Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಎಂ ಸಿದ್ದರಾಮಯ್ಯ ಎದುರೇ ಡಿಕೆಶಿಯನ್ನು ಮುಖ್ಯಮಂತ್ರಿ ಮಾಡಲು ಚಂದ್ರಶೇಖರ ಸ್ವಾಮೀಜಿ ಮನವಿ..!

Facebook
Twitter
Telegram
WhatsApp

ಬೆಂಗಳೂರು: ಇಂದು ನಾಡಪ್ರಭು ಕೆಂಪೇಗೌಡ ಅವರ ಜಯಂತೋತ್ಸವ. ಬೆಂಗಳೂರು ಕಟ್ಟಿದ ಮಹಾತ್ಮನಿಗೆ ಇಂದು ಗೌರವ ಸಲ್ಲಿಕೆ ಮಾಡಲಾಗುತ್ತಿದೆ. ಸರ್ಕಾರ ವತಿಯಿಂದ ವಿಧಾನಸೌಧದ ಮುಂಭಾಗ ಕಾರ್ಯಕ್ರಮ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಸಚಿವರು, ಶಾಸಕರು, ಮಠಾಧೀಶರು ಭಾಗಿಯಾಗಿದ್ದಾರೆ. ಇದೇ ವೇಳೆ ಚಂದ್ರಶೇಖರ ಸ್ವಾಮೀಜಿ ಸಿಎಂ ಹುದ್ದೆಯನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಲು ಕೇಳಿದ್ದಾರೆ‌.

ಕೆಂಪೇಗೌಡರ ಜಯಂತಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಬೆಂಗಳೂರು ನಗರವನ್ನು ಕಟ್ಟಿದವರು. ಅವರು ಬಹಳ ಜನಾನುರಾಗುಯಾಗಿದ್ದಾರೆ. ನಗರದಲ್ಲಿ ಅನೇಕ ಕೆರೆಗಳನ್ನು ನಿರ್ಮಿಸಿ, ಬೆಂಗಳೂರನ್ನು ವ್ಯಾಪಾರ ಕೇಂದ್ರ ಮಾಡಿದ್ದು ಕೆಂಪೇಗೌಡರು. ಅನೇಕ ದೇವಸ್ಥಾನಗಳನ್ನು ಕಟ್ಟಿ ಜನಾನುರಾಗಿಯಾದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದೇ ವೇಳೆ ವೇದಿಕೆಯಲ್ಲಿಯೇ ಡಿಮ್ಯಾಂಡ್ ಇಟ್ಟ ವಿಶ್ವ ಒಕ್ಕಲಿಗ ಮಹಾಸಂಸ್ಥಾಪನಾ ಮಠದ ಚಂದ್ರಶೇಖರ ಸ್ವಾಮೀಜಿ, ಒಬ್ಬರು ಮಾತ್ರ ಸಿಎಂ ಆಗಿಲ್ಲ. ಸಿದ್ದರಾಮಯ್ಯ ಅವರು ದಯವಿಟ್ಟು ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಬಿಟ್ಟುಕೊಡಬೇಕು‌. ಸಿದ್ದರಾಮಯ್ಯ ಅವರು ಮನಸ್ಸು ಮಾಡಿದರೆ ಮಾತ್ರ ಇದೆಲ್ಲ ಸಾಧ್ಯವಾಗುತ್ತದೆ. ನಾನು ಮತ್ತೊಮ್ಮೆ ಮನವಿ ಮಾಡುತ್ತೇನೆ. ದಯವಿಟ್ಟು ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ. ಯಾವುದೇ ಕಾರಣಕ್ಕೂ ಬೆಂಗಳೂರನ್ನು ಭಾಗ ಮಾಡುವುದಕ್ಕೆ ಹೋಗಬೇಡಿ ಎಂದಿದ್ದಾರೆ.

135 ಸ್ಥಾನ ಪಡೆದ ಕಾಂಗ್ರೆಸ್ ಅಧಿಕಾರಕ್ಕೆ ಬರುವಾಗಲೇ ಸಿಎಂ ಸ್ಥಾನದ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಆರಂಭದಲ್ಲಿ ಸಿಎಂ ಸ್ಥಾನವನ್ನು ಸಿದ್ದರಾಮಯ್ಯ ಅವರು ಅಲಂಕರಿಸಿದರೆ, ಇನ್ನರ್ಧ ಡಿಕೆ ಶಿವಕುಮಾರ್ ಅವರು ಅಲಂಕರಿಸುತ್ತಾರೆ ಎಂದೇ ಚರ್ಚೆಯಾಗಿತ್ತು. ಇದೀಗ ಸ್ವಾಮೀಜಿ ಬೇರೆ ನೇರವಾಗಿ, ವೇದಿಕೆ ಮೇಲೆಯೇ ಈ ಬಗ್ಗೆ ಮಾತನಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೂಡಾ ಅಕ್ರಮ : ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಪೊನ್ನಣ್ಣ ಏನಂದ್ರು..?

ಬೆಂಗಳೂರು: ಮೂಡಾದಿಂದ ಹದಿನೈದು ಸೈಟುಗಳು ಸಿಎಂ ಸಿದ್ದರಾಮಯ್ಯ ಅವರ ಧರ್ಮಪತ್ನಿ ಪಾರ್ವತಿ ಅವರ ಹೆಸರಲ್ಲಿ ಇದೆ ಎಂಬುದು ತಿಳಿದ ಮೇಲೆ ಪ್ರತಿಪಕ್ಷಗಳು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ

ಯುವ-ಶ್ರೀದೇವಿ ಅರ್ಜಿ ವಿಚಾರಣೆ : ಡಿವೋರ್ಸ್ ಸಿಕ್ತಾ..? ಏನಾಯ್ತು ಕೇಸ್..?

ಬೆಂಗಳೂರು: ದೊಡ್ಮನೆ ಕುಡಿ ಯುವ ರಾಜ್‍ಕುಮಾರ್ ಹಾಗೂ ಸೊಸೆ ಶ್ರೀದೇವಿ ಭೈರಪ್ಪ ಅವರ ಡಿವೋರ್ಸ್ ಕೇಸ್ ಅರ್ಜಿ ಇಂದು ವಿಚಾರಣೆಗೆ ಬಂದಿದೆ. ಫ್ಯಾಮಿಲಿ ಕೋರ್ಟ್ ಗೆ ಇಂದು ಇಬ್ಬರು ಹಾಜರಾಗಿದ್ದರು. ಅರ್ಜಿ ವಿಚಾರಣೆ ನಡೆಸಿದ

ದರ್ಶನ್ ನ್ಯಾಯಾಂಗ ಬಂಧನ ಇಂದು ಅಂತ್ಯ : ದಾಸನ ಪರ ವಕೀಲರ್ಯಾಕೆ ಇನ್ನು ಜಾಮೀನು ಅರ್ಜಿ ಸಲ್ಲಿಸಿಲ್ಲ..?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಬಂಧನವಾಗಿರುವ ನಟ ದರ್ಶನ್ ಅವರ ನ್ಯಾಯಾಂಗ ಬಂಧನ ಇಂದಿಗೆ ಅಂತ್ಯವಾಗಲಿದೆ. ಹೀಗಾಗಿ ಪೊಲೀಸರು ಇಂದು ಮತ್ತೊಮ್ಮೆ ದರ್ಶನ್ ಅಂಡ್ ಗ್ಯಾಂಗ್ ಅನ್ನು ನ್ಯಾಯಾಧೀಸರ ಎದುರು ಹಾಜರು ಪಡಿಸಲಿದ್ದಾರೆ. ವಿಡಿಯೋ

error: Content is protected !!