Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಮ್ ಆದ್ಮಿ ಪಾರ್ಟಿಯ ಚಿತ್ರದುರ್ಗದ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ : ಬಿ.ಇ.ಜಗದೀಶ್

Facebook
Twitter
Telegram
WhatsApp

 

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 87220 22817

ಚಿತ್ರದುರ್ಗ,(ಮಾ.17) : ಜಿಲ್ಲೆಯಲ್ಲಿ ಪಕ್ಷದ ಸಂಘಟನೆಗಾಗಿ ಈ ಹಿಂದೆ ಇದ್ದ ಜಿಲ್ಲಾ ಸಮಿತಿಯನ್ನು ವಿಸರ್ಜನೆ ಮಾಡಿ ನೂತನವಾಗಿ ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಜಂಟಿ ಕಾರ್ಯದರ್ಶಿ ಬಿ.ಇ.ಜಗದೀಶ್ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಅಧ್ಯಕ್ಷರಾಗಿದ್ದ ಫಾರೂಕ್ ರವರು ಏಕ ಪಕ್ಷೀಯವಾಗಿ ನಿರ್ಧಾರವನ್ನು ತೆಗೆದುಕೊಳ್ಳುವುದರ ಮೂಲಕ ಪಕ್ಷವನ್ನು ಇಕ್ಕಟಿಗೆ ಸಿಲುಕಿಸಿದ್ದರು. ಅಲ್ಲದೆ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿರಲಿಲ್ಲ. ಬೇರೆ ಕಡೆಯಲ್ಲಿ ಕುಳಿತು ಪಕ್ಷದ ಬಗ್ಗೆ ಮಾತನಾಡುತ್ತಿದ್ದರು. ಇಲ್ಲಿ ನಮ್ಮದೇ ಆದ ಕಚೇರಿ ಇದೆ ಅಲ್ಲಿ ಬಂದು ಮಾತನಾಡುವ ಸಲಹೆಯನ್ನು ನೀಡುವ ಕಾರ್ಯವನ್ನು ಮಾಡಿರಲಿಲ್ಲ ಕೆಲವೊಮ್ಮೆ ಜಿಲ್ಲಾ ಪದಾಧಿಕಾರಿಗಳನ್ನು ಕೇಳದೇ ಏಕ ಪಕ್ಷೀಯವಾಗಿ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದರು. ಇದರ ಬಗ್ಗೆ ಜಿಲ್ಲಾ ಸಮಿತಿಯಲ್ಲಿ ಆಕ್ಷೇಪ ಇತ್ತೂ ಈ ಹಿನ್ನಲೆಯಲ್ಲಿ ಅವರ ಜಾಗಕ್ಕೆ ಬೇರೆಯವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದಲ್ಲದೆ ಪೂರ್ಣ ಪ್ರಮಾಣದ ಜಿಲ್ಲಾ ಸಮಿತಿಯನ್ನು ರಚನೆ ಮಾಡಲಾಗಿದೆ ಎಂದರು.

ನೂತನ ಜಿಲ್ಲಾಧ್ಯಕ್ಷರಾದ ಲಕ್ಷ್ಮೀನಾರಾಯಣ ರೆಡ್ಡಿ ಮಾತನಾಡಿ, ಎಎಪಿ ಪಾರ್ಟಿಗೆ ನಾನು ನೂತನವಾಗಿ ಅಧ್ಯಕ್ಷನಾಗಿದ್ದೇನೆ ಮುಂದಿನ ದಿನದಲ್ಲಿ ಸ್ಥಳೀಯ ಸಮಸ್ಯೆಗಳ ಬಗ್ಗೆ ಹೋರಾಟವನ್ನು ಮಾಡಲಾಗುವುದು, ಮುಂದಿನ ಎರಡು ಮೂರು ದಿನದಲ್ಲಿ ಪಾರ್ಟಿಯ ಅಭ್ಯರ್ಥಿಗಳ ಘೋಷಣೆಯಾಗಲಿದೆ. ಭ್ರಷ್ಠಾಚಾರದ ವಿರುದ್ದ ಹೋರಾಟವನ್ನು ಮಾಡಲಾಗುವುದು. ಶಿಕ್ಷಣ, ಆರೋಗ್ಯ, ಮಹಿಳಿಯರ ಸಬಲಿಕರಣ ಸೇರಿದಂತೆ ಇತರೆ ವಿಷಯಗಳ ಬಗ್ಗೆ ವಿವಿಧ ರೀತಿಯ ಯೋಜನೆಯನ್ನು ಮುಂದಿನ ದಿನದಲ್ಲಿ ರೂಪಿಸಲಾಗುವುದು. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಬಡ ಜನತೆಗೆ ಸೂರನ್ನು ನೀಡಿಲ್ಲ, ಸರಿಯಾದ ರಸ್ತೆಗಳಿಲ್ಲ, ಈಗ ನಿರ್ಮಾಣ ಮಾಡಿರುವ ರಸ್ತೆಗಳ ನಿರ್ಮಾಣ ಅವೈಜ್ಞಾನಿಕವಾದ ಕೆಲಸವಾಗಿದೆ ಎಂದರು.

ಎಎಪಿಗೆ ನೂತನವಾಗಿ ನೇಮಕವಾದ ಜಿಲ್ಲಾ ಪದಾಧಿಕಾರಿಗಳ ಪಟ್ಟಿ  :

ಎಎಪಿ ಪಾರ್ಟಿಯ ಜಿಲ್ಲಾ ಸಮಿತಿಗೆ ನೂತನವಾಗಿ ಅಧ್ಯಕ್ಷರಾಗಿ ಕೆ.ಲಕ್ಷ್ಮೀ ನಾರಾಯಣ ರೆಡ್ಡಿ,

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಕೆಂಚಪ್ಪ,

ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಎಂ.ರಾಮಪ್ಪ,

ಜಿಲ್ಲಾ ಉಪಾಧ್ಯಕ್ಷರಾಗಿ ಪ್ರೋ.ಸಿ.ಕುಬೇಂದ್ರ ನಾಯ್ಕ್, ತಿಮ್ಮಾರೆಡ್ಡಿ ,

ಖಂಜಾಚಿಯಾಗಿ ಎಂ.ರಾಜಪ್ಪ, ಸಂಘಟನಾ ಕಾರ್ಯದರ್ಶಿಯಾಗಿ ಟಿ.ತಿಪ್ಪೇಸ್ವಾಮಿ,

ಜಂಟಿ ಕಾರ್ಯದರ್ಶಿಯಾಗಿ ವೇಣುಗೋಪಾಲ, ಜಮೀರ್ ಆಹಮ್ಮದ್, ಮಹಿಳಾ ಘಟಕ ಜಿಲ್ಲಾಧ್ಯಕ್ಷರಾಗಿ ಶ್ರೀಮತಿ ರಾಧ, ಕಾರ್ಯದಶಿಯಾಗಿ ಶ್ರೀಮತಿ ಅನಿಲಮ್ಮ ಸೇರಿದಂತೆ 7 ಜನರನ್ನು ಜಂಟಿ ಮಹಿಳಾ ಕಾರ್ಯದರ್ಶಿಗಳಾಗಿ ನೇಮಕ ಮಾಡಲಾಗಿದೆ.

ಗೋಷ್ಠಿಯಲ್ಲಿ ಪಾಪಣ್ಣ, ರಾಜು, ಮಹಾಂತೇಶ್, ತಿಮ್ಮಣ್ಣ, ಕುಬೇರ ನಾಯ್ಕ್, ರಾಮ ಪ್ರಕಾಶ್ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್.ಡಿ ರೇವಣ್ಣ ಜೈಲಿನಿಂದ ಬಿಡುಗಡೆ : ಲಾಠಿಚಾರ್ಜ್ ಮಾಡಿದ ಪೊಲೀಸರು..!

    ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋದಲ್ಲಿದ್ದ ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ್ದ ಕೇಸ್ ಗೆ ಸಂಬಂಧಿಸಿದಂತೆ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಕಳೆದ ಎರಡು ವಾರದಿಂದ ರೇವಣ್ಣ ಅವರು

ರಕ್ತ ನೋಡಿದ ಭಯಕ್ಕೆ ಸ್ಟ್ರೋಕ್ ಆಗಿ ನಟಿ ಪವಿತ್ರಾ ಸಾವು : ಜೊತೆಗಿದ್ದ ನಟ ಹೇಳಿದ್ದೇನು..?

ಭವಿಷ್ಯದಲ್ಲಿ ಒಳ್ಳೆಯ ಪೋಷಕ ನಟಿಯಾಗುವ ಎಲ್ಲಾ ಲಕ್ಷಣವನ್ನು ಹೊತ್ತುಕೊಂಡಿದ್ದವರು ಪವಿತ್ರಾ ಜಯರಾಂ. ಅದರಲ್ಲೂ ಸೀರಿಯಲ್ ನ ಖಳನಟಿಗೆ ಹೇಳಿ ಮಾಡಿಸಿದಂತಿದ್ದರು‌. ತ್ರಿಯನಿ ಧಾರಾವಾಹಿಯಲ್ಲಿ ಖಳನಟಿಯಾಗಿ ಎಲ್ಲರ ಮನಸ್ಸು ಗೆದ್ದಿದ್ದರು. ಆದರೆ ಅವರು ಕಾರು ಅಪಘಾತದಿಂದ

CBSC 12ನೇ ತರಗತಿಯಲ್ಲಿ ಬೆಂಗಳೂರಿನ ಟ್ಯಾಂಕರ್ ಚಾಲಕನ ಮಗಳ ಸಾಧನೆ ಹೇಗಿದೆ ಗೊತ್ತಾ..?

ಬೆಂಗಳೂರು: ಸಿಬಿಎಸ್ಸಿ ಸಿಲಬಸ್ ನ ಸೆಕೆಂಡ್ ಪಿಯುಸಿ ರಿಸಲ್ಟ್ ನಿನ್ನೆ ಘೋಷಣೆಯಾಗಿದೆ. ಆದರೆ ಕಳೆದ ಬಾರಿಗಿಂತ ಈ ಬಾರಿ ಬೆಂಗಳೂರಿನಲ್ಲೂ ಫಲಿತಾಂಶ ಕಡಿಮೆ ಬಂದಿದೆ. ಅದರಲ್ಲಿ ಟ್ಯಾಂಕರ್ ಚಾಲಕನ ಮಗಳು ಅತ್ಯುತ್ತಮ ಅಂಕ ಪಡೆದಿರುವುದು

error: Content is protected !!