Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಾಕಿಸ್ತಾನದಲ್ಲಿ ಭಯೋತ್ಪಾದಕರು ಬಳಸುತ್ತಿದ್ದ 14 ಮೊಬೈಲ್ ಆ್ಯಪ್‌ಗಳನ್ನು ನಿರ್ಬಂಧಿಸಿದ ಕೇಂದ್ರ

Facebook
Twitter
Telegram
WhatsApp

 

 

ಜಮ್ಮು ಮತ್ತು ಕಾಶ್ಮೀರಕ್ಕೆ ಮಾಹಿತಿ ರವಾನಿಸಲು ಪಾಕಿಸ್ತಾನದಲ್ಲಿರುವ ಭಯೋತ್ಪಾದಕರು ಸಂವಹನ ವೇದಿಕೆಯಾಗಿ ಬಳಸುತ್ತಿದ್ದ 14 ಮೆಸೆಂಜರ್ ಮೊಬೈಲ್ ಅಪ್ಲಿಕೇಶನ್‌ಗಳನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ.

ಈ ಆ್ಯಪ್‌ಗಳ ಮೂಲಕ ಭಯೋತ್ಪಾದಕರು ಮತ್ತು ಭಯೋತ್ಪಾದಕರ ಬೆಂಬಲಿಗರ ನಡುವೆ ಸಂವಹನ, ಕ್ಷೇತ್ರ ಮಟ್ಟದಲ್ಲಿ ದಾಳಿಯ ಯೋಜನೆಗಳ ವಿತರಣೆ ಮತ್ತು ಮುಖ್ಯವಾಗಿ ಪಾಕಿಸ್ತಾನದಿಂದ ಸೂಚನೆಗಳನ್ನು ಕಳುಹಿಸಲಾಗುತ್ತಿತ್ತು ಎಂದು ಗುಪ್ತಚರ ಮೂಲಗಳು ಕಂಡುಕೊಂಡಿವೆ. ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಈ ಆ್ಯಪ್‌ಗಳ ಬಳಕೆ ಹೆಚ್ಚಾಗಿತ್ತು ಎಂದು ನಿರ್ಭಂಧಿಸಿದೆ.

ಸರ್ಕಾರವು ನಿರ್ಬಂಧಿಸಿದ ಅಪ್ಲಿಕೇಶನ್‌ಗಳಲ್ಲಿ ಕ್ರಿಪ್‌ವೈಸರ್, ಎನಿಗ್ಮಾ, ಸೇಫ್‌ಸ್ವಿಸ್, ವಿಕ್ರ್ಮೆ, ಮೀಡಿಯಾಫೈರ್, ಬ್ರಿಯಾರ್, ಬಿಚಾಟ್, ನಂಡ್‌ಬಾಕ್ಸ್, ಕೋನಿಯನ್, ಐಎಂಒ, ಎಲಿಮೆಂಟ್, ಸೆಕೆಂಡ್ ಲೈನ್, ಜಂಗಿ, ಥ್ರೀಮಾ ಸೇರಿವೆ ಎಂದು ಕೆಲವು ಮಾಧ್ಯಮ ವರದಿಗಳು ಹೇಳಿವೆ.

ಭದ್ರತಾ ಮತ್ತು ಗುಪ್ತಚರ ಸಂಸ್ಥೆಗಳ ಶಿಫಾರಸಿನ ಪ್ರಕಾರ, ಐಟಿ ಕಾಯಿದೆ, 2000 ರ ಸೆಕ್ಷನ್ 69 ಎ ಅಡಿಯಲ್ಲಿ ಈ ನಿಷೇಧವನ್ನು ಜಾರಿಗೊಳಿಸಲಾಗುತ್ತಿದೆ.

ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಮೊಬೈಲ್ ಅಪ್ಲಿಕೇಷನ್ ಗಳ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿರುವುದು ಹೊಸದೇನಲ್ಲ. ಈ ಹಿಂದೆ, ಭಾರತ ಸರ್ಕಾರವು ಹಲವಾರು ಚೀನೀ ಅಪ್ಲಿಕೇಶನ್‌ಗಳನ್ನು ನಿಷೇಧಿಸಿತ್ತು. ಅವುಗಳು “ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆ, ಭಾರತದ ರಕ್ಷಣೆ, ರಾಜ್ಯದ ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಪೂರ್ವಾಗ್ರಹವಾಗಿದೆ” ಎಂದು ಆರೋಪಿಸಿತ್ತು.

ಒಟ್ಟಾರೆಯಾಗಿ, ಕಳೆದ ಕೆಲವು ವರ್ಷಗಳಿಂದ ಸುಮಾರು 250 ಚೀನೀ ಅಪ್ಲಿಕೇಶನ್‌ಗಳನ್ನು ನಿಷೇಧಿಸಲಾಗಿದೆ. ಜೂನ್ 2020 ರಿಂದ, TikTok, Shareit, WeChat, Helo, Likee, UC News, Bigo Live, UC Browser, Xender, Camscanner, ಹಾಗೆಯೇ ಜನಪ್ರಿಯ ಮೊಬೈಲ್ ಗೇಮ್‌ಗಳಾದ PUBG ಮೊಬೈಲ್ ಮತ್ತು ಗರೆನಾ ಸೇರಿದಂತೆ 200 ಕ್ಕೂ ಹೆಚ್ಚು ಚೀನೀ ಅಪ್ಲಿಕೇಶನ್‌ಗಳು ನಿಷೇಧಿಸಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!