Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಪರೂಪದ ಜ್ವರಕ್ಕೆ ತುತ್ತಾಗಿರುವ ಬಿಜೆಪಿ ಶಾಸಕ ಸುರೇಶ್ ಕುಮಾರ್ : ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ..!

Facebook
Twitter
Telegram
WhatsApp

ಬೆಂಗಳೂರು: ರಾಜಾಜಿನಗರದ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಅಪೋಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪರೂಪದ ಜ್ವರದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಕಳೆದ‌ ಕೆಲವು ದಿನಗಳಿಂದಾನೂ ತುಂಬಾನೇ ದಣಿದಿದ್ದರು. ಸದ್ಯಕ್ಕೆ ಚಿಕಿತ್ಸೆಯನ್ನು ಮುಂದುವರೆಸಿದ್ದಾರೆ.

ಕಳೆದ ಮುರ್ನಾಲ್ಕು ದಿನದ ಹಿಂದಷ್ಟೇ ತೀವ್ರ ಜ್ವರದಿಂದ ಬಳಲುತ್ತಿದ್ದ ಸುರೇಶ್ ಕುಮಾರ್ ಅವರನ್ನು ಕುಟುಂಬಸ್ಥರು ಸೇರಿ ಆಸ್ಪತ್ರೆಗೆ ಸೇರಿಸಿದ್ದರು. ಶೇಷಾದ್ರಿ ಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದರು. ಅಪೋಲೋ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಹಿರಿಯ ನಾಯಕ ಎಸ್. ಸುರೇಶ್‌ಕುಮಾರ್ ಅವರು ಕಳೆದ ತಿಂಗಳು ಬೆಂಗಳೂರಿನಿಂದ ತಿರುಪತಿಗೆ ಸೈಕಲ್‌ನಲ್ಲಿ ಪ್ರಯಾಣ ಬೆಳೆಸಿದ್ದರು. ಬೆಂಗಳೂರಿನಿಂದ ಮೈಸೂರಿಗೆ ನಡೆದ ಬಿಜೆಪಿ-ಜೆಡಿಎಸ್ ನಾಯಕರ ಪಾದಯಾತ್ರೆಯಲ್ಲೂ ಸುರೇಶ್ ಕುಮಾರ್ ಅವರು ಒಂದು ದಿನ ಭಾಗಿಯಾಗಿದ್ದರು. ಇದಾದ ಬಳಿಕ ಕಳೆದ ತಿಂಗಳಿಂದ ಸುರೇಶ್ ಕುಮಾರ್ ಬಹಳ ಆಯಾಸಗೊಂಡಿದ್ದರು ಎನ್ನಲಾಗಿದೆ.

ಈ ಎಲ್ಲಾದರಿಂದ ಬಳಲುತ್ತಿದ್ದ ಸುರೇಶ್ ಕುಮಾರ್ ಅವರಿಗೆ ಜ್ವರ ಜಾಸ್ತಿಯಾಗಿದೆ. ಮೆದುಳಿಗೂ ಜ್ವರ ತಗುಲಿರುವ ಕಾರಣ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಪೋಲೋ ವೈದ್ಯರು ತಿಳಿಸಿದ್ದಾರೆ. ಆದಷ್ಟು ಬೇಗ ಹುಷರಾಗಿ ಬರಲೆಂದು ಅವರ ಹಿಂಬಾಲಕರು, ಅಭಿಮಾನಿಗಳು ಹಾರೈಸುತ್ತಿದ್ದಾರೆ. ಕುಟುಂಬಸ್ಥರು ಜೊತೆಯಲ್ಲಿಯೇ ಇದ್ದು ನೋಡಿಕೊಳ್ಳುತ್ತಿದ್ದಾರೆ. ಅಪೋಲೋ ಆಸ್ಪತ್ರೆ ವೈದ್ಯರು ಸಾಕಷ್ಟು ಕಾಳಜಿ ವಹಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಇದ್ದಕ್ಕಿದ್ದ ಹಾಗೇ ಜ್ವರ ಕಾಣಿಸಿಕೊಂಡು ತುಂಬಾನೇ ಸುಸ್ತಾಗಿದ್ದರು ಎಂದು ಅವರ ಜೊತೆಗೆ ಓಡಾಡಿದವರು ಹೇಳುತ್ತಿದ್ದಾರೆ. ಆರಂಭದ ಜ್ಚರದಲ್ಲಿಯೇ ಚಿಕಿತ್ಸೆ ಪಡೆಯಬೇಕಿತ್ತು. ಆದರೆ ಸುಸ್ತಾಗುವ ತನಕ ಓಡಾಟ ನಡೆಸಿದ್ದಾರೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

ದಾವಣಗೆರೆಯಲ್ಲಿ ಸೆಪ್ಟೆಂಬರ್ 20 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ,ಸೆಪ್ಟೆಂಬರ್.19 : ನ್ಯಾಷನಲ್ ಹೈವೇನಲ್ಲಿ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಇರುವುದರಿಂದ ಸೆಪ್ಟೆಂಬರ್ 20 ರಂದು ಬೆಳ್ಳಿಗ್ಗೆ 10 ರಿಂದ ಸಂಜೆ 5 ರವರೆಗೆ ಶಾಮನೂರು, ಬನಶಂಕರಿ ಬಡಾವಣೆ, ಶಿವ ಪಾರ್ವತಿ ಬಡಾವಣೆ, ಜೆ.ಹೆಚ್ ಪಟೇಲ್

error: Content is protected !!