Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದರ್ಶನ್ ಅವರ ಮತ್ತೊಂದು ಆಸೆ ಈಡೇರಿಸಿದ ಬಳ್ಳಾರಿ ಜೈಲು ಅಧಿಕಾರಿಗಳು..!

Facebook
Twitter
Telegram
WhatsApp

ಬಳ್ಳಾರಿ: ನಟ ದರ್ಶನ್, ರೇಣುಕಾಸ್ವಾಮಿ ಕೊಲೆ ಮಾಡಿ ಜೈಲು ಸೇರಿದ್ದಾರೆ. ಪರಪ್ಪನ ಅಗ್ರಹಾರದಿಂದ ಬಳ್ಳಾರಿಗೆ ಶಿಫ್ಟ್ ಆಗಿರುವ ದರ್ಶನ್ ಗೆ ಅಲ್ಲಿ ಯಾರೂ ಸಹಪಾಠಿಗಳಿಲ್ಲ. ಈಗ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ. ಆಗಾಗ ದರ್ಶನ್ ಪತ್ನಿ ವಿಜಯಲಕ್ಷ್ಮೀ ಬಳ್ಳಾರಿ ಜೈಲಿಗೆ ಭೇಟಿ ನೀಡಿ ಒಂದಷ್ಟು ವಿಚಾರಗಳನ್ನ ಹೇಳುತ್ತಾ ಇರುತ್ತಾರೆ. ಇದೀಗ ರಾಜ್ಯದಲ್ಲಿ ಏನಾಗ್ತಿದೆ, ತನ್ನ ಕೇಸಲ್ಲಿ ಏನೆಲ್ಲಾ ಡೆವಲಪ್ಮೆಂಟ್ ಆಗ್ತಾ ಇದೆ ಎಂಬುದನ್ನು ದರ್ಶನ್ ಅವರೇ ಖುದ್ದಾಗಿ ತಿಳಿದುಕೊಳ್ಳಬಹುದು. ಬಳ್ಳಾರಿ ಜೈಲು ಅಧಿಕಾರಿಗಳು ಅಂಥದ್ದೊಂದು ಅವಕಾಶ ಒದಗಿಸಿಕೊಟ್ಟಿದ್ದಾರೆ.

ಜೈಲಿನಲ್ಲಿ ಈಗ ದರ್ಶನ್ ಇರುವ ರೂಮಿಗೆ ಟಿವಿ ಫಿಕ್ಸ್ ಮಾಡಲಾಗಿದೆ. ಕೈದಿಗಳಿಗೆ ಟಿವಿ ನೀಡುವ ಅವಕಾಶ ಜೈಲಿನಲ್ಲಿ ಇದೆ. ಇಷ್ಟು ದಿನ ಆ ಟಿವಿ ಹಾಳಾಗಿತ್ತು. ದರ್ಶನ್ ಕೂಡ ಕೊಲೆ ಕೇಸಲ್ಲಿ ಏನಾಗ್ತಿದೆ ಎಂಬುದನ್ನು ನೋಡಬೇಕಿತ್ತು. ಹೀಗಾಗಿ ಮನವಿಯನ್ನು ಮಾಡಿದ್ದರು. ಆ ಮನವಿಯನ್ನು ಸ್ಚೀಕರಿಸಿದ ಬಳ್ಳಾರಿ ಜೈಲು ಅಧಿಕಾರಿಗಳು ಟಿವಿಯನ್ನು ನೀಡಿದ್ದಾರೆ.

ದರ್ಶನ ಇರುವ ಸೆಲ್ ಗೆ ಹೈಯರ್‌ ಕಂಪನಿಯ ಟಿವಿ ಅಳವಡಿಸಿದ್ದಾರೆ. ಈ ಹಿಂದೆ ಟಿವಿ ಬೇಡವೆಂದು ಹೇಳಿದ್ದ ದರ್ಶನ್, ಕೇಸ್ ಸ್ಟ್ರಾಂಗ್ ಆಗುತ್ತಾ ಹೋಗುತ್ತಿರುವ ಕಾರಣ, ತನ್ನ ವಿಚಾರ ತಿಳಿದುಕೊಳ್ಳುವುದಕ್ಕೆ ಟಿವಿ ಬೇಕು ಎಂದು ಬೇಡಿಕೆ ಇಟ್ಟಿದ್ದರು. ಬಳ್ಳಾರಿ ಜೈಲಿಗೆ ಹೋದ ಮೇಲೆ ಟಾಯ್ಲೆಟ್ ಚೇರ್ ಬೇಕು ಎಂದು ಕೇಳಿದ್ದರು ಅದನ್ನು ನೀಡಲಾಗಿದೆ. ಈಗ ಟಿವಿ ಕೂಡ ನೀಡಲಾಗಿದೆ. ಪರಪ್ಪನ ಅಗ್ರಹಾರದಲ್ಲಿ ತನಗೆ ಬೇಕಾದ್ದನ್ನು ರೌಡಿಶೀಟರ್ ಗಳ ಸ್ನೇಹದಿಂದ ಸುಲಭವಾಗಿ ಪಡೆದುಕೊಳ್ಳುತ್ತಿದ್ದರು ಎನ್ನಲಾಗಿದೆ. ಆದರೆ ಬಳ್ಳಾರಿ ಜೈಲಿನಲ್ಲಿ ಅವರುಗೆ ಯಾರು ಪರಿಚಯದವರೇ ಇಲ್ಲವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!