Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಾಣಿ ವಿಲಾಸ ಡ್ಯಾಂನಿಂದ ನೀರು ಕೊಡದಿದ್ರೆ ಲೋಕಸಭಾ ಚುನಾವಣೆಯ ಬಹಿಷ್ಕಾರ : ಎಚ್ಚರಿಕೆ ನೀಡಿದ ಹಿರಿಯೂರು ಗ್ರಾಮಸ್ಥರು

Facebook
Twitter
Telegram
WhatsApp

ಹಿರಿಯೂರು: ಎಷ್ಟೋ ಜಿಲ್ಲೆಗಳ ತಾಲೂಕುಗಳಲ್ಲಿ ಕೆಲವೊಂದು ಮೂಲಭೂತ ಸೌಲಭ್ಯವಿಲ್ಲದೆ ಈಗಲೂ ಒದ್ದಾಡುತ್ತಿದ್ದಾರೆ. ಚುನಾವಣೆಯ ಹೊತ್ತಲ್ಲಿ ಬಂದು ಭರವಸೆ ನೀಡಿ ಹೊರಟು ಬಿಟ್ಟರೆ ಇನ್ನು ಹಿಂತಿರುಗುವುದು ಚುನಾವಣೆ ಮುಗಿದ ಮೇಲೆಯೆ. ಈ ತರದ ಉದಾಹರಣೆಗಳು ಸಾಕಷ್ಟಿವೆ. ಇದರ ನಡುವೆ ಸದ್ಯ ಬೇಸಿಗೆ ಹೆಚ್ಚಾಗಿದೆ. ನೀರಿನ ಸಮಸ್ಯೆ ತಾಂಡವವಾಡುತ್ತಿದೆ. ಈಗ ಹಿರಿಯೂರು ಗ್ರಾಮಸ್ಥರು ಕುಡಿಯುವ ನೀರಿಗಾಗಿ ಬೇಡಿಕೆ ಇಟ್ಟಿದ್ದಾರೆ. ನೀರು ಕೊಡದೆ ಹೋದಲ್ಲಿ ಚುನಾವಣಾ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ.

 

ಹಿರಿಯೂರು ತಾಲೂಕಿನ ವಾಣಿ ವಿಲಾಸ ಜಲಾಶಯದಿಂದ ಭರಮಗಿರಿ ಗ್ರಾಮ ಸೇರಿದಂತೆ ಸುತ್ತಲಿನ ಗ್ರಾಮಗಳಿಗೆ ಕುಡಿಯುವ ನೀರು ಕೊಡದಿದ್ದರೆ ಲೋಕಸಭಾ ಚುನಾವಣೆ ಮತದಾನ ಬಹಿಷ್ಕಾರ ಮಾಡಲಾಗುವುದು ಎಂದು ಕ್ಷೇತ್ರದ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರಿಗೆ ಗ್ರಾಮದ ಜನ ಎಚ್ಚರಿಕೆ ನೀಡಿದ್ದಾರೆ.

ವಾಣಿ ವಿಲಾಸ ಜಲಾಶಯದಿಂದ ಮೂರ್ನಾಲ್ಕು ಕಿಲೋ ಮೀಟರ್ ದೂರದಲ್ಲಿರುವ ನಮ್ಮ ಗ್ರಾಮಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ. ಗ್ರಾಮದಲ್ಲಿ ಜೆರೆ ಇದೆ. ಆದರೆ ನೀರಿಲ್ಲದೆ ಅದು ಬತ್ತಿ ಹೋಗಿದೆ. ಸುತ್ತಮುತ್ತಲಿನ ರೈತರ ಜಮೀನುಗಳಲ್ಲಿ ಅಂತರ್ಜಲ ಕುಸಿದು ಹೋಗಿದೆ. ಸಾವಿರಾರು ಅಡಿಗಳಷ್ಟು ಕೊಳವೆ ಬಾವಿ ಕೊರೆಸಿದರು ನೀರು ಸಿಗುತ್ತಿಲ್ಲ. ರೈತರು ತೋಟವನ್ನು ಉಳಿಸಿಕೊಳ್ಳಲು ಆಗದೆ ಆತ್ಮಹತ್ಯೆ ದಾರಿ ಹಿಡಿಯುವ ಪರಿಸ್ಥಿತಿ ಎದುರಾಗಿದೆ ಎಂದು ಪ್ರತಿಭಟನಾ ನಿರತ ರೈತರು ಆಕ್ರೋಶ ಹೊರ ಹಾಕಿದ್ದಾರೆ‌. ಗ್ರಾಮಕ್ಕೆ ನೀರು ಬಿಟ್ಟರಷ್ಟೆ ಚುನಾವಣೆ ಎನ್ನುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!