Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉತ್ತರ ಹೇಳಿ ಮೋದಿ : ಸಿದ್ದರಾಮಯ್ಯರಿಂದ ಪ್ರಧಾನಿಗೆ ಸರಣಿ ಪ್ರಶ್ನೆ

Facebook
Twitter
Telegram
WhatsApp

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಕ್ಕೆ ಭೇಟಿ ನೀಡಿ, ಹಲವು ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಪ್ರಧಾನಿ ಮೋದಿ ರಾಜ್ಯಕ್ಕೆ ಬಂದ ಹಿನ್ನೆಲೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಉತ್ತರ ನೀಡಿ ಮೋದಿ ಎಂಬ ಹ್ಯಾಷ್ ಟ್ಯಾಗ್ ಜೊತೆಗೆ ಟ್ವಿಟ್ಟರ್ ನಲ್ಲಿ ಸಾಲು ಸಾಲಿ ಪ್ರಶ್ನೆಗಳನ್ನು ಕೇಳಿದ್ದಾರೆ.

* ಕೇಂದ್ರದ ಆಯೋಗಗಳು ನಡೆಸುವ ಪ್ರವೇಶ ಪರೀಜ್ಷೆಯಿಂದ ಕನ್ನಡವನ್ನು ಕಿಕ್ ಔಟ್ ಮಾಡಿ, ಕನ್ನಡಿಗರ ಉದ್ಯೋಗವನ್ನು ಕಿತ್ತುಕೊಳ್ಳಲಾಗಿದೆ. ಕನ್ನಡಿಗರನ್ನು ಕಂಡರೆ ಯಾಕಿಷ್ಟು ಕೋಪ..?

* ರಾಜ್ಯದ ಆರ್ಥಿಕತೆಗೆ ನೆರವಾಗುವ ಮಹದಾಯಿ, ಕೃಷ್ಣಾ ಮೇಲ್ದಂಡೆ, ಮೇಕೆದಾಟು ಯೋಜನೆಗಳ ಜಾರಿ ಯಾವಾಗ..? ಇವುಗಳನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ ಎನ್ನುವ ರೈತರ ಬೇಡಿಕೆಯ ಬಗ್ಗೆ ನಿಮ್ಮ ನಿಲುವೇನು..?

* ತುಮಕೂರು-ದಾವಣಗೆರೆ ಸಬ್ ಅರ್ಬನ್ ರೈಲ್ವೇ ಯೋಜನೆಗೆ ಅಗತ್ಯ ಹಣ ನೀಡಿಲ್ಲ. ರಾಯಚೂರು ಜನತೆಯ ಏಮ್ಸ್ ಕನಸು ಇನ್ನೂ ಕನಸಾಗಿಯೇ ಉಳಿದಿದೆ. ಕರ್ನಾಟಕದ ಬಗ್ಗೆ ಯಾಕೆ ಈ ಮಲತಾಯಿ ಧೋರಣೆ..?

* ರಾಜ್ಯದ ಹಣದುಬ್ಬರ ಶೇ. 7.62ಕ್ಕೆ ಏರಿಕೆಯಾಗಿದೆ. ಗಾಯದ ಮೇಲೆ ಬರೆ ಎಂಬಂತೆ ರಾಜ್ಯದ ನಿರುದ್ಯೋಗ ಪ್ರಮಾಣ ಶೇ. 38.7ಕ್ಕೆ ಏರಿಕೆಯಾಗಿದೆ. ಹೀಗಾದರೆ ಸಾಮಾನ್ಯ ಜನ ಬದುಕುವುದು ಹೇಗೆ..?ಎಂದು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!