Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ 60 ಕೋಟಿ ಕಾರಣ : ಡೆತ್ ನೋಟ್ ನಲ್ಲಿ ಇದ್ದಿದ್ದು ಏನು..?

Facebook
Twitter
Telegram
WhatsApp

ಬೆಂಗಳೂರು: ಸಿನಿಮಾ ನಿರ್ಮಾಣದ ಜೊತೆ ಜೊತೆಗೆ ಹಲವು ಉದ್ಯಮಗಳನ್ನು ಮಾಡುತ್ತಿದ್ದ ಸೌಂದರ್ಯ ಜಗದೀಶ್ ಕಳೆದ ಕೆಲವು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಇದೀಗ ಅವರ ಸಾವಿಗೆ ಕಾರಣವೇನು ಎಂಬುದು ತಿಳಿದು ಬಂದಿದ್ದು, ಡೆತ್ ನೋಟ್ ಕೂಡ ಪತ್ತೆಯಾಗಿದೆ.

ಸೌಂದರ್ಯ ಜಗದೀಶ್ ಮನೆಯಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಆ ಡೆತ್ ನೋಟ್ ನಲ್ಲಿ ನಷ್ಟದ ವಿಚಾರ ಪತ್ತೆಯಾಗಿದೆ. ಈ ಡೆತ್ ನೋಟ್ ಆಧರಿಸಿ ಪೊಲೀಸರು ಕೂಡ ತನಿಖೆ ಕೈಗೊಂಡಿದ್ದರು. ಇದೀಗ ಸೌಂದರ್ಯ ಜಗದೀಶ್ ಆತ್ಮಹತ್ಯೆ ಕೇಸ್ ನಲ್ಲಿ ಮೂವರ ಮೇಲೆ ಎಫ್ಐಆರ್ ಕೂಡ ದಾಖಲಾಗಿದೆ. ಸೌಂದರ್ಯ ಜಗದೀಶ್ ತನ್ನ ಬಿಸಿನೆಸ್ ಲಾಸ್ ಬಗ್ಗೆ ಆ ಡೆತ್ ನೋಟ್ ನಲ್ಲಿ ನಮೂದಿಸಿದ್ದರು.

ಜೆಟ್ ಲ್ಯಾಗ್ ಪಬ್ ಉದ್ಯಮದ ಜೊತೆಗೆ ಸೌಂದರ್ಯ ಕನ್ಸ್ಟ್ರಕ್ಷನ್ ಕಂಪನಿಯನ್ನು ಸೌಂದರ್ಯ ಜಗದೀಶ್ ಪಾಟ್ನರ್ ಶಿಪ್ ನಲ್ಲಿ ನಡೆಸುತ್ತಿದ್ದರು. ಆದರೆ ಬಿಸಿನೆಸ್ ನಷ್ಟವಾಗುವುದಕ್ಕೆ ಪಾಲುದಾರರೇ ಕಾರಣ ಎಂಬುದನ್ನು ಸೌಂದರ್ಯ ಜಗದೀಶ್ ಅದರಲ್ಲಿ ತಿಳಿಸಿದ್ದಾರೆ. ಇದರಿಂದಾಗಿ 60 ಕೋಟಿ ರೂಪಾಯಿ ನಷ್ಟವಾಗಿದೆ ಎಂಬುದನ್ನು ಬರೆದಿದ್ದರು ಎನ್ನಲಾಗಿದೆ. ಈ ಮೂಲಕ ಸೌಂದರ್ಯ ಜಗದೀಶ್ ಸಾವಿಗೆ ಈ ಸಾಲದ ಹೊರೆಯು ಕಾರಣ ಎನ್ನಲಾಗಿದೆ.

ಇನ್ನು ಈ ಕಂಪನಿಯ ನಷ್ಟದ ವಿಚಾರಕ್ಕೆ ಪಾಲುದಾರರ ವಿರುದ್ದ ಸೌಂದರ್ಯ ಜಗದೀಶ್ ಅವರ ಪತ್ನಿ ಶಶಿರೇಖಾ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಜಗದೀಶ್ ಬಿಸಿನೆಸ್ ಪಾಟ್ನರ್ ಆಗಿದ್ದ ಸುರೇಶ್, ಹೊಂಬಣ್ಣ, ಸುದೀಂದ್ರ ಎಂಬುವವರ ಮೇಲೆ ದೂರು ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!