Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಂದ್ರಶೇಖರ್ ಸ್ವಾಮೀಜಿ ವರ್ಸಸ್ ಸಚಿವ ರಾಜಣ್ಣ : ತಾರಕ್ಕೇರಿದ ಮಾತುಗಳು..!

Facebook
Twitter
Telegram
WhatsApp

 

ತುಮಕೂರು: ನಿನ್ನೆ ಕೆಂಪೇಗೌಡ ಜಯಂತಿಯ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ವಿಶ್ವ ಒಕ್ಕಲಿಗ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರು ಸಿಎಂ ಹುದ್ದೆಯ ಬಗ್ಗೆ ಮಾತನಾಡಿದ್ದರು. ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟು ಕೊಡಲುವಂತೆ ಸಿದ್ದರಾಮಯ್ಯ ಅವರ ಬಳಿ ತುಂಬಿದ ವೇದಿಕೆಯಲ್ಲಿ ಮನವಿ ಮಾಡಿದ್ದರು. ಅದೀಗ ಸಿದ್ದರಾಮಯ್ಯ ಬಣದಲ್ಲಿ ಬಾರೀ ಚರ್ಚೆಯಾಗಿದ್ದು, ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಸ್ವಾಮೀಜಿ ವಿರುದ್ಧ ಆಕ್ರೋಶಗೊಂಡಿದ್ದಾರೆ‌.

‘ದೇಶದಲ್ಲಿ ಬಹಳ ಜನ ಸ್ವಾಮೀಜಿಗಳು ಇದ್ದಾರೆ. ನನಗೆ ಮಠ ಮಾಡಿಕೊಡುತ್ತೀನಿ ಅಂತ ಒಳ್ಳೆಯ ಸಲಹೆ ನೀಡಿದ್ದಾರೆ. ಈ ಸಲಹೆಯನ್ನು ನಾನು ಪರಿಶೀಲನೆ ಮಾಡ್ತೀನಿ. ಬೆವರು ಸುರಿಸದೆ ಜೀವನ ಮಾಡುವಂತಹ ಸ್ವಾಮೀಜಿಗಳು ಸಲಹೆ ನೀಡಿದ್ದಾರೆ. ಅದನ್ನು ನಾನು ಪರಿಶೀಲನೆ ಮಾಡ್ತೀನಿ. ಸ್ವಾಮೀಜಿ ಸುಲಭವಾಗಿ ಜೀವನ ನಡೆಸುವ ಮಾರ್ಗ ತಿಳಿಸಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸುತ್ತೇವೆ‌. ನಾವೂ ನೋಡಿದ ಸ್ವಾಮೀಜಿ ಸಮಾಜಕ್ಕೆ ಒಳಿತನ್ನು ಬಯಸುವವರು. ಆದರೆ ಹೀಗೆ ಬಹಿರಂಗವಾಗಿ ಹೇಳಿಕೆ ನೀಡಿದ್ದು, ಸರಿಯಲ್ಲ ಎಂದು ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನು ರಾಜಣ್ಣ ಅವರ ಬಗ್ಗೆ ಚಂದ್ರಶೇಖರನಾಥ ಸ್ವಾಮೀಜಿ ಹೇಳಿದ್ದು ಹೀಗೆ, ರಾಜಣ್ಣ ಆತ್ಮಪೂರ್ತಿಯಾಗಿ ಹೆಂಡತಿ, ಮನೆ, ಮಕ್ಕಳು ಎಲ್ಲವನ್ನು ಬಿಟ್ಟು ಬಂದರೆ ಅವರಿಗೊಂದು ಮಠ ಮಾಡಿಕೊಡುವುದು ನಮ್ಮ ಜವಾಬ್ದಾರಿ. ಆಯ್ತು ಅದನ್ನು ಪೀಠವನ್ನು ಕೊಡ್ತೀನಿ. ಅವರು, ತರ್ಲೆ, ಅವರ ಮಾತಲ್ಲಿ ತೂಕ ಇಲ್ಲ ಏನಿಲ್ಲ. ಅವನಿಗೆ ಯೋಗ್ಯತೆಯೇ ಇಲ್ಲ ಮಾತನಾಡುವುದಕ್ಕೆ. ಅವನ್ನ ನಾನು ನೋಡಿಲ್ಲ. ಅವನು ಯಾರು ಗೊತ್ತಿಲ್ಲ. ಚಪಲವಾದ ಬಾಯಿ ಏನಾದ್ರೂ ಹೊದರಬೇಕು ಹೊದರಿರ್ತಾನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

ದಾವಣಗೆರೆಯಲ್ಲಿ ಸೆಪ್ಟೆಂಬರ್ 20 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ,ಸೆಪ್ಟೆಂಬರ್.19 : ನ್ಯಾಷನಲ್ ಹೈವೇನಲ್ಲಿ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಇರುವುದರಿಂದ ಸೆಪ್ಟೆಂಬರ್ 20 ರಂದು ಬೆಳ್ಳಿಗ್ಗೆ 10 ರಿಂದ ಸಂಜೆ 5 ರವರೆಗೆ ಶಾಮನೂರು, ಬನಶಂಕರಿ ಬಡಾವಣೆ, ಶಿವ ಪಾರ್ವತಿ ಬಡಾವಣೆ, ಜೆ.ಹೆಚ್ ಪಟೇಲ್

error: Content is protected !!