Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಳಗಾವಿ ಗಡಿ ವಿವಾದ : ಚಿತ್ರದುರ್ಗದಲ್ಲಿ ಟಿ.ಎ.ನಾರಾಯಣ ಗೌಡ ಬಣದ ಕರವೇ ಕಾರ್ಯಕರ್ತರ ಪ್ರತಿಭಟನೆ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ,(ಡಿ.08): ಬೆಳಗಾವಿ ಗಡಿ ವಿವಾದವನ್ನು ಮುಂದಿಟ್ಟುಕೊಂಡು ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಸಿ ನಮ್ಮ ರಾಜ್ಯದ ಬಸ್‍ಗಳ ಮೇಲೆ ಕಲ್ಲು ತೂರುವುದಲ್ಲದೆ ಕನ್ನಡ ನಾಮಫಲಕಗಳಿಗೆ ಮಸಿ ಬಳಿಯುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ.ನಾರಾಯಣಗೌಡ ಬಣದ ಕಾರ್ಯಕರ್ತರು ಗುರುವಾರ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಎಂ.ಇ.ಎಸ್. ಎಂ.ಎನ್.ಎಸ್. ಎಂ.ಸಿ.ಪಿ.ಪುಂಡರ ಪ್ರತಿಕೃತಿಯನ್ನು ದಹನಗೊಳಿಸಿದರು.

ಪ್ರತಿಭಟನೆಯ ನಂತರ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಕರವೆ ಕಾರ್ಯಕರ್ತರು ಮಹಾರಾಷ್ಟ್ರದಲ್ಲಿರುವ ಕನ್ನಡಿಗರಿಗೆ ರಕ್ಷಣೆ ನೀಡುವಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಕಟ್ಟುನಿಟ್ಟಾದ ಕ್ರಮಕೈಗೊಂಡು ಪ್ರಧಾನ ಮಂತ್ರಿಗಳು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಹಬದಿಗೆ ತರುವಂತೆ ಆಗ್ರಹಿಸಬೇಕೆಂದು ಒತ್ತಾಯಿಸಿದರು.

ಬೆಳಗಾವಿಯಲ್ಲಿ ಪದೆ ಪದೆ ಶಾಂತಿಯನ್ನು ಕದಡುವ ಕುತಂತ್ರ ನಡೆಸುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ಕೂಡಲೆ ನಿಷೇಧಿಸಿ ಪುಂಡರುಗಳ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು. ಕನ್ನಡಿಗರ ಮೇಲೆ ಹಲ್ಲೆ ನಡೆಯುತ್ತಿದೆ. ಕನ್ನಡಿಗರ ಆಸ್ತಿಪಾಸ್ತಿಗಳನ್ನು ಗುರಿಯಾಗಿಟ್ಟುಕೊಂಡು ವಿದ್ವಂಸಕ ಕೃತ್ಯಗಳನ್ನು ಎಸಗಲಾಗುತ್ತಿದೆ.

ಕರ್ನಾಟಕಕ್ಕೆ ಸೇರಿದ ಬೆಳಗಾವಿ ನಮ್ಮದೆಂದು ಮಹಾರಾಷ್ಟ್ರ ಹಿಂದಿನಿಂದಲೂ ಕ್ಯಾತೆ ಮಾಡುತ್ತಿರುವುದರಿಂದ ಗಡಿಯಲ್ಲಿ ಉದ್ವಿಗ್ನತೆಯುಂಟಾಗಿದೆ. ವಿವಾದ ಈಗ ಸುಪ್ರಿಂಕೋರ್ಟ್‍ನಲ್ಲಿದ್ದು, ನೆಲದ ಕಾನೂನಿಗೆ ಗೌರವ ನೀಡುವ ಕನಿಷ್ಠ ಸೌಜನ್ಯವೂ ಎಂ.ಇ.ಎಸ್.ನವರಿಗೆ ಇಲ್ಲದಿರುವುದು ಸಂಘರ್ಷಕ್ಕೆ ಕಾರಣವಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಶಾಂತಿ ಕಾಪಾಡಬೇಕೆಂದು ಮನವಿ ಮಾಡಿದರು.

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ರಮೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಲ್.ಎಂ.ವಿಜಯಕುಮಾರ್, ತಾಲ್ಲೂಕು ಅಧ್ಯಕ್ಷ ರಾಜಪ್ಪ ಜಿ. ನಗರಾಧ್ಯಕ್ಷ ಪಿ.ರಮೇಶ್, ಜಿಲ್ಲಾ ಪ್ರಧಾನ ಸಂಚಾಲಕ ಎಸ್.ಬಿ.ಗಣೇಶ್, ಉಪಾಧ್ಯಕ್ಷರುಗಳಾದ ಬಿ.ವೆಂಕಟೇಶ್, ಟಿ.ಕೆ.ಶಿವಮೂರ್ತಿ, ತಾಲ್ಲೂಕು ಉಪಾಧ್ಯಕ್ಷ ತಿಮ್ಮರಾಜು, ಪದಾಧಿಕಾರಿಗಳಾದ ವೆಂಕಟೇಶ್, ಉದಯಕುಮಾರ್, ಘನಶ್ಯಾಮ್, ಗೋ.ಬಸವರಾಜ್, ದಾದಾಪೀರ್, ರಾಮಕೃಷ್ಣಪ್ಪ, ಮನು, ಚಂದ್ರಕಲಾ, ದಾಕ್ಷಾಯಣಿ, ಜಯಲಕ್ಷ್ಮಿ, ಮಂಜುಳ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!