Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಮ್ಮ RSS ಎಂದ ಸ್ಪೀಕರ್.. ಆ ಸ್ಥಾನದಲ್ಲಿ ಕುಳಿತು ಇದೆಂಥಾ ಮಾತು ಎಂದ ಜಮೀರ್ : ಏನಿದು ಚರ್ಚೆ..?

Facebook
Twitter
Telegram
WhatsApp

 

ಬೆಂಗಳೂರು: ಇಂದು ಸದನದಲ್ಲಿ ಆರ್ಎಸ್ಎಸ್ ಬಗ್ಗೆ ಜೋರು ಚರ್ಚೆಯಾಗಿದೆ. ವಿಧಾನಸಭೆಯಲ್ಲಿ ನಿಯಮ 69ರ ಅಡಿಯಲ್ಲಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸುತ್ತಿದ್ದರು. ಈ ವೇಳೆ ಸಚಿವ ಅಶೋಕ್ ಬಗ್ಗೆ ಮಾತನಾಡಿ, ಅಶೋಕನ ಬಗ್ಗೆ ನನಗೆ ಒಳ್ಳೆಯ ಅಭಿಪ್ರಾಯವಿದೆ. ರಾಜಕೀಯವೆ ಬೇರೆ. ಹೀ ಈಸ್ ಗುಡ್ ಹ್ಯೂಮನ್ ಬೀಯಿಂಗ್. ಮತ್ತೆ ಬಿಜೆಪಿ, ಆರ್ಎಸ್ಎಸ್, ಕಾಂಗ್ರೆಸ್ ಎಲ್ಲ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಹೊಗಳಿದ್ದಾರೆ.

ಇದೇ ವೇಳೆ ಆರ್ ಅಶೋಕ್ ಮಾತನಾಡಿ ಮತ್ತೆ RSS ಗೆ ಹೋಗ್ತಿರಲ್ಲ ಸರ್ ಎಂದಿದ್ದಾರೆ. ನೀವೇಕೆ ನಮ್ಮ RSS ಬಗ್ಗೆ ಅಷ್ಟು ಬೇಸರ ಮಾಡಿಕೊಳ್ತೀರಿ ಎಂದು ಸ್ಪೀಕರ್ ಮಧ್ಯೆ ಪ್ರವೇಶಿಸಿದ್ದಾರೆ. ಬೇಸರ ಎಲ್ಲಾ ಏನು ಮಾಡ್ಕೊಂಡಿಲ್ಲ ಎಂದು ಸಿದ್ದರಾಮಯ್ಯ ಉತ್ತರಿಸಿದ್ದಾರೆ. RSS ಅನ್ನೋದು ರಾಷ್ಟ್ರೀಯ ಸೇವಾ ಸಂಘ, ಹೇಳೋದು ತಪ್ಪಾ..? RSS ರಾಷ್ಟ್ರೀಯ ಸ್ವಯಂ ಸೇವಕ ಸಂಘ ಎಂದು ಕಾಗೇರಿ ಹೇಳಿದ್ದಾರೆ.

ಪೀಠದ ಮೇಲೆ ಕುಳಿತು ನಮ್ಮ RSS ಅಂತೀರಲ್ಲ ಎಂದು ಜಮೀರ್ ಪ್ರಶ್ನಿಸಿದ್ದಾರೆ. ಇನ್ನೇನು ಮತ್ತೆ..? ನಮ್ಮ RSS, ನಮ್ದೆ ರೀ RSS ಎಂದು ಸ್ಪೀಕರ್ ಹೇಳಿದ್ದಾರೆ. ಇದೇ ವೇಳೆ ಜಮೀರ್ ಸುಳ್ಳು ಹೇಳೋದು ಹೇಗೆ ಎಂದು ಆರಗ ಜ್ಞಾನೇಂದ್ರ ಕೇಳಿದ್ದಾರೆ. ಇಂದಲ್ಲ ನಾಳೆ ನೀವೂ ಕೂಡ ನಮ್ಮ RSS ಅಂತ ಹೇಳಬೇಕಾಗುತ್ತದೆ. ಖಂಡಿತ ಹೇಳಬೇಕಾಗುತ್ತೆ ಜಮೀರ್ ಎಂದು ಕಾಗೇರಿ ಹೇಳಿದ್ದಾರೆ.

ಜಮೀರ್ ಹೋಗಲಿ, ನಾನೇ ತೀರ್ಮಾನಕ್ಕೆ ಬಂದಿದ್ದೇನೆ. ಆರ್ ಎಸ್ ಎಸ್ ನಿಂದ ಈ ದೇಶದಲ್ಲಿ ಮನುವಾದ ಬರುತ್ತದೆ. ಅದಕ್ಕೆ ನಾನು ವಿರೋಧ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದೇ ವೇಳೆ ಸಚಿವ ಅಶೋಕ್, ಅಧ್ಯಕ್ಷರೇ ನಿಮ್ಮ ಮಾತಿಗೆ ನನ್ನ ಸಹಮತವಿದೆ. ಈಗ ಸರ್ವವ್ಯಾಪಿ ಆಗಿ ಹೋಗಿದೆ. ಈ ದೇಶದ ರಾಷ್ಟ್ರಪತಿ RSS. ಪ್ರಧಾನಿ RSS, ಉಪರಾಷ್ಟ್ರಪತಿ RSS, ಮುಖ್ಯಮಂತ್ರಿಯೂ RSS ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!