿ ಜನ ನಮ್ಮ ಕೈ ಹಿಡಿಯಲಿದ್ದಾರೆ ಎಂದು ಕಾಂಗ್ರೆಸ್ ನಂಬಿದೆ. ಆದ್ರೆ ಕಾಂಗ್ರೆಸ್ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಏಕಾಂಗಿಯಾಗಿ ಹೋರಾಟ ಕಷ್ಟ ಎಂದಿದ್ದಾರೆ.

2024ರ ಲೋಕಸಭಾ ಚುನಾವಣೆಯನ್ನು ಟಾರ್ಗೆಟ್ ಮಾಡಿರುವ ಕೆಸಿ ವೇಣುಗೋಪಾಲ್, ಚುನಾವಣೆಯಲ್ಲಿ ಪ್ರಧಾನಿ ಮೋದಿ ಸರ್ಕಾರವನ್ನು ಏಕಾಂಗಿಯಾಗಿ ಹೋರಾಡಿ ಗೆಲ್ಲುವುದು ಸುಲಭವಲ್ಲ. ಮತ ವಿಭಜನೆ ತಡೆಯಲು ವಿಪಕ್ಷಗಳು ಒಟ್ಟಾಗುವುದು ಅನಿವಾರ್ಯ ಎಂದಿದ್ದಾರೆ. ಕಾಂಗ್ರೆಸ್ ಎಲ್ಲಾ ಹಂತಗಳಲ್ಲಿ ಹೋರಾಡುತ್ತದೆ. ಆದರೆ ಪ್ರಜಾಪ್ರಭುತ್ವ ವಿರೋಧಿ, ಅರ್ವಾಧಿಕಾರಿಗಳ ವಿರೋಧ ಹೋರಾಡಬೇಕಾದರೆ ಎಲ್ಲಾ ಸರ್ವಪಕ್ಷಗಳ ಅಗತ್ಯವೂ ಬೇಕಾಗಿದೆ ಎಂದಿದ್ದಾರೆ.

ಸರ್ವಾಧಿಕಾರಿ ಸರ್ಕಾರದ ವಿರುದ್ಧ ಹೋರಾಡುವ ದೊಡ್ಡ ನಿರ್ಧಾರವನ್ನು ಕಾಂಗ್ರೆಸ್ ತೀರ್ಮಾನ ತೆಗೆದುಕೊಂಡಿದೆ. ಭಾರತ್ ಜೋಡೋ ಯಾತ್ರೆ ಕಾಂಗ್ರೆಸ್ ನಾಯಕರಲ್ಲಿ ಹೊಸ ಚೈತನ್ಯ ತುಂಬಿದೆ. ದೇಶದಲ್ಲಿ ತುರ್ತು ಪರಿಸ್ಥಿತಿಯಂತ ಸನ್ನಿವೇಶ ನಿರ್ಮಾಣವಾಗಿದೆ. ಬಿಜೆಪಿಯನ್ನು ಹೊರದಬ್ಬುವ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಾರುಕಟ್ಟೆಗೆ ಬಂತು ನ್ಯಾನೋ ಎಲೆಕ್ಟ್ರಾನಿಕ್ ಕಾರು : ಏನಿಲ್ಲಾ ವಿಶೇಷತೆ ಇದೆ ಗೊತ್ತಾ..?

ಎಲೆಕ್ಟ್ರಾನಿಕ್ ಬೈಕ್, ಕಾರುಗಳಿಗೆ ಭಾರತದಲ್ಲಿ ಸಿಕ್ಕಪಟ್ಟೆ ಡಿಮ್ಯಾಂಡ್ ಇದೆ. ಪೆಟ್ರೋಲ್ ದರ ಏರಿಕೆಯಾದ ಬೆನ್ನಲ್ಲೇ ಜನ ಎಲೆಕ್ಟ್ರಾನಿಕ್ ಮೊರೆ ಹೋಗುತ್ತಿದ್ದಾರೆ‌.‌ಇದೇ ಕಾರಣಕ್ಕಾಗಿಯೇ ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆಯೂ ಹೆಚ್ಚಳವಾಗುತ್ತಿದೆ. ಇದೀಗ ಭಾರತಕ್ಕೆ ನ್ಯಾನೋ ಎಲೆಕ್ಟ್ರಾನಿಕ್ ಕಾರು

ಬರ, ಬೆಳೆ ನಾಶದಿಂದ ಕಂಗೆಟ್ಟ ರೈತರ ಕಣ್ಣಲ್ಲಿ ನೀರು ತರಿಸಬಾರದು : ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಕೇಂದ್ರ ಸರ್ಕಾರದಿಂದ ಬರ ಪರಿಹಾರದ ಹಣ ಬಿಡುಗಡೆಯಾದರೂ, ಕೆಲವು ಬ್ಯಾಂಕ್ ಗಳು ಅದನ್ನ ಸಾಲದ ಮೊತ್ತಕ್ಕೆ ವಜಾ ಮಾಡಿಕೊಳ್ಳುತ್ತಿವೆ. ಯಾದಗಿರಿಯಲ್ಲಿ ಇಂಥದ್ದೊಂದು ಘಟನೆ ನಡೆದಿದೆ. ಈ ಬೆಳವಣಿಗೆ ರೈತರಿಗೂ ಆತಂಕ ತಂದೊಡ್ಡಿದೆ. ಬೆಳೆನಾಶದ

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ: ಬಿಜೆಪಿಯ ಪ್ರೀತಂಗೌಡ ಆಪ್ತರ‌ ಮನೆಯಲ್ಲಿ 10 ಪೆನ್ ಡ್ರೈವ್ ಪತ್ತೆ..!

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಸದ್ಯ ಹಾಸನದಲ್ಲಿ ತಪಾಸಣೆ ನಡೆಸುತ್ತಿದ್ದು, ಪ್ರೀತಂಗೌಡ ಆಪ್ತರ ಮನೆಯಲ್ಲಿ ತಪಾಸಣೆ ನಡೆಸಲಾಗಿದೆ. ಈ ವೇಳೆ ಹತ್ತು ಪೆನ್ ಡ್ರೈವ್

error: Content is protected !!