Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲಕ್ಷ್ಮೀ ಹೆಬ್ಬಾಳ್ಕರ್ ಫುಲ್ ಭಾಷಣ ಕೇಳಲು ಆಗಿಲ್ಲ : ರಮೇಶ್ ಜಾರಕಿಹೊಳಿ..!

Facebook
Twitter
Telegram
WhatsApp

 

ಬೆಳಗಾವಿ: ಜಿಲ್ಲೆಯಲ್ಲಿ ಸದ್ಯ ಶಿವಾಜಿ ಪ್ರತಿಮೆಯ ವಿಚಾರವೇ ರಾಜಕೀಯದ ಸರಕಾಗಿದೆ. ಇದಕ್ಕಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಕಿತ್ತಾಡುತ್ತಿದ್ದಾರೆ. ಮರಾಠಿಗರು ಹೆಚ್ಚಾಗಿರುವ ಹಿನ್ನೆಲೆ ಅವರ ಮನವೊಲೈಕೆ ಮಾಡಿ, ವೋಟ್ ಪಡೆಯಲು ಹೊರಟಿರೋ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ರಮೇಶ್ ಜಾರಕಿಹೊಳಿ ಸದಾ ಕಿತ್ತಾಡಿಕೊಂಡೆ ಇರುತ್ತಾರೆ. ಈಗ ಶಿವಾಜಿ ಪ್ರತಿಮೆಯ ವಿಚಾರಕ್ಕೂ ಅದೇ ಆಗಿದೆ.

ರಾಜಹಂಸಗಢದಲ್ಲಿ ನಿರ್ಮಾಣವಾಗಿದ್ದ ಶಿವಾಜಿ ಪ್ರತಿಮೆ ಇಬ್ಬರ ಪ್ರತಿಷ್ಠೆಗೆ ಕಾರಣವಾಗಿತ್ತು. ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ರಮೇಶ್ ಜಾರಕಿಹೊಳಿ ಒಬ್ಬರು ಪ್ರತಿಮೆ ಅನಾವರಣಕ್ಕೆ ಪಣ ತೊಟ್ಟಿ, ಎರಡು ಬಾರಿ ಉದ್ಘಾಟನೆ ಮಾಡಿದ್ದಾರೆ. ಮಾರ್ಚ್ 5ರಂದು ಸಿಎಂ ಬೊಮ್ಮಾಯಿ ಅವರು ಪ್ರತಿಮೆ ಅನಾವರಣ ಮಾಡಿ ಹೋಗಿದ್ದರೆ, ಮಾರ್ಚ್ 7ರಂದು ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಅನಾವರಣವಾಗಿದೆ.

ಈ ಸಂಬಂಧ ರಮೇಶ್ ಜಾರಕಿಹೊಳಿ ಕಿಡಿಕಾರಿದ್ದು, ರಾಜ್ಯದ ಸಿಎಂ ಲೋಕಾರ್ಪಣೆ ಮಾಡಿ ಹೋಗಿದ್ದಾರೆ ತಾನೆ. ಒಬ್ಬ ಶಾಸಕಿಯಾಗಿ ಜವಬ್ದಾರಿ ಇರಬೇಕು. ಮತ್ತೊಮ್ಮೆ ಲೋಕಾರ್ಪಣೆ ಮಾಡುವಂತದ್ದು ಏನಿತ್ತು. ಶಾಸಕಿ ಎಂಬ ಸೊಕ್ಕು ತೋರಿಸಿದರೆ ಜನರೇ ಅದ್ಕೆ ಉತ್ತರ ನೀಡುತ್ತಾರೆ. ಅದು ಸರ್ಕಾರಿ ಸಮಾವೇಶನಾ ಅಥವಾ ಕಾಂಗ್ರೆಸ್ ಸಮಾವೇಶನಾ ಅಂತ ಜನ ನಿರ್ಧಾರ ಮಾಡಬೇಕು ಎಂದಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್ ಅವರ ಭಾಷಣ ಫುಲ್ ಕೇಳಿಲ್ಲ. ಆದ್ರೆ ಒಂದೆರಡು ಮಾತು ಕೇಳಿದ್ದೀನಿ. ಸಿಎಂ ಅವರನ್ನು ತಪ್ಪು ಮಾಹಿತಿ ನೀಡಿ ಶಿವಾಜಿ ಪ್ರತಿಮೆ ಉದ್ಘಾಟನೆಗೆ ಕರೆದುಕೊಂಡು ಬಂದಿದ್ದೀನಿ ಅಂತ ಹೇಳಿದ್ದಾರೆ. ಅಲ್ಲ ಶಾಸಕಿ ಎಷ್ಟು ಮೂರ್ಖರಿರಬೇಕು ಎಂಬುದು ಇದರಿಂದಾನೆ ಅರ್ಥವಾಗುತ್ತೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!