Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿರೂರು ಗುಡ್ಡ ಕುಸಿತದಲ್ಲಿ ಅರ್ಜುನ ನಾಪತ್ತೆ : ಪತ್ತೆ ಮಾಡಲು ಬಂದ ಈಶ್ವರ ಯಾರು..?

Facebook
Twitter
Telegram
WhatsApp

 

ಉತ್ತರ ಕನ್ನಡದ ಶಿರೂರಿನಲ್ಲಿ ಗುಡ್ಡ ಕುಸಿತ ಉಂಟಾದ ಹಿನ್ನೆಲೆ ಲಾರಿ ಡ್ರೈವರ್ ಅರ್ಜುನ ನಾಪತ್ತೆಯಾಗಿದ್ದರು. ಇಂದಿಗೆ 12 ದಿನ ಕಳೆದರು ಇಲ್ಲಿಯವರೆಗೂ ಅರ್ಜುನ ಪತ್ತೆಯಾಗಿಲ್ಲ. ಆರಂಭದಲ್ಲಿ ಬದುಕಿದ್ದರು ಎಂದೇ ಹೇಳಲಾಗಿತ್ತು. ಆದರೆ ಈಗ ಅವರ ಪತ್ತೆಯಾಗುತ್ತಿಲ್ಲ. ಹೀಗಾಗಿ ಈಶ್ವರನ ಮೊರೆ ಹೋಗಿದ್ದಾರೆ. ಅರ್ಜುನ ಓಡಿಸುತ್ತಿದ್ದ ಲಾರಿಯೇ 20 ಅಡಿ ಆಳದಲ್ಲಿ ಪತ್ತೆಯಾಗಿದೆ. ಹೀಗಾಗಿ ಅರ್ಜುನ್ ನನ್ನು ಹುಡುಕಲು ಕರಾವಳಿಯ ಮುಳುಗು ತಜ್ಞ ಈಶ್ವರ್ ಸಹಾಯ ಪಡೆಯಲಾಗುತ್ತಿದೆ.

 

ಈಶ್ವರ ಅವರ ಸಹಾಯದಿಂದ ಲಾರಿ ಹಾಗೂ ಚಾಲಕ ಅರ್ಜುನ್ ನನ್ನು ಪತ್ತೆ ಮಾಡಬೇಕಿದೆ. ಜಿಲ್ಲಾಡಳಿತದ ಮನವಿ ಮೇರೆಗೆ ಈಶ್ವರ್ ಮಲ್ಪರ ಶಿರೂರಿನ ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ. ಈಶ್ವರ್ ಮಲ್ಪೆ ಮೂಲತಃ ಕರಾವಳಿ ಭಾಗದವರು. ಆಂಬುಲೆನ್ಸ್ ಡ್ರೈವರ್ ಆಗಿರುವ ಈಶ್ವರ್ ಸಾಕಷ್ಟು ಜನರ ಪ್ರಾಣ ಉಳಿಸಿದ್ದಾರೆ. ನದಿಯ ಆಳಕ್ಕೆ ಇಳಿದು ನಾಪತ್ತೆಯಾದ ಮೃತದೇಹಗಳನ್ನು ಪತ್ತೆ ಹಚ್ಚುವ ಸಾಹಸಿ ಇವರು.

ಈಶ್ವರ್ ಮಲ್ಪೆ ಸಾಕಷ್ಟು ಖ್ಯಾತಿ ಪಡೆದಿದ್ದಾರೆ. ಅದೆಷ್ಟೇ ಆಳವಿರಲಿ, ಅಪಾಯಕಾರಿ ಸ್ಥಳವಿರಲಿ ಅಲ್ಲಿಗೆ ಇಳಿದು ಮೃತದೇಹಗಳನ್ನು ತೆಗೆದಿದ್ದಾರೆ. ಅಷ್ಡು ದೊಡ್ಡ ಸಾಹಸಮಯಿ ಇವರು. ಎಷ್ಟೋ ಬಾರಿ ಊಟ ಬಡಿಸುವಾಗಲೇ ಕರೆ ಬಂದಿದ್ದರು, ಈಶ್ವರ್ ಮೊದಲು ರಕ್ಷಣೆ ಆಮೇಲೆ ಊಟ ಎನ್ನುತ್ತಾರೆ. ಎಂಥದ್ದೇ ಪರಿಸ್ಥಿತಿ ಇದ್ದರು ಕರೆ ಬಂದ ತಕ್ಷಣ ಓಡಿ ಹೋಗುತ್ತಾರೆ. ಕಳೆದ ವರ್ಷ ಜುಲೈ 23ರಂದು ಅರಿಶಿನ ಗುಂಡಿ ಜಲಪಾತದಲ್ಲಿ ಭದ್ರಾವತಿ ಮೂಲದ ಶರತ್ ಎಂಬಾತ ಕಾಲು ಜಾರಿ ನೀರಿಗೆ ಬೀಳುತ್ತಾನೆ. ಸೌಪರ್ಣಿಕ ನೀರಿನ ಸೆಳೆತಕ್ಕೆ ಆತ ಕೊಚ್ಚಿ ಹೋಗುತ್ತಾನೆ. ಮರದ ದಿಂಬಿಗೆ ಸಿಲುಕಿ ದೇಹ ಅಲ್ಲಿಯೇ ಇರುತ್ತದೆ. ಆರು ದಿನಗಳ ಬಳಿಕ ಆ ಮೃತದೇಹವನ್ನು ಈಶ್ವರ್ ಮಲ್ಪೆ ಅವರೇ ಮೇಲಕ್ಕೆ ಎತ್ತುತ್ತಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!