Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಕೃತಿ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78 ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂಭ್ರಮ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 15 :  ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಮತ್ತು ಮಹಾನ್ ನಾಯಕ ರಾಗುವವರಿದ್ದಾರೆ. ಡಾಕ್ಟರ್, ಇಂಜಿನಿಯರ್ ಗಳಾಗುವುದರ ಜೊತೆಗೆ ದೇಶದ ಸೇವೆಯನ್ನು ಮಾಡಿ. ನಾವು ಸಂತೋಷವಾಗಿ ಇರಲು ಕಾರಣ ನಮ್ಮ ಗಡಿನಾಡಿನ ಯೋಧರು ಎಂದು ಶಾಲೆಯ ಅಧ್ಯಕ್ಷರಾದ ರೋಟೆರಿಯನ್ ಪಿಎಚ್‌ಎಫ್ ಎಂ.ಕೆ.ರವೀಂದ್ರ ಹೇಳಿದರು.

ನಗರದ ಬಿ.ಎಲ್.ಗೌಡ ಲೇಔಟ್ ನಲ್ಲಿರುವ ಪ್ರಕೃತಿ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು 78ನೇ ಸ್ವಾತಂತ್ರ‍್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹನವನ್ನು ನೆರವೇರಿಸಿ ಅವರು ಮಾತನಾಡಿದರು.

ಪುಟಾಣಿ ಮಕ್ಕಳಿಂದ ವಿವಿಧ ಸ್ವಾತಂತ್ರ‍್ಯ ಹೋರಾಟಗಾರರ ವೇಷವನ್ನು ಧರಿಸಿ ಪ್ರದರ್ಶನ ನೀಡಿದರು. ಉತ್ತಮ ಪ್ರದರ್ಶನ ನೀಡಿದ ಮಕ್ಕಳಿಗೆ ಪಾರಿತೋಷಕ ವಿತರಿಸಲಾಯಿತು.

ಪೂರ್ವ ಪ್ರಾಥಮಿಕ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಿದರು. ಕುಮಾರಿ ನಿಖಿತಾ ಮತ್ತು ಕುಮಾರಿ ಲಕ್ಷ್ಮಿ ರವರು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಸ್ವಾತಂತ್ರ ದಿನಾಚರಣೆಯ ಕುರಿತು ಭಾಷಣ ಮಾಡಿದರು. ಪಥಸಂಚಲನಕ್ಕೆ ತಂಡದ ಪರಿಚಯವನ್ನು 5ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಶಿಫಾನ ಖಾನಂ ಪರಿಚಯಿಸಿ ಕೊಟ್ಟರು.

ಹಿತೇಶ್ ಜಿ.ಟಿ ಸಜ್ಜನ್ ರವರು ಸ್ವಾತಂತ್ರ ಹೋರಾಟಗಾರರ ಹೆಸರುಗಳನ್ನು ಪರಿಚಯ ಮಾಡಿಕೊಟ್ಟರು. ನಂತರ ಪ್ರಕೃತಿ ಶಾಲೆಯ ವಿದ್ಯಾರ್ಥಿಗಳಿಂದ ದೇಶ ಭಕ್ತಿ, ದೇಶ ಪ್ರೇಮವನ್ನುಂಟು ಮಾಡುವ ವಿಶೇಷ ಪ್ರಾತ್ಯಕ್ಷಿಕೆ ಹಾಗೂ ನೃತ್ಯ ಎಲ್ಲರ ಕಣ್ಮನ ಸೆಳೆಯಿತು. ದೀಕ್ಷ ಮತ್ತು ತಂಡದವರು ದೇಶಭಕ್ತಿ ಗೀತೆಯನ್ನು ಹಾಡಿದರು. ಐದನೇ ತರಗತಿ ವಿದ್ಯಾರ್ಥಿನಿಯಾದ ಕೃತಿಕಾ. ಎ ಅವರು ವಂದೇ ಮಾತರಂ ಗೀತೆಯ ಗಿಟಾರ್ ವಾದನವನ್ನು ನುಡಿಸಿದರು.

ಐದನೇ ತರಗತಿಯ ವಿದ್ಯಾರ್ಥಿನಿ ಶ್ರೀನಿಧಿ ಪ್ರಾರ್ಥನೆಯನ್ನು ಮತ್ತು ಸಹ ಶಿಕ್ಷಕಿ ಶ್ರೀಮತಿ ರೇಣುಕಾರವರು ಎಲ್ಲರನ್ನು ಸ್ವಾಗತಿಸಿದರು. ಪ್ರಸ್ತಾವಿಕ ನುಡಿಯನ್ನು ಸಹ ಶಿಕ್ಷಕರಾದ ಶ್ರೀಮತಿ ಸುಮನ ರವರು ಮಾಡಿದರು. ವಂದನಾರ್ಪಣೆಯನ್ನು  ಕಾರ್ಯದರ್ಶಿ ಕಾರ್ತಿಕ್ . ಎಂ. ಮಾಡಿದರು.

ಕಾರ್ಯಕ್ರಮದ ನಂತರ 120 ಚದುರದ ಬೃಹತ್ ತ್ರಿವರ್ಣ ಧ್ವಜಯನ್ನು ಹೊತ್ತು ಮೆರವಣಿಗೆ ಮೂಲಕ, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರು ಸಂಪರ್ಕಿಸಿದರು. ಎಲ್ಲಾ ಮಕ್ಕಳಿಗೂ ಸಿಹಿ ವಿತರಿಸುವ ಮೂಲಕ ಈ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!