Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

3 ದಿನಗಳ ಹಿಂದೆ ಆಕ್ಸಿಡೆಂಟ್ : ಇಂದು ಹಿರಿಯ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ..!

Facebook
Twitter
Telegram
WhatsApp

ಬೆಂಗಳೂರು: ಮೂರು ದಿನಗಳ ಹಿಂದೆ ಕಾರಿನಲ್ಲಿ ಹೋಗುವಾಗ ಆಗಿದ್ದ ಆಕ್ಸಿಡೆಂಟ್‌ನಿಂದಾಗಿ ಇಂದು ಹಿರಿಯ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಅವರನ್ನ ಪ್ರಶಾಂತ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸದ್ಯ ಐಸಿಯೂನಲ್ಲಿ ಚಿಕಿತ್ಸೆ ಮುಂದುವರೆಸಿದ್ದಾರೆ. ಆಕ್ಸಿಡೆಂಟ್ ನಲ್ಲಿ ತಲೆಗೆ ಪೆಟ್ಟು ಬಿದ್ದ ಕಾರಣ ಬ್ರೈನ್ ಬಲವಾಗಿ ಹೊಡೆತ ಬಿದ್ದಿದೆ. ಮೆದುಳಿನ ರಕ್ತಸ್ರಾವ ಉಂಟಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಕ್ಸಿಡೆಂಟ್ ಆದ ಬಳಿಕ ಮನೆಯಲ್ಲೆರ ಚಿಕಿತ್ಸೆ ಮುಂದುವರೆಸಿದ್ದರಂತೆ. ಪ್ರತಿದಿನ ಪೂಜೆ ಮಾಡುವಂತೆ ರಾತ್ರಿ ಅಯ್ಯಪ್ಪನ ಪೂಜೆ ಮಾಡಲು ದೇವರ ಕೋಣೆಗೆ ಹೋದಾಗ ಈ ವೇಳೆ ರೂಂ ನಲ್ಲೆ ಕುಸಿದು ಬಿದ್ದಿದ್ದರಂತೆ. ಆಗಲೇ ಆಸ್ಪತ್ರೆಗೆ ಕರೆದುಕೊಂಡು ಬಂದು ಎಲ್ಲಾ ಚೆಕಪ್ ಮಾಡಿಸಿದಾಗ ಮೆದುಳಿನಲ್ಲಿ ರಕ್ತಸ್ರಾವವಾಗಿದೆ ಎಂದಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿರೋ ಕಾರಣ ಆಪರೇಷನ್ ಕೂಡ ಮಾಡೋಕೆ ಆಗಲ್ಲ. ಹೀಗಾಗಿ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರ ಪುತ್ರ ತಿಳಿಸಿದ್ದಾರೆ.

ಇನ್ನು ತಂದೆಯವರಿಗೆ ವಯಸ್ಸಾಗಿದೆ. ಎಲ್ಲವನ್ನು ಆ ದೇವರ ಮೇಲೆ ಬಿಟ್ಟಿದ್ದೀವಿ. ಪವಾಡ ನಡೆದರೂ ನಡೆಯಬಹುದು. ಅವರು ಆರೋಗ್ಯವಾಗಿಯೇ ಇದ್ದರು ಆದರೆ ಮನೆಯಲ್ಲೆ ಬಿದ್ದ ಕಾರಣ ಹೀಗಾಗಿದೆ. ಕಾರ್ಯಕ್ರಮಗಳಲ್ಲಿ ಭಾಗಿಯಾಗ್ತಾ ಇದ್ರು. ಈ ಒತ್ತಡಗಳ ನಡುವೆ ಸರಿಯಾಗಿ ಊಟ, ತಿಂಡಿ ಮಾಡ್ತಾ ಇರ್ಲಿಲ್ಲ. 8 ರಂದು ಶಬರಿಮಲೆಗೂ ಹೋಗುವ ಫ್ಲ್ಯಾನ್ ನಲ್ಲಿದ್ರು.‌ ಆದ್ರೆ ಈಗ ಈ ರೀತಿ ಆಗಿದೆ ಎಂದು ಅವರ ಪುತ್ರ ಲಕ್ಷ್ಮೀಶ್ ಮಾಹಿತಿ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Acidity : ಅಸಿಡಿಟಿಯಿಂದ ಬಳಲುತ್ತಿದ್ದೀರಾ ? ಇದನ್ನು ದಿನಕ್ಕೆ ಎರಡು ಬಾರಿ ಮಾಡಿ..!

  ಸುದ್ದಿಒನ್ : ಕೆಲವರು ಸ್ವಲ್ಪ ತಿಂದ ನಂತರ ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಾರೆ. ಇದು ದೇಹದ ಅಸ್ವಸ್ಥತೆ ಮತ್ತು ಎದೆಯುರಿ ಉಂಟುಮಾಡುತ್ತದೆ. ಈ ಹಠಾತ್ ಸಮಸ್ಯೆಯಿಂದ ಪರಿಹಾರ ಪಡೆಯಲು ಈ ಕೆಳಗಿನ ಮನೆಮದ್ದುಗಳನ್ನು ಪ್ರಯತ್ನಿಸಿ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ, ಶನಿವಾರ- ರಾಶಿ ಭವಿಷ್ಯ ಅಕ್ಟೋಬರ್-5,2024 ಸೂರ್ಯೋದಯ: 06:10, ಸೂರ್ಯಾಸ್ತ : 05:58 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿನ್ ಅಯಣ ಶರದ

ಚಿತ್ರದುರ್ಗ | ಪುಷ್ಪಾವತಿ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ನಗರದ ಬಸವೇಶ್ವರ ನಗರ ನಿವಾಸಿ ಪುಷ್ಪಾವತಿ (69 ವರ್ಷ) ಇಂದು ಸಂಜೆ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ

error: Content is protected !!