Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದಿಂದ ಹಿಂದೆ ಸರಿದ ಕಾರಣ ಬಿಚ್ಚಿಟ್ಟ ನಟಿ ರಮ್ಯಾ..!

Facebook
Twitter
Telegram
WhatsApp

 

 

ರಮ್ಯಾ ಚಿತ್ರರಂಗವನ್ನು ಬಿಟ್ಟು ರಾಜಕೀಯ ರಂಗದಲ್ಲಿ ಸಾಕಷ್ಟು ಸಕ್ರಿಯರಾಗಿದ್ದರು. ಆಗಲು ಅಭಿಮಾನಿಗಳು ಅವರ ಜಪ ಮಾಡುವುದನ್ನು ಮಾತ್ರ ಬಿಟ್ಟಿರಲಿಲ್ಲ. ರಮ್ಯಾ ಆದಷ್ಟು ಬೇಗ ಕಮ್ ಬ್ಯಾಕ್ ಮಾಡಿ ಎಂದೇ ಬೇಡಿಕೆ ಇಡುತ್ತಿದ್ದರು. ಅದರಂತೆ ಇತ್ತೀಚೆಗೆ ನಟಿ ರಮ್ಯಾ ಚಿತ್ರರಂಗದಲ್ಲಿ ಆಕ್ಟೀವ್ ಆಗಿದ್ದಾರೆ. ಅವರನ್ನು ಮತ್ತೆ ತೆರೆ ಮೇಲೆ ನೋಡಲು ಅಭಿಮಾನಿಗಳು ಕೂಡ ಉತ್ಸುಕರಾಗಿದ್ದರೆ. ಆದರೆ ಮೊದಲ ಸಿನಿಮಾದಲ್ಲಿಯೇ ನಟಿಸುವುದಾಗಿ ಹೇಳಿ, ಆಮೇಲೆ ನಟಿಯನ್ನೇ ಬದಲಾಯಿಸಲಾಗಿತ್ತು. ಆ ಬಗ್ಗೆ ಹಲವರಲ್ಲಿ ಹಲವು ರೀತಿಯ ಪ್ರಶ್ನೆಗಳು ಇದೆ. ಇದೀಗ ನಟಿ ರಮ್ಯಾ ಅವರೇ ಅದಕ್ಕೆ ಸ್ಪಷ್ಟ ಉತ್ತರ ನೀಡಿದ್ದಾರೆ.

 

ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ನಟಿ ರಮ್ಯಾ ಅವರೇ ತಮ್ಮ ಆ್ಯಪಲ್ ಬಾಕ್ಸ್ ನಿಂದ ನಿರ್ಮಾಣ ಮಾಡುತ್ತಿರುವಂತ ಸಿನಿಮಾ. ಈ ಸಿನಿಮಾದ ಮೂಲವೇ ಕಮ್ ಬ್ಯಾಕ್ ಮಾಡುತ್ತಾರೆ ಎನ್ನಲಾಗಿತ್ತು. ಅದಕ್ಕೆ ತಯಾರಿ ಕೂಡ ನಡೆದಿತ್ತು. ಇದ್ದಕ್ಕಿದ್ದ ಹಾಗೇ ನಟಿ ಬದಲಾವಣೆಯಾದರು. ಆ ಬಗ್ಗೆ ರಮ್ಯಾ ತಮ್ಮ ಸೋಷಿಯಲ್ ಮೀಡಿಯಾ ಮೂಲಕ ಉತ್ತರ ನೀಡಿದ್ದಾರೆ.

‘ನಿಮ್ಮಲ್ಲಿ ಹಲವರುಗೆ ಈ ಪ್ರಶ್ನೆ ಇದೆ ಎಂದು ನನಗೆ ತಿಳಿದಿದೆ. ನಾನು ಚಿತ್ರದಿಂದ ಹೊರಗುಳಿದಿದ್ದು ಏಕೆಂದರೆ, ಅದು ಓಟಿಟಿಯಲ್ಲಿ ರಿಲೀಸ್ ಆಗಬೇಕೆಂದು ನಿರ್ಧರಿಸಿದ್ದೆವು. ನನ್ನ ಕಮ್ ಬ್ಯಾಕ್ ಸಿನಿಮಾ ಚಿತ್ರಮಂದಿರದಲ್ಲಿಯೇ ಬಿಡುಗಡೆಯಾಗಬೇಕೆಂದು ನಾನು ಬಯಸಿದ್ದೆ. ಆದರೆ ಚಿತ್ರವನ್ನು ಖರೀದಿಸುತ್ತೇವೆಂದು ಭರವಸೆ ನೀಡಿದ್ದ ಓಟಿಟಿ ವೇದಿಕೆ ನಂತರದಲ್ಲಿ ಹಿಂದೆ ಸರಿಯಿತು. ಕನ್ನಡದಲ್ಲಿ ಇದು ಹೆಚ್ಚಾಗಿ ನಡೆಯುತ್ತದೆ. ಆದರೆ ನಿಮ್ಮನ್ನು ಸೇರಲು ಹಲವು ಮಾರ್ಗಗಳಿವೆ. ನಾವೂ ಹುಡುಕುತ್ತೇವೆ. ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ಇದೇ ನವಂಬರ್ 24ರಂದು ರಿಲೀಸ್ ಆಗುತ್ತಿದೆ‌. ನಿಮ್ಮ ಪ್ರೀತಿ ಪಾತ್ರರೊಂದಿಗೆ ಸಿನಿಮಾ ವೀಕ್ಷಿಸಿ’ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನನಗೂ ಸಿಗರೇಟ್ ಸೇದುವ ಅಭ್ಯಾಸವಿತ್ತು : ಸಿಎಂ ಸಿದ್ದರಾಮಯ್ಯ ಕಿವಿ ಮಾತು

  ಬೆಂಗಳೂರು: ಸಿಗರೇಟ್ ಸೇದುವುದು ಆರೋಗ್ಯಕ್ಕೆ ಹಾನಿಕಾರಕ ಎಂಬುದು ಎಲ್ಲರಿಗೂ ಗೊತ್ತು. ಆ ಪ್ಯಾಕ್ ಮೇಲೆ ಕೂಡ ಬರೆದಿರುತ್ತೆ. ಆದರೆ ಸಾಕಷ್ಟು ಜನ ಇಂದು ಸಿಗರೇಟಿಗೆ ದಾಸರಾಗಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು

ಗೋಲ್ ಮಾಲ್ ಬಗ್ಗೆ ಪಕ್ಷದ ಮುಖಂಡರಿಗೆ ತಿಳಿಸಿದ್ದೇನೆ : ವಿನಯ್ ಕುಲಕರ್ಣಿ

  ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ವಾಲ್ಮೀಕಿ ನಿಗಮ, ಮೈಸೂರು ಮೂಡಾದ ಹಗರಣಗಳು ಸಾಕಷ್ಟು ಸದ್ದು ಮಾಡುತ್ತಿರುವಾಗಲೇ ರಾಜ್ಯದಲ್ಲಿ ಮತ್ತಷ್ಟು ಹಗರಣಗಳ ಬಗ್ಗೆ ಶಾಸಕ ವಿನಯ್ ಕುಲಕರ್ಣಿ ಮಾತನಾಡಿದ್ದಾರೆ. ಪಕ್ಷದ ಮುಖಂಡರಿಗೂ ಈ ಬಗ್ಗೆ ಪತ್ರ

ಮೂಡಾ ಗೋಲ್ಮಾಲ್ ವಿಚಾರ : ಸಿಎಂ ₹4,000 ಕೋಟಿ ಗುಳುಂ : ಆರ್ ಅಶೋಕ್ ವಾಗ್ದಾಳಿ..!

  ಬೆಂಗಳೂರು: ಮೂಡಾ ಗೋಲ್ಮಾಲ್ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್, ಗೋಲ್ಮಾಲ್ ಸಿಎಂ ₹4,000 ಕೋಟಿ ಗುಳುಂ ಎಂದು ಆಕ್ರೋಶ ಹೊರ ಹಾಕಿದ್ದಾರೆ.   ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ

error: Content is protected !!