Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

10 ಎಕರೆಯಲ್ಲಿ ನಿರ್ಮಾಣವಾಗಿದ್ದ ನಟ ನಾಗಾರ್ಜುನ್ ಕಟ್ಟಡ ನೆಲಸಮ..!

Facebook
Twitter
Telegram
WhatsApp

ತೆಲಂಗಾಣ ಸರ್ಕಾರ ನಟ ಅಕ್ಕಿನೇನಿ ನಾಗಾರ್ಜುನ ಕುಟುಂಬಕ್ಕೆ ಶಾಕ್ ನೀಡಿದೆ. ಅಕ್ಕಿನೇನಿ ನಾಗಾರ್ಜುನ್ ಗೆ ಸಂಬಂಧಿಸಿದ 10 ಎಕರೆಯಲ್ಲಿ ನಿರ್ಮಾಣವಾಗಿದ್ದ ಕನ್ವೆನ್ಶನ್ ಹಾಲ್ ಅನ್ನು ಕೆಡವಿದ್ದಾರೆ. ಈ ಕಟ್ಟಡದ ಮೇಲೆ ದೂರುಗಳಿವೆ. ಅನೇಕ ರೀತಿಯ ಕಾನೂನುಗಳನ್ನು ಉಲ್ಲಂಘಿಸಿರುವ ಆರೋಪವಿದೆ. ಈ ಹಿನ್ನೆಲೆ ತೆಲಂಗಾಣ ಸರ್ಕಾರ ಕಟ್ಟಡವನ್ನು ಉರುಳಿಸಿದೆ. ತಮ್ಮಿಡು ಕುಂಟಾ‌ ಕೆರೆಯ ಬಳಿ ನಿರ್ಮಾಣವಾಗಿದ್ದ ಕನ್ವೆನ್ಷನ್ ಸೆಂಟರ್ ಇದಾಗಿತ್ತು.

ಅಕ್ಕಿನೇನಿ ನಾಗಾರ್ಜುನ್ ಕಟ್ಟಿದ ಹಾಲ್ ಹಲವು ಐಷರಾಮಿ ಕಾರ್ಯಕ್ರಮಗಳು ನಡೆಯುವುದಕ್ಕೆ ಸೂಕ್ಯವಾಗಿತ್ತು. ಆದರೆ ಈ ಸೆಂಟರ್ ಕಟ್ಟುವುದಕ್ಕೆ ಪರಿಸರಕ್ಕೆ ಸಂಬಂಧಿಸಿದ ನಿಯಮಗಳನ್ನೇ ಮುರಿದಿದ್ದರು. ಕಾರ್ಪೊರೇಟ್ ಮೀಟಿಂಗ್ ಗಳು ಸೇರಿದಂತೆ ದೊಡ್ಡ ದೊಡ್ಡವರ ಕಾರ್ಯಕ್ರಮಗಳು ನಡೆಯುತ್ತಿದ್ದವು. ಇದೀಗ ಕಟ್ಟಡ ನೆಲಸಮಗೊಂಡಿದ್ದು, ನಾಗಾರ್ಜುನ್ ಬೇಸರ ವ್ಯಕ್ತಪಡಿಸಿದ್ದಾರೆ.

ಎನ್ ಕನ್ವೆನ್ಷನ್ ಹಾಲ್​ ಅನ್ನು ನೆಲಸಮಗೊಳಿಸಿದ್ದು ಅಕ್ಷರಶಃ ಕಾನೂನು ಬಾಹಿರ, ಕೋರ್ಟ್​​ನಿಂದ ಸ್ಟೇ ತಂದಿದ್ದ ಕಟ್ಟಡವನ್ನು ನೆಲಸಮಗೊಳಿಸಲಾಗಿದೆ. ಒಂದೇ ಒಂದು ನೋಟಿಸ್ ಕೂಡ ನೀಡದೆ ಬೆಳ್ಳಂ ಬೆಳಗ್ಗೆ ಕನ್ವೆನ್ಷನ್ ಹಾಲ್ ಅ​ನ್ನು ಧ್ವಂಸಗೊಳಿಸಲಾಗಿದೆ. ಒಂದೇ ಒಂದು ಇಂಚು ಜಾಗದಲ್ಲಿಯೂ ಅಕ್ರಮವಾಗಿ ಕಟ್ಟಡ ಕಟ್ಟಿಲ್ಲ. ಇದು ಅಕ್ಷರಶಃ ಕಾನೂನು ಬಾಹಿರ ನಡುವಳಿಕೆ ಎಂದು ಟ್ವಿಟ್ಟರ್ ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಇತ್ತಿಚೆಗಷ್ಟೇ ಅಕ್ಕಿನೇನಿ ಕುಟುಂಬದಲ್ಲಿ ಶುಭಕಾರ್ಯ ಕೂಡ ಜರುಗಿದೆ. ನಾಗಚೈತನ್ಯ ಮತ್ತೊಂದು ಹೊಸ ಬದುಕಿಗೆ ಹೆಜ್ಜೆ ಇಡುತ್ತಿದ್ದಾರೆ. ಸಮಂತಾ ಜೊತೆಗೆ ಡಿವೋರ್ಸ್ ಆದ ಮೇಲೆ ಶೋಭಿತಾ ಧೂಳಿಪಾಲ ಜೊತೆಗೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ಶೀಘ್ರದಲ್ಲಿಯೇ ಮದುವೆಯ ದಿನಾಂಕವನ್ನು ಘೋಷಣೆ ಮಾಡಲಿದ್ದಾರೆ. ಆದರೆ ಈ ಘಟನೆ ಮನೆಯವರೆಲ್ಲರಿಗೂ ಬೇಸರ ತರಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!