Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಪರ್ಣಾ ಬಲಿ ಪಡೆದ ಶ್ವಾಸಕೋಶದ ಕ್ಯಾನ್ಸರ್ ಗೆ ಧೂಮಪಾನ ಮಾಡದವರು ಬಲಿ..!

Facebook
Twitter
Telegram
WhatsApp

 

ಬೆಂಗಳೂರು : ಮಧುರ ಕಂಠದ, ಅಪ್ಪಟ ಕನ್ನಡ ಕಲಾವಿದೆ ಅಪರ್ಣಾ ವಸ್ತಾರೆ ಇಂದು ಇಹಲೋಕ ತ್ಯಜಿಸಿದ್ದಾರೆ. ಅವರಿಗೆ ಕಳೆದ ಎರಡು ವರ್ಷದಿಂದ ಶ್ವಾಸಕೋಶದ ಕ್ಯಾನ್ಸರ್ ಕಾಣಿಸಿಕೊಂಡಿತ್ತು. ಈ ಕ್ಯಾನ್ಸರ್ ಧೂಮಪಾನ ಮಾಡದೆ ಇರುವವರಲ್ಲಿಯೂ ಕಾಣಿಸಿಕೊಳ್ಳುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ.

ಕ್ಯಾನ್ಸರ್ ನಲ್ಲಿ ನಾನಾ ವಿಧಗಳಿವೆ. ಅದರಲ್ಲಿ ಶ್ಚಾಸಕೋಶದ ಕ್ಯಾನ್ಸರ್ ಕೂಡ ಒಂದು. ಧೂಮಪಾನ ಮಾಡಿದರೆ ಕ್ಯಾನ್ಸರ್ ಬರುತ್ತೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿಯಾದರೂ ಧೂಮಪಾನ ಮಾಡದ ಶೇಕಡ 50 ರಷ್ಟು ಮಂದಿ ಇದಕ್ಕೆ ತುತ್ತಾಗಿದ್ದಾರೆ ಎಂಬುದು ಶಾಕಿಂಗ್ ನ್ಯೂಸ್. ಮುಂಬೈ ಟಾಟಾ ಮೆಮೋರಿಯಲ್ ಸೆಂಟರ್ ನ ವೈದ್ಯರ ತಂಡ ಈ ಸಂಬಂಧದ ವರದಿಯನ್ನು ಪ್ರಕಟ ಮಾಡಿದೆ‌. ಲಂಗ್ ಕ್ಯಾನ್ಸರ್ ಮೂರನೇ ಅತ್ಯಂತ ಸಾಮಾನ್ಯವಾದ ಕ್ಯಾನ್ಸರ್ ಆಗಿ ಪತ್ತೆಯಾಗಿದೆ. 2020ರಲ್ಲಿ ಸುಮಾರು 18.5 ಲಕ್ಷ ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರಿಂದಾಗಿ 16.6 ಲಕ್ಷ ಅಥವಾ 10.9% ಸಾವುಗಳಿಗೆ ಕಾರಣವಾಗಿದೆ.

ಧೂಮಪಾನ ಮಾಡದೆ ಹೋದರೂ ಈ ರೀತಿ ಶ್ವಾಸಕೋಶದ ಕ್ಯಾನ್ಸರ್ ಗೆ ತುತ್ತಾಗುವುದಕ್ಕೆ ಒಂದು ವಾಯುಮಾಲಿನ್ಯ ಕೂಡ ಕಾರಣವಾಗಿದೆ. ವಾಯು ಮಾಲಿನ್ಯ ಶ್ವಾಸಕೋಶದ ಕ್ಯಾನ್ಸರ್ ಗೆ ಪ್ರಮುಖ ಅಪಾಯಕಾರಿ ಅಂಶವಾಗಿದೆ. ಧೂಮಪಾನ ಮಾಡದವರು ಇದ್ದಕ್ಕೆ ತುತ್ತಾಗುತ್ತಾರೆ. ಕಲ್ನಾರಿನ, ಕ್ರೋಮಿಯಂ, ಕ್ಯಾಡಿಯಂ, ಆರ್ಸೆನಿಕ್ ಮತ್ತು ಕಲ್ಲಿದ್ದಲು, ಮನೆಯ ಹೊಗೆ ಇವೆಲ್ಲವೂ ಶ್ವಾಸಕೋಶದ ಕ್ಯಾನ್ಸರ್ ಹರಡಲು ಕಾರಣವಾಗುತ್ತವೆ ಎಂದು ಹೇಳಲಾಗುತ್ತದೆ. ಜೊತೆಗೆ ಸಿಗರೇಟು ಸೇದುವವರಿಗಿಂತ ಅದರ ಹೊಗೆ ಕುಡಿಯುವವರಲ್ಲಿಯೂ ಹೆಚ್ಚು ಅಪಾಯಕಾರಿ ಎಂದು ವೈದ್ಯರೇ ಹೇಳುತ್ತಾರೆ. ಈ ರೀತಿಯ ಪರಿಸರದಿಂದೆಲ್ಲಾ ಕೊಂಚ ದೂರ ಇರುವುದು ಒಳಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಂಗ್ರೆಸ್‍ನವರು ದಲಿತ ಪರ, ಅಹಿಂದ ಪರ ಎಂದು ತೋರ್ಪಡಿಕೆಗೆ ಹೇಳುವುದನ್ನು ನಿಲ್ಲಿಸಲಿ : ಬಾಳೆಕಾಯಿ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಸೆ. 17 : ಹಿಂದು ಧರ್ಮದಲ್ಲಿ ದಲಿತರನ್ನು ಸರಿಯಾದ ರೀತಿಯಲ್ಲಿ ನಡೆಸುತ್ತಿಲ್ಲ, ಅವರನ್ನು ಎಲ್ಲೂ ಸಹಾ

ರಸ್ತೆಯ ಬದಿಯ ಗುಂಡಿಗೆ ಬಿದ್ದ KSRTC ಬಸ್: ಮೂವರಿಗೆ ಗಂಭೀರ ಗಾಯ..!

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಚಳ್ಳಕೆರೆ : ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಗುಂಡಿಗೆ ಬಿದ್ದಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಸಾರ್ವಜನಿಕರಿಗೆ ಮಹತ್ವದ ಸೂಚನೆ ನೀಡಿದ ಬೆಸ್ಕಾಂ

ಚಿತ್ರದುರ್ಗ. ಸೆ.17: ಸೆ.28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಪ್ರಯುಕ್ತ ಚಿತ್ರದುರ್ಗ ನಗರದಲ್ಲಿ ಬೃಹತ್ ಶೋಭಾ ಯಾತ್ರೆ ಜರುಗಲಿದೆ. ಶೋಭಾ ಯಾತ್ರೆ ಮೆರವಣಿಗೆಯು ಚಳ್ಳಕೆರೆ ಗೇಟ್‌ನಿಂದ ಬಿ.ಡಿ.ರಸ್ತೆ ಮುಖಾಂತರ, ಗಾಂಧಿ ವೃತ್ತ, ಹೊಳಲ್ಕೆರೆ ರಸ್ತೆಯ

error: Content is protected !!