Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಾತಿ ನಿಂದನೆ ಕೇಸ್ : ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಕೋರ್ಟ್..!

Facebook
Twitter
Telegram
WhatsApp

 

ಬೆಂಗಳೂರು: ಒಕ್ಕಲಿಗ ಹಾಗೂ ದಲಿತ ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ ಮುನಿರತ್ನ ವಿರುದ್ಧ ಕೇಸ್ ದಾಖಲಾಗಿತ್ತು. ಪರಪ್ಪನ ಅಗ್ರಹಾರ ಸೇರಿದ್ದ ಮುನಿರತ್ನ ಅವರಿಗೆ ಇದೀಗ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. ನ್ಯಾಯಾಧೀಶರಾದ ಗಜಾನನ ಭಟ್ ಅವರಿದ್ದ ಪೀಠದಲ್ಲಿ ವಿಚಾರಣೆ ನಡೆದಿದ್ದು, ಜಾಮೀನು ನೀಡಿ ಮಹತ್ವದ ಆದೇಶ ಹೊರಡಿಸಿದ್ದಾರೆ.

ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಮುನಿರತ್ನ ಪರವಾಗಿ ಅವರ ವಕೀಲರಾದ ಅಶೋಕ್ ಹಾರನಹಳ್ಳಿ ವಾದ ಮಂಡಿಸಿದ್ದಾರೆ. ಇದು ಏಳು ವರ್ಷದ ಹಳೆಯ ಕೇಸು. ಅದರಲ್ಲೂ ಸಾವರ್ಜನಿಕರ ಮುಂದೆ ನಡೆದ ನಿಂದನೆ ಅಲ್ಲ. ಜನಾಂಗೀಯ ನಿಂದನೆ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಇದು ಅಟ್ರಾಸಿಟಿ ಕಾಯ್ದೆಗೆ ಅನ್ವಯವಾಗುವುದಿಲ್ಲ. ಈ ಸೆಕ್ಷನ್ ಪ್ರಕಾರ ನಿಂದನೆ ಮಾಡುವಾಗ ಇಬ್ಬರಿಗಿಂತ ಹೆಚ್ಚು ಜನ ಇರಬೇಕು. ಗುಂಪಿನಲ್ಲಿ ಜಾತಿ ನಿಂದನೆ ಮಾಡಿರಬೇಕು. ಆಗ ಅಟ್ರಾಸಿಟಿ ಕೇಸ್ ದಾಖಲಿಸಬಹುದು ಎಂದು ವಾದ ಮಂಡಿಸಿದ್ದರು.

ಇನ್ನು ಮುನಿರತ್ನ ಜಾಮೀನು ಅರ್ಜಿಗೆ ಸರ್ಕಾರಿ ವಕೀಲರಾದ ಎಸ್ಪಿಪಿ ಪ್ರಸನ್ನ ಕುಮಾರ್ ಅವರು ಆಕ್ಷೇಪಣೆ ಸಲ್ಲಿಸಿದ್ದರು. ಆದರೆ ಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ. ಜಾಮೀನು ನೀಡುವಾಗ ಎರಡು ಶ್ಯೂರಿಟಿಗಳೊಂದಿಗೆ ಎರಡು ಲಕ್ಷ ಬಾಂಡ್ ಬರೆಸಿಕೊಂಡು ಕೋರ್ಟ್ ಜಾಮೀನು ನೀಡಿದೆ. ವಂಚನೆ, ಜಾತಿ ನಿಂದನೆ‌ ಕೇಸ್ ಗೆ ಸದ್ಯ ಮುನಿರತ್ನ ಜಾಮೀನು ಪಡೆದಿದ್ದಾರೆ. ಇದರ ನಡುವೆ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಕೇಸ್ ಯಾವ ರೀತಿ ಟರ್ನ್ ತೆಗೆದುಕೊಳ್ಳುತ್ತೆ ಎಂಬುದನ್ನು ನೋಡಬೇಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕಾಲೇಜು ಕಟ್ಟಡದ ಮೇಲಿಂದ ಬಿದ್ದು ಯುವತಿ ಆತ್ಮಹತ್ಯೆ…!

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಮಕ್ಕಳ ಭವಿಷ್ಯ ಉತ್ತಮವಾಗಲಿ, ಮುಂದೆ ಚೆನ್ನಾಗಿ ಬಾಳಿ ಬದುಕಲಿ ಎಂಬುದೇ ಹೆತ್ತವರ ಹಾರೈಕೆಯಾಗಿರುತ್ತದೆ. ಅದಕ್ಕೆಂದೆ ಕಷ್ಟಪಟ್ಟು ಮಕ್ಕಳನ್ನ ಓದಿಸುತ್ತಾರೆ. ಇನ್ನೇನು ಮಗಳ ಭವಿಷ್ಯ ಉಜ್ವಲವಾಗುತ್ತದೆ. ಮಗಳ ಆನಂದವನ್ನು

ಇಳಕಲ್ಲಿನ ಮಹಾಂತೇಶ್‌ ಎಂ.ಗಜೇಂದ್ರಗಡ ಅವರಿಗೆ ಸಂದ ಶ್ರೀ ಶಿವಕುಮಾರ ಪ್ರಶಸ್ತಿ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘ ರಂಗಭೂಮಿಗೆ ಸಲ್ಲಿಸಿದ ಜೀವಮಾನದ ಕೊಡುಗೆಯನ್ನು ಮನ್ನಿಸಿ ಪ್ರತಿವರ್ಷ ಕೊಡಮಾಡುವ ಪ್ರತಿಷ್ಠಿತ ಶ್ರೀ ಶಿವಕುಮಾರ ಪ್ರಶಸ್ತಿಗೆ ಈ ಬಾರಿ  ಇಳಕಲ್ಲಿನ

ಚಿತ್ರದುರ್ಗ : ಮಳೆಗೆ ಜಿಲ್ಲೆಯಾದ್ಯಂತ 80 ಮನೆಗಳು ಹಾನಿ : ಮಳೆ ವರದಿ…!

ಚಿತ್ರದುರ್ಗ.ಅ.18:  ಗುರುವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 11.3 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 15 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 6.8 ಹಿರಿಯೂರು ತಾಲ್ಲೂಕು 14.2 ಮಿ.ಮೀ, ಹೊಳಲ್ಕೆರೆ ತಾಲ್ಲೂಕು

error: Content is protected !!