Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಿರುಪತಿ ಬೆಟ್ಟ ಹತ್ತುವಾಗ ಚಿರತೆ ದಾಳಿಗೆ ಮಗು ಸಾವು : ಸಿಸಿಟಿವಿಯಲ್ಲಿ ಸೆರೆ..

Facebook
Twitter
Telegram
WhatsApp

 

ಪ್ರಪಂಚದಲ್ಲಿಯೇ ಅತ್ಯಂತ ಶ್ರೀಮಂತ ದೇವರು ಎಂದರೆ ಅದು ತಿರುಪತಿ‌ ತಿಮ್ಮಪ್ಪ. ದೇಶದ ನಾನಾ ಭಾಗಗಳಿಂದ ತಿರುಪತಿ ತಿಮ್ಮಪ್ಪನಿಗೆ ಭಕ್ತರಿದ್ದಾರೆ. ದೇವಸ್ಥಾನಕ್ಕೆ‌ ಕೆಲವರು ಬೆಟ್ಟದ ಮೇಲಕ್ಕೆ ಗಾಡಿಯಲ್ಲಿ ಹೋದರೆ, ಇನ್ನು ಕೆಲ ಭಕ್ತರು ಬೆಟ್ಟ ಹತ್ತಿಕೊಂಡು ಹೋಗುತ್ತಾರೆ. ಆದ್ರೆ ಹೀಗೆ ಬೆಟ್ಟ ಹತ್ತುವಾಗ ಚಿರತೆಯ‌ ಬಗ್ಗೆ ಕೊಂಚ ಗಮನವಿರಲಿ.

ಪಾದಚಾರಿ‌ ಮಾರ್ಗದಲ್ಲಿ ತೆರಳುವಾಗ ಚಿರತೆಯೊಂದು‌ ಬಾಲಕಿಯನ್ನು ಹೊತ್ತುಕೊಂಡು ಹೋಗಿದೆ. ತನ್ಮ ಮನೆಯವರ ಜೊತೆಗೆ ಲಕ್ಷಿತಾ ಎಂಬ ಆರು ವರ್ಷದ ಪುಟ್ಟ ಬಾಲಕಿ ಕೂಡ ಬೆಟ್ಟ ಹತ್ತುತ್ತಿದ್ದಳು. ಆದ್ರೆ ಈ ವೇಳೆ‌ಮಾರ್ಗ ಮಧ್ಯದಲ್ಲಿಯೇ ಬಾಲಕಿ ನಾಪತ್ತೆಯಾಗಿದ್ದಾಳೆ. ಗಾಬರಿಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ದೂರು ದಾಖಲಿಸಿಕೊಂಡ ಪೊಲೀಸರು ಅಲ್ಲಿನ ಸಿಸಿಟಿವಿ ಪರಿಶೀಲನೆ ಮಾಡಿದಾಗ ಸತ್ಯ ಗೊತ್ತಾಗಿದೆ. ಚಿರತೆಯೊಂದು ಮಗುವನ್ನು ಹೊತ್ತುಕೊಂಡ ಹೋದ ದೃಶ್ಯ ಸೆರೆಯಾಗಿದೆ. ಸದ್ಯ ಪೊಲೀಸರು ನಾಪತ್ತೆಯಾದ ಕಾಡಲ್ಲೆಲ್ಲಾ ಹುಡುಕಾಟ ನಡೆಸಿದಾಗ, ಮಗುವಿನ ಮೃತದೇಹ‌ ಸಿಕ್ಕಿದೆ. ಚಿರತೆಯ ದಾಳಿಗೆ ಲಕ್ಷಿತಾಳ ಪ್ರಾಣವೇ ಹೋಗಿದೆ. ತಿರುಪತಿಯಲ್ಲಿಯೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಪಾದಯಾತ್ರೆಯ ಮೂಲಕ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯುವುದರಿಂದ ಒಳ್ಳೆಯದ್ದಾಗುತ್ತದೆ, ಪುಣ್ಯ ಸಿಗುತ್ತದೆ ಎಂದು ನಂಬಿ, ತಿಮ್ಮಪ್ಪನ ಮೇಲೆ ಭಾರ ಹಾಕಿ ಹೊರಟ ಭಕ್ತರಿಗೆ, ಯಾವತ್ತಿಗೂ ಅರಗಿಸಿಕೊಳ್ಳಲಾಗದ ನೋವು ಸಿಕ್ಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶರಣ ಸಂಸ್ಕೃತಿ ಉತ್ಸವ 2024 : ನಸಾಬ್ ಚಲನಚಿತ್ರ ಪೋಸ್ಟರ್ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 06 : ಕೆ. ಕಿಶೋರ್ ಕುಮಾರ್ ನಿರ್ದೇಶನದ ಕೀರ್ತಿಕುಮಾರ್ ನಾಯ್ಕ ನಟಿಸಿರುವ ಇದೇ ತಿಂಗಳ 25 ರಂದು ಬಿಡುಗಡೆಗೊಳ್ಳಲಿರುವ ನಸಾಬ್ ಚಿತ್ರದ ಪೋಸ್ಟರ್ ಗಳನ್ನು ಚಿತ್ರದುರ್ಗದಲ್ಲಿ ಶರಣ ಸಂಸ್ಕøತಿ ಉತ್ಸವ

ಚಿತ್ರದುರ್ಗ ಜಿಲ್ಲಾ ವಕೀಲರಿಂದ ಅ13 ರಂದು ನಾಟಕ ಪ್ರದರ್ಶನ : ರಾಜವೀರ ಮದಕರಿನಾಯಕ”ಕ್ಕೆ ಭರ್ಜರಿ‌ ತಾಲೀಮು

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 06 :  ಜಿಲ್ಲಾ ವಕೀಲರ ಸಂಘ ಚಿತ್ರದುರ್ಗ ಹಾಗೂ ಜಿಲ್ಲಾ ವಕೀಲರ ಸಾಂಸ್ಕೃತಿಕ ಬಳಗ ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 13 ರಂದು ಮದಕರಿ ನಾಯಕ ಜಯಂತಿ ಹಾಗೂ ದಸರಾ

ಗಿಡಗಳನ್ನು ನೆಟ್ಟು ಸುಮ್ಮನಾದರೆ ಸಾಲದು ಅವುಗಳ ರಕ್ಷಣೆಯ ಜವಾಬ್ದಾರಿಯನ್ನು ಹೊರಬೇಕು : ಕವಿ ಕೊರ್ಲಕುಟೆ ಜೆ.ತಿಪ್ಪೇಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್. 06 : ಗಿಡಗಳನ್ನು ಹಾಕಿ ಸುಮ್ಮನಾದರೆ ಸಾಲದು ಅವುಗಳ ರಕ್ಷಣೆಯ ಸಹ ಜವಾಬ್ದಾರಿ ಹೊರಬೇಕು

error: Content is protected !!