Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

3 ದಿನಗಳ ಹಿಂದೆ ಆಕ್ಸಿಡೆಂಟ್ : ಇಂದು ಹಿರಿಯ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ..!

Facebook
Twitter
Telegram
WhatsApp

ಬೆಂಗಳೂರು: ಮೂರು ದಿನಗಳ ಹಿಂದೆ ಕಾರಿನಲ್ಲಿ ಹೋಗುವಾಗ ಆಗಿದ್ದ ಆಕ್ಸಿಡೆಂಟ್‌ನಿಂದಾಗಿ ಇಂದು ಹಿರಿಯ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಅವರನ್ನ ಪ್ರಶಾಂತ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸದ್ಯ ಐಸಿಯೂನಲ್ಲಿ ಚಿಕಿತ್ಸೆ ಮುಂದುವರೆಸಿದ್ದಾರೆ. ಆಕ್ಸಿಡೆಂಟ್ ನಲ್ಲಿ ತಲೆಗೆ ಪೆಟ್ಟು ಬಿದ್ದ ಕಾರಣ ಬ್ರೈನ್ ಬಲವಾಗಿ ಹೊಡೆತ ಬಿದ್ದಿದೆ. ಮೆದುಳಿನ ರಕ್ತಸ್ರಾವ ಉಂಟಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಕ್ಸಿಡೆಂಟ್ ಆದ ಬಳಿಕ ಮನೆಯಲ್ಲೆರ ಚಿಕಿತ್ಸೆ ಮುಂದುವರೆಸಿದ್ದರಂತೆ. ಪ್ರತಿದಿನ ಪೂಜೆ ಮಾಡುವಂತೆ ರಾತ್ರಿ ಅಯ್ಯಪ್ಪನ ಪೂಜೆ ಮಾಡಲು ದೇವರ ಕೋಣೆಗೆ ಹೋದಾಗ ಈ ವೇಳೆ ರೂಂ ನಲ್ಲೆ ಕುಸಿದು ಬಿದ್ದಿದ್ದರಂತೆ. ಆಗಲೇ ಆಸ್ಪತ್ರೆಗೆ ಕರೆದುಕೊಂಡು ಬಂದು ಎಲ್ಲಾ ಚೆಕಪ್ ಮಾಡಿಸಿದಾಗ ಮೆದುಳಿನಲ್ಲಿ ರಕ್ತಸ್ರಾವವಾಗಿದೆ ಎಂದಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿರೋ ಕಾರಣ ಆಪರೇಷನ್ ಕೂಡ ಮಾಡೋಕೆ ಆಗಲ್ಲ. ಹೀಗಾಗಿ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರ ಪುತ್ರ ತಿಳಿಸಿದ್ದಾರೆ.

ಇನ್ನು ತಂದೆಯವರಿಗೆ ವಯಸ್ಸಾಗಿದೆ. ಎಲ್ಲವನ್ನು ಆ ದೇವರ ಮೇಲೆ ಬಿಟ್ಟಿದ್ದೀವಿ. ಪವಾಡ ನಡೆದರೂ ನಡೆಯಬಹುದು. ಅವರು ಆರೋಗ್ಯವಾಗಿಯೇ ಇದ್ದರು ಆದರೆ ಮನೆಯಲ್ಲೆ ಬಿದ್ದ ಕಾರಣ ಹೀಗಾಗಿದೆ. ಕಾರ್ಯಕ್ರಮಗಳಲ್ಲಿ ಭಾಗಿಯಾಗ್ತಾ ಇದ್ರು. ಈ ಒತ್ತಡಗಳ ನಡುವೆ ಸರಿಯಾಗಿ ಊಟ, ತಿಂಡಿ ಮಾಡ್ತಾ ಇರ್ಲಿಲ್ಲ. 8 ರಂದು ಶಬರಿಮಲೆಗೂ ಹೋಗುವ ಫ್ಲ್ಯಾನ್ ನಲ್ಲಿದ್ರು.‌ ಆದ್ರೆ ಈಗ ಈ ರೀತಿ ಆಗಿದೆ ಎಂದು ಅವರ ಪುತ್ರ ಲಕ್ಷ್ಮೀಶ್ ಮಾಹಿತಿ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತ್ಯವನ್ನು ಓದುವುದು, ಹಾಡುವುದು ಉತ್ತಮ ಹವ್ಯಾಸ : ಬಿ.ಎ.ಸೀತಾರಾಂ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ಹಾಡುಗಾರಿಕೆಯಂತಹ ಉತ್ತಮ ಹವ್ಯಾಸಗಳನ್ನು ಯುವಕರು ಬೆಳೆಸಿಕೊಳ್ಳಬೇಕು ಎಂದು ದಾವಣಗೆರೆ ಜಿಲ್ಲಾಸ್ಪತ್ರೆಯ ನಿವೃತ್ತ ನೇತ್ರತಜ್ಞ ಬಿ.ಎ.ಸೀತಾರಾಂ ಹೇಳಿದ್ದಾರೆ. ಅವರು ಭಾನುವಾರ ನಗರದ ಸ್ಕೌಟ್ ಮತ್ತು ಗೈಡ್ ಭವನದಲ್ಲಿ ಏರ್ಪಡಿಸಿದ್ದ

ಚನ್ನಪಟ್ಟಣ ಗೆಲುವಿನ ಶುಭ ಸೂಚನೆ ನೀಡಿದಳಾ ಹಾಸನಾಂಬೆ ತಾಯಿ : ಕುಮಾರಸ್ವಾಮಿ ದೇವರ ಮುಂದೆ ನಿಂತಾಗ ಆಗಿದ್ದೇನು..?

ಹಾಸನ: ಈಗಾಗಲೇ ಹಾಸನಾಂಬೆಯ ದರ್ಶನ ಆರಂಭವಾಗಿದೆ. ಹತ್ತು ದಿನಗಳು ಮಾತ್ರ ತಾಯಿ ದರ್ಶನ ಭಾಗ್ಯಾ ಕೊಡುತ್ತಾಳೆ. ಈ ಹತ್ತು ದಿನಗಳ ಕಾಲ ರಾಜಕಾರಣಿಗಳು, ಸಾರ್ವಜನಿಕರು ಎಲ್ಲರೂ ದರ್ಶನ ಪಡೆಯಲು ಕ್ಯೂ ನಿಂತಿರುತ್ತಾರೆ. ಇಂದು ಕೇಂದ್ರ

ಊಟದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗ..!

ಹಿರಿಯೂರು : ಕ್ಷುಲ್ಲಕ ಕಾರಣಕ್ಕೆ ನಡುವೆ ಜಗಳವಾಗಿದ್ದು, ಈ ಜಗಳದಿಂದ ತಂದೆಯ ಕೊಲೆಯಾಗಿರುವ ಘಟನೆ ಕುಂದಲಗುರ ಗ್ರಾಮದಲ್ಲಿ ನಡೆದಿದೆ. 50 ವರ್ಷದ ರಂಗಸ್ವಾಮಿ ಮೃತ ದುರ್ದೈವಿಯಾಗಿದ್ದಾರೆ. ಕೇವಲ ಊಟದ ವಿಚಾರಕ್ಕೆ ತಂದೆ ಮಗನ ನಡುವೆ

error: Content is protected !!