Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಟ ಪ್ರಜ್ವಲ್ ದೇವರಾಜ್ ಇನ್ನಿಲ್ಲ : ಏನಿದು ಸುದ್ದಿ..?

Facebook
Twitter
Telegram
WhatsApp

 

ಬೆಂಗಳೂರು : ನಟ ಪ್ರಜ್ವಲ್ ದೇವರಾಜ್ ಇನ್ನಿಲ್ಲ ಎಂಬ ಫೋಟೋ ಒಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಾ ಇದೆ. ಸಿನಿಮಾದ ಫೋಟೋ ಒಂದನ್ನು ಹಾಕಿ, ಪ್ರಜ್ವಲ್ ದೇವರಾಜ್ ಇನ್ನಿಲ್ಲ. ಓಂ ಶಾಂತಿ ಎಂದು ಕೋರಿದ್ದಾರೆ. ಈ ಪೋಸ್ಟರ್ ವೈರಲ್ ಆಗುತ್ತಿದ್ದಂತೆ ಅವರ ಆಪ್ತರು ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರ ವೀರಂ ಫೋಟೋ ಹಾಕಿ ಪ್ರಜ್ವಲ್ ದೇವರಾಜ್ ಇನ್ನಿಲ್ಲ.. ಓಂ ಶಾಂತಿ ಎಂದು ಪೋಸ್ಟ್ ಹಾಕಿದ್ದಾರೆ. ಇದು ಸೋಷಿಯಲ್ ಮೀಡಿಯಾದಲ್ಲೆಲ್ಲಾ ವೈರಲ್ ಆಗಿದೆ. ಈ ಕೆಲಸ ಮಾಡಿದ ಕಿಡಿಗೇಡಿಗಳು ಯಾರು ಎಂಬುದು ತಿಳಿಯುತ್ತಿಲ್ಲ. ಇದು ಅವರ ಕುಟುಂಬದ ಗಮನಕ್ಕೂ ಬಂದಿದ್ದು, ಕುಟುಂಬಸ್ಥರು ಬೇಸರ ಮಾಡಿಕೊಂಡಿದ್ದಾರೆ.

ಇನ್ನು ಪ್ರಜ್ವಲ್ ದೇವರಾಜ್ ಅವರು ಆರೋಗ್ಯವಾಗಿರುವ ವಿಚಾರ ತಿಳಿಸಿದ್ದಾರೆ. ಪ್ರಜ್ಚಲ್ ದೇವರಾಜ್ ಕ್ಷೇಮವಾಗಿದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ಪ್ರಜ್ವಲ್ ಅವರ ಫೋಟೋ ದುರ್ಬಳಕೆ ಮಾಡಲಾಗಿದೆ. ಆರೋಗ್ಯವಂತ ನಟನ ಬಗ್ಗೆ ಈ ರೀತಿಯ ಸುಳ್ಳು ಸುದ್ದಿ ಸಲ್ಲದು. ಇದರಿಂದ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಆತಂಕ ಉಂಟಾಗುತ್ತದೆ ಎಂದು ಪ್ರಜ್ವಲ್ ಅವರ ಆಪ್ತರು ತಿಳಿಸಿದ್ದಾರೆ.

ಇನ್ನು ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ದೂರು ನೀಡಲು ಕುಟುಂಬಸ್ಥರು ಮುಂದಾಗಿದ್ದಾರೆ. ಅಭಿಮಾನಿಗಳಿಗೆ ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಅಂತಾನೂ ಮಾಹಿತಿ ನೀಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಆಗಾಗ ಬೇಡದ ಸುದ್ದಿಗಳೇ ಜೋರಾಗಿ ಹಬ್ಬುತ್ತವೆ. ಅದರಲ್ಲೂ ಸೆಲೆಬ್ರೆಟಿಗಳ ವಿಚಾರದಲ್ಲಿ ಸಾವಿನ ಸುದ್ದಿಯೇ ಹೆಚ್ಚಾಗಿ ಹಬ್ಬುತ್ತದೆ. ದ್ವಾರಕೀಶ್ ಅವರ ವಿಚಾರವಾಗಿ ಅದೆಷ್ಟು ಬಾರಿ ಸಾವಿನ ಸುದ್ದಿ ಹಬ್ಬಿಸಿದರೋ. ಪ್ರತಿ ಸಲ ಅವರೇ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದರು. ಇದೀಗ ಪ್ರಜ್ವಲ್ ದೇವರಾಜ್ ವಿಚಾರದಲ್ಲೂ ಅದೇ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಪುಷ್ಪಾವತಿ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ನಗರದ ಬಸವೇಶ್ವರ ನಗರ ನಿವಾಸಿ ಪುಷ್ಪಾವತಿ (69 ವರ್ಷ) ಇಂದು ಸಂಜೆ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ

ದರ್ಶನ್ ಜಾಮೀನಿಗಾಗಿ ವಕೀಲರು ಮಂಡಿಸಿದ ವಾದವೇನು..? ಇಲ್ಲಿದೆ ಪಾಯಿಂಟ್ ಪಾಯಿಂಟ್ ಹೈಲೇಟ್..!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ನಟ ದರ್ಶನ್ ಈಗಾಗಲೇ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿ ಬಹಳ ದಿನಗಳೇ ಕಳೆದಿವೆ. ಆದರೆ ಚಾರ್ಜ್ ಶೀಟ್ ಸಂಪೂರ್ಣವಾಗಿ ಸ್ಟಡಿ ಮಾಡುವ ಕಾರಣಕ್ಕೆ ಆಗಾಗ ದರ್ಶನ್

ದರ್ಶನ್ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ..!

ಬೆಂಗಳೂರು: ದರ್ಶನ್ ಪತ್ನಿ ವಿಜಯಲಕ್ಷ್ಮೀ ನಿನ್ನೆಯಷ್ಟೇ ಬಳ್ಳಾರಿ ಜೈಲಿಗೆ ಭೇಟಿ ನೀಡಿ, ಧೈರ್ಯ ತುಂಬಿ ಹೋಗಿದ್ದರು. ಇಂದು ಜಾಮೀನು ಸಿಗುವ ಭರವಸೆಯನ್ನು ವ್ಯಕ್ತಪಡಿಸಿದ್ದರು. ಆದರೆ ಇಂದು ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್

error: Content is protected !!