Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪದ್ಮರಾಜ್ ಗೆ ಜಾಮೀನು : ಬಿಡಗಡೆಯಾಗುತ್ತಿದ್ದ ವಿಪಕ್ಷ ನಾಯಕ ಅಶೋಕ್ ವಿರುದ್ಧ ಆರೋಪ..!

Facebook
Twitter
Telegram
WhatsApp

ಬೆಂಗಳೂರು: ಮಾಜಿ ಶಾಸಕ ಗೋಪಾಲಯ್ಯ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪದ್ಮರಾಜ್, ಜಾಮೀನು ಮೇಲೆ ಬಿಡುಗಡೆಯಾಗಿದ್ದಾರೆ. ಇಂದು ಬಂಧಿಸಿದ ಬಳಿಕ ಪೊಲೀಸರು, ಪದ್ಮರಾಜ್ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. 39ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ.

 

ಜಾಮೀನು ಪಡೆದು ಹೊರಗೆ ಬರುತ್ತಿದ್ದಂತೆ ಆರ್ ಅಶೋಕ ಅವರ ಮೇಲೆಯೂ ಒಂದು ಕೋಟಿ ರೂಪಾಯಿ ಆರೋಪ ಮಾಡಿದ್ದಾರೆ. ‘2010ರಲ್ಲಿ ಬಿಜೆಪಿ ನಾಯಕ ಆರ್ ಅಶೋಕ್, ನನ್ನನ್ನು ಮೇಯರ್ ಮಾಡುತ್ತೇನೆಂದು ನಂಬಿಸಿ ಒಂದು ಕೋಟಿ ರೂಪಾಯಿ ಹಣ ಪಡೆದಿದ್ದರು. ಆದರೆ ಇವತ್ತಿಗೂ ಮೇಯರ್ ಮಾಡಿಲ್ಲ ಎಂದಿದ್ದಾರೆ. ಇದೇ ವೇಳೆ ಗೋಪಾಲಯ್ಯ ಅವರಿಗೆ ಕೊಲೆ ಬೆದರಿಕೆ ಬಗ್ಗೆ ಮಾತನಾಡಿ, ಇದು ಸತ್ಯಕ್ಕೆ ದೂರವಾದ ಮಾತು. ಕೊಲೆ ಬೆದರಿಕೆ ಹಾಕುವಂತ ವ್ಯಕ್ತಿ ನಾನಲ್ಲ. ಮಂಜುನಾಥನ ಮೇಲೆ ಆಣೆ ನಾನು ಬೆದರಿಕೆ ಹಾಕಿಲ್ಲ. ದೇವರು ಅವರಿಗೆ ಒಳ್ಳೆಯದು ಮಾಡಲಿ. ಗುತ್ತಿಗೆ ಕೊಡಿಸುವ ವಿಚಾರಕ್ಕೆ 15 ಲಕ್ಷ ಹಣ ಕೊಟ್ಟಿದ್ದೆ. ಬಳಿಕ ಗುತ್ತಿಗೆ ಕೊಡಿಲಿಲ್ಲ. ಅದಕ್ಕೆ ಕಾಲ್ ಮಾಡಿದ್ದೆ. ಆಗ ಒಂದಿಷ್ಟು ಮಾತುಕತೆಗಳು ನಡೆದವು. ಆದರೆ ಯಾವುದೇ ರೀತಿಯ ಬೆದರಿಕೆಗಳನ್ನು ಹಾಕಿಲ್ಲ ಎಂದಿದ್ದಾರೆ.

ಮಧ್ಯರಾತ್ರಿ ಗೋಪಾಲಯ್ಯ ಅವರ ಫೋನ್ ಗೆ ಕರೆ ಮಾಡಿ, ಹಣ ಕೊಡದೆ ಹೋದರೆ ಸುಮ್ಮನೆ ಇರುವುದಿಲ್ಲ. ನಿನ್ನ ಜೀವಂತವಾಗಿ ಬಿಡುವುದಿಲ್ಲ. ತಾಕತ್ತಿದ್ದರೆ ನಮ್ಮ ಮನೆ ಬಳಿ ಎಂದು ಪದ್ಮರಾಜ್ ಜೀವ ಬೆದರಿಕೆ ಹಾಕಿದ್ದಾರೆಂದು ಮಾಜಿ ಸಚಿವ ಗೋಪಾಲಯ್ಯ ರಾತ್ರೋರಾತ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದು ವಿಶ್ವ ಹೃದಯ ದಿನ : ಇಂದಿನ ಯುವಕರು ಏಕೆ ಹೃದಯಾಘಾತದಿಂದ ಬಳಲುತ್ತಿದ್ದಾರೆ ?

    ಸುದ್ದಿಒನ್ : ಜಾರ್ಖಂಡ್ ಅಬಕಾರಿ ಇಲಾಖೆಯು ಕಾನ್‌ಸ್ಟೆಬಲ್‌ಗಳ ನೇಮಕಾತಿಗಾಗಿ ಪರೀಕ್ಷೆ ನಡೆಯಿತು. ಈ ಸಂದರ್ಭದಲ್ಲಿ ಇದರಲ್ಲಿ ಭಾಗವಹಿಸಿದ್ದ ಹಲವು ಯುವಕರು ಓಟದ ಸ್ಪರ್ಧೆಯಲ್ಲಿ ಸಾವನ್ನಪ್ಪಿದ್ದಾರೆ. ಓಡುವಾಗ ಹೃದಯಾಘಾತವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು

ಚಿತ್ರದುರ್ಗ | ಚಲಪತಿ ನಿಧನ

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 28 :ನಗರದ ತುರುವನೂರು ರಸ್ತೆ ನಿವಾಸಿ, ಶಿಕ್ಷಣ ಇಲಾಖೆ ನಿವೃತ್ತ ನೌಕರ ಚಲಪತಿ (66) ಅನಾರೋಗ್ಯದಿಂದ ಶನಿವಾರ ರಾತ್ರಿ ನಿಧನರಾದರು. ಮೃತರು ಪತ್ನಿ, ವಿಜಯಕರ್ನಾಟಕ ಚಿತ್ರದುರ್ಗ ಜಿಲ್ಲಾ ಪ್ರಸರಾಂಗ

ಮನು ಕುಲದ ಆಯಸ್ಸನ್ನು ಹೆಚ್ಚಿಸಿದ್ದು ವೈದ್ಯರು: ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ

ಮೈಸೂರು ಸೆ 28 : ವೈದ್ಯರು ಮತ್ತು ವೈದ್ಯಕೀಯ ಕ್ಷೇತ್ರ ಮನುಕುಲದ ಆಯಸ್ಸನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ ವ್ಯಕ್ತಪಡಿಸಿದರು.   ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶತಮಾನೋತ್ಸವದ ಸಮಾರೋಪ

error: Content is protected !!