Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಕ್ಕಳ ಡೇ-ಕೇರ್ ಸೆಂಟರ್‌ನಲ್ಲಿ 24 ಮಕ್ಕಳು ಸೇರಿದಂತೆ 34 ಮಂದಿಯ ಮಾರಣಹೋಮ

Facebook
Twitter
Telegram
WhatsApp

 

ಸುದ್ದಿಒನ್ ವೆಬ್ ಡೆಸ್ಕ್

ಥಾಯ್ಲೆಂಡ್‌ನ ಈಶಾನ್ಯ ಪ್ರಾಂತ್ಯದ ನೊಂಗ್ಬುವಾ ಲ್ಯಾಂಫು ಪಟ್ಟಣದ ಮಕ್ಕಳ ಡೇ-ಕೇರ್ ಸೆಂಟರ್‌ನಲ್ಲಿ (ನರ್ಸರಿ) ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಮಕ್ಕಳು ಸೇರಿದಂತೆ ಕನಿಷ್ಠ 36 ಜನರು ಸಾವನ್ನಪ್ಪಿದ್ದಾರೆ ಮತ್ತು ಬಂದೂಕು ಧಾರಿ ಸ್ವತಃ ಗುಂಡ ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ.

ಮೂಲಗಳ ಪ್ರಕಾರ, ಬಂದೂಕುಧಾರಿ ಮಾಜಿ ಪೊಲೀಸ್ ಅಧಿಕಾರಿ
34 ವರ್ಷ ವಯಸ್ಸಿನ ಮಾಜಿ ಅಧಿಕಾರಿಯನ್ನು ಜೂನ್‌ನಲ್ಲಿ ಮಾದಕವಸ್ತು ಸೇವನೆಗಾಗಿ ವಜಾಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಲಿಯಾದವರಲ್ಲಿ 24 ಮಕ್ಕಳು ಸೇರಿದಂತೆ ಕನಿಷ್ಠ 34 ಮಂದಿ ಸತ್ತಿದ್ದಾರೆ ಆದರೆ ವಿವರಗಳು ಇನ್ನೂ ತಿಳಿಯಬೇಕಿದೆ ಎಂದು ಉಪ ಪೊಲೀಸ್ ವಕ್ತಾರ ಅರ್ಚನ್ ಕ್ರೈಟಾಂಗ್ ತಿಳಿಸಿದರು. ಘಟನೆಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ.

ಅಂತರ್ಜಾಲದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಸಂತ್ರಸ್ತರ ಕುಟುಂಬಗಳು ತಮ್ಮ ಪ್ರೀತಿಪಾತ್ರರ ಸಾವಿನಿಂದ ಶೋಕಿಸುತ್ತಿರುವುದನ್ನು ಕಾಣಬಹುದು. ಕೆಲವರು ಗಾಯಗೊಂಡವರನ್ನು ಆಂಬ್ಯುಲೆನ್ಸ್‌ಗೆ ಕರೆದೊಯ್ಯುವುದನ್ನು ಕಾಣಬಹುದು.

ಶಂಕಿತ ಗುಂಡಿಗೆ ಬಲಿಯಾದವರಲ್ಲಿ 22 ಮಕ್ಕಳಿದ್ದರು.  ಬಂದೂಕುಧಾರಿ ಊಟದ ಸಮಯದಲ್ಲಿ ಬಂದಾಗ ಸುಮಾರು 30 ಮಕ್ಕಳು ಕೇಂದ್ರದಲ್ಲಿದ್ದರು.ಎಂಟು ತಿಂಗಳ ಗರ್ಭಿಣಿಯಾಗಿದ್ದ ಶಿಕ್ಷಕಿ ಸೇರಿದಂತೆ ನಾಲ್ಕೈದು ಸಿಬ್ಬಂದಿಗೆ ವ್ಯಕ್ತಿ ಮೊದಲು ಗುಂಡು ಹಾರಿಸಿದ್ದಾನೆ.‌ ಮೊದಲಿಗೆ ಇದು ಪಟಾಕಿ ಎಂದು ಜನರು ಭಾವಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾದ ವೀಡಿಯೊಗಳು ಈಶಾನ್ಯ ಪ್ರಾಂತ್ಯದ ನೋಂಗ್ ಬುವಾ ಲ್ಯಾಂಫುವಿನ ಉತೈ ಸಾವನ್ ಪಟ್ಟಣದ ಮಧ್ಯಭಾಗದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿರುವ ಮಕ್ಕಳ ದೇಹಗಳನ್ನು ನೋಡಬಹುದಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Acidity : ಅಸಿಡಿಟಿಯಿಂದ ಬಳಲುತ್ತಿದ್ದೀರಾ ? ಇದನ್ನು ದಿನಕ್ಕೆ ಎರಡು ಬಾರಿ ಮಾಡಿ..!

  ಸುದ್ದಿಒನ್ : ಕೆಲವರು ಸ್ವಲ್ಪ ತಿಂದ ನಂತರ ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಾರೆ. ಇದು ದೇಹದ ಅಸ್ವಸ್ಥತೆ ಮತ್ತು ಎದೆಯುರಿ ಉಂಟುಮಾಡುತ್ತದೆ. ಈ ಹಠಾತ್ ಸಮಸ್ಯೆಯಿಂದ ಪರಿಹಾರ ಪಡೆಯಲು ಈ ಕೆಳಗಿನ ಮನೆಮದ್ದುಗಳನ್ನು ಪ್ರಯತ್ನಿಸಿ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ, ಶನಿವಾರ- ರಾಶಿ ಭವಿಷ್ಯ ಅಕ್ಟೋಬರ್-5,2024 ಸೂರ್ಯೋದಯ: 06:10, ಸೂರ್ಯಾಸ್ತ : 05:58 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿನ್ ಅಯಣ ಶರದ

ಚಿತ್ರದುರ್ಗ | ಪುಷ್ಪಾವತಿ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ನಗರದ ಬಸವೇಶ್ವರ ನಗರ ನಿವಾಸಿ ಪುಷ್ಪಾವತಿ (69 ವರ್ಷ) ಇಂದು ಸಂಜೆ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ

error: Content is protected !!