Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ 60 ಕೋಟಿ ಕಾರಣ : ಡೆತ್ ನೋಟ್ ನಲ್ಲಿ ಇದ್ದಿದ್ದು ಏನು..?

Facebook
Twitter
Telegram
WhatsApp

ಬೆಂಗಳೂರು: ಸಿನಿಮಾ ನಿರ್ಮಾಣದ ಜೊತೆ ಜೊತೆಗೆ ಹಲವು ಉದ್ಯಮಗಳನ್ನು ಮಾಡುತ್ತಿದ್ದ ಸೌಂದರ್ಯ ಜಗದೀಶ್ ಕಳೆದ ಕೆಲವು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಇದೀಗ ಅವರ ಸಾವಿಗೆ ಕಾರಣವೇನು ಎಂಬುದು ತಿಳಿದು ಬಂದಿದ್ದು, ಡೆತ್ ನೋಟ್ ಕೂಡ ಪತ್ತೆಯಾಗಿದೆ.

ಸೌಂದರ್ಯ ಜಗದೀಶ್ ಮನೆಯಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಆ ಡೆತ್ ನೋಟ್ ನಲ್ಲಿ ನಷ್ಟದ ವಿಚಾರ ಪತ್ತೆಯಾಗಿದೆ. ಈ ಡೆತ್ ನೋಟ್ ಆಧರಿಸಿ ಪೊಲೀಸರು ಕೂಡ ತನಿಖೆ ಕೈಗೊಂಡಿದ್ದರು. ಇದೀಗ ಸೌಂದರ್ಯ ಜಗದೀಶ್ ಆತ್ಮಹತ್ಯೆ ಕೇಸ್ ನಲ್ಲಿ ಮೂವರ ಮೇಲೆ ಎಫ್ಐಆರ್ ಕೂಡ ದಾಖಲಾಗಿದೆ. ಸೌಂದರ್ಯ ಜಗದೀಶ್ ತನ್ನ ಬಿಸಿನೆಸ್ ಲಾಸ್ ಬಗ್ಗೆ ಆ ಡೆತ್ ನೋಟ್ ನಲ್ಲಿ ನಮೂದಿಸಿದ್ದರು.

ಜೆಟ್ ಲ್ಯಾಗ್ ಪಬ್ ಉದ್ಯಮದ ಜೊತೆಗೆ ಸೌಂದರ್ಯ ಕನ್ಸ್ಟ್ರಕ್ಷನ್ ಕಂಪನಿಯನ್ನು ಸೌಂದರ್ಯ ಜಗದೀಶ್ ಪಾಟ್ನರ್ ಶಿಪ್ ನಲ್ಲಿ ನಡೆಸುತ್ತಿದ್ದರು. ಆದರೆ ಬಿಸಿನೆಸ್ ನಷ್ಟವಾಗುವುದಕ್ಕೆ ಪಾಲುದಾರರೇ ಕಾರಣ ಎಂಬುದನ್ನು ಸೌಂದರ್ಯ ಜಗದೀಶ್ ಅದರಲ್ಲಿ ತಿಳಿಸಿದ್ದಾರೆ. ಇದರಿಂದಾಗಿ 60 ಕೋಟಿ ರೂಪಾಯಿ ನಷ್ಟವಾಗಿದೆ ಎಂಬುದನ್ನು ಬರೆದಿದ್ದರು ಎನ್ನಲಾಗಿದೆ. ಈ ಮೂಲಕ ಸೌಂದರ್ಯ ಜಗದೀಶ್ ಸಾವಿಗೆ ಈ ಸಾಲದ ಹೊರೆಯು ಕಾರಣ ಎನ್ನಲಾಗಿದೆ.

ಇನ್ನು ಈ ಕಂಪನಿಯ ನಷ್ಟದ ವಿಚಾರಕ್ಕೆ ಪಾಲುದಾರರ ವಿರುದ್ದ ಸೌಂದರ್ಯ ಜಗದೀಶ್ ಅವರ ಪತ್ನಿ ಶಶಿರೇಖಾ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಜಗದೀಶ್ ಬಿಸಿನೆಸ್ ಪಾಟ್ನರ್ ಆಗಿದ್ದ ಸುರೇಶ್, ಹೊಂಬಣ್ಣ, ಸುದೀಂದ್ರ ಎಂಬುವವರ ಮೇಲೆ ದೂರು ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ವಂಚನೆ ಕೇಸ್ ನಲ್ಲಿ ಅರೆಸ್ಟ್.. ಸೋಷಿಯಲ್ ಮೀಡಿಯಾದಲ್ಲಿ ಫೇಮಸ್.. ಮೈತುಂಬಾ ಗೋಲ್ಡ್ : ಬಿಗ್ ಬಾಸ್ ಬಂದವರ ಹಿನ್ನೆಲೆ ಏನು..?

ಬಿಗ್ ಬಾಸ್ ಕನ್ನಡ ಸೀಸನ್ 11 ಇಂದಿನಿಂದ ಅಧಿಕೃತವಾಗಿ ಚಾಲನೆ ಸಿಗುತ್ತಿದೆ. ಅದಕ್ಕೂ ಮುನ್ನ ನಿನ್ನೆ ದಿನವೇ ರಾಜಾರಾಣಿ ರಿಲೋಡೆಡ್ ಕಾರ್ಯಕ್ರಮದಲ್ಲಿ ಒಂದಷ್ಟು ಸ್ಪರ್ಧಿಗಳ ಹೆಸರನ್ನು ಅನೌನ್ಸ್ ಮಾಡಲಾಗಿದೆ. ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ

ಇಂದು ವಿಶ್ವ ಹೃದಯ ದಿನ : ಇಂದಿನ ಯುವಕರು ಏಕೆ ಹೃದಯಾಘಾತದಿಂದ ಬಳಲುತ್ತಿದ್ದಾರೆ ?

    ಸುದ್ದಿಒನ್ : ಜಾರ್ಖಂಡ್ ಅಬಕಾರಿ ಇಲಾಖೆಯು ಕಾನ್‌ಸ್ಟೆಬಲ್‌ಗಳ ನೇಮಕಾತಿಗಾಗಿ ಪರೀಕ್ಷೆ ನಡೆಯಿತು. ಈ ಸಂದರ್ಭದಲ್ಲಿ ಇದರಲ್ಲಿ ಭಾಗವಹಿಸಿದ್ದ ಹಲವು ಯುವಕರು ಓಟದ ಸ್ಪರ್ಧೆಯಲ್ಲಿ ಸಾವನ್ನಪ್ಪಿದ್ದಾರೆ. ಓಡುವಾಗ ಹೃದಯಾಘಾತವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು

ಈ ರಾಶಿಯವರು ತ್ವರಿತಗತಿಯಲ್ಲಿ ಹಣಗಳಿಸುವ ಬಗ್ಗೆ ಚಿಂತೆ

ಈ ರಾಶಿಯವರಿಗೆ ವಿರೋಧಿಗಳಿಂದ ಭಯ, ದ್ವೇಷ, ಅಸೂಯೆ, ಸೇಡಿನಂತ ನಕರಾತ್ಮಕ ಭಾವನೆಗಳು ಕಾಡಬಹುದು, ಈ ರಾಶಿಯವರು ತ್ವರಿತಗತಿಯಲ್ಲಿ ಹಣಗಳಿಸುವ ಬಗ್ಗೆ ಚಿಂತೆ, ಭಾನುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-29,2024 ಸೂರ್ಯೋದಯ: 06:09, ಸೂರ್ಯಾಸ್ತ : 06:02 ಶಾಲಿವಾಹನ

error: Content is protected !!