Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿ ಶತಮಾನೋತ್ಸವ ಆಚರಣೆ ಪೂರ್ವಭಾವಿ ಸಭೆ

Facebook
Twitter
Telegram
WhatsApp

ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್

ಚಿತ್ರದುರ್ಗ, (ನ.13): ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಯ ಶತಮಾನೋತ್ಸವ ಆಚರಣೆ ಕುರಿತು ಶನಿವಾರ ಸೊಸೈಟಿ ಆವರಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿತ್ತು.

ಶತಮಾನೋತ್ಸವವನ್ನು ಅದ್ದೂರಿ ಹಾಗೂ ವರ್ಣರಂಜಿತವಾಗಿ ಆಚರಿಸುವ ಕುರಿತು ಅನೇಕ ಹಿರಿಯ ಸದಸ್ಯರುಗಳು ಸಲಹೆ ಸೂಚನೆಗಳನ್ನು ಪೂರ್ವಭಾವಿ ಸಭೆಯಲ್ಲಿ ನೀಡಿದರು.

ಶತಮಾನೋತ್ಸವಕ್ಕೆ ಹಣ ಹಾಗೂ ಸಂಪನ್ಮೂಲ ಕ್ರೂಢೀಕರಣ, ಉಪಸಮಿತಿಗಳ ರಚನೆ, ನೆನಪಿನ ಕಾಣಿಕೆ, ಯಾರ್ಯಾರಿಗೆ ಯಾವ ಜವಾಬ್ದಾರಿ ನೀಡಬೇಕೆನ್ನುವ ಕುರಿತು ಸಭೆಯಲ್ಲಿ ವಿವರವಾಗಿ ಚರ್ಚಿಸಲಾಯಿತು.

ಹಿರಿಯ ಸದಸ್ಯರುಗಳ ಸಲಹೆ ಸೂಚನೆಗಳನ್ನು ಆಲಿಸಿ ಮಾತನಾಡಿದ ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ.ನಿಶಾನಿ ಜಯಣ್ಣ ಕಳೆದ ತಿಂಗಳು ಗಾಯಿತ್ರಿ ಕಲ್ಯಾಣ ಮಂಟಪದಲ್ಲಿ ನಡೆದ 104 ನೇ ಸರ್ವ ಸದಸ್ಯರ ಸಾಮಾನ್ಯ ವಾರ್ಷಿಕ ಮಹಾಸಭೆಯಲ್ಲಿ ಬಹುತೇಕ ಸದಸ್ಯರುಗಳು ಡಿವಿಡೆಂಟ್ ಹಣವನ್ನು ಶತಮಾನೋತ್ಸವಕ್ಕೆ ಬಳಸಿಕೊಳ್ಳುವಂತೆ ಒಪ್ಪಿಗೆ ನೀಡಿದ್ದಾರೆ.

ಅದರಂತೆ ಎಲ್ಲರ ಮಾರ್ಗದರ್ಶನ ಸಹಕಾರ ಪಡೆದು ಶತಮಾನೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಭರವಸೆ ನೀಡಿದರು.
ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿ ಹಿರಿಯ ಸದಸ್ಯರುಗಳಾದ ಮುಕುಂದರಾವ್, ಎಂ.ಸಿ.ಓ.ಬಾಬು, ವಸಂತರಾವ್, ಕೃಷ್ಣಪ್ಪ, ಜಿ.ಸಿ.ಸುರೇಶ್‍ಬಾಬು, ಡಿ.ಎನ್.ಮೈಲಾರಪ್ಪ, ಟಿ.ಕೆ.ಬಸವರಾಜ್, ಸೈಫುಲ್ಲಾ, ಮುಜೀಬುಲ್ಲಾ, ರಮೇಶ್ ಸೆಂಟ್ರಿಂಗ್, ಹೆಚ್.ಶ್ರೀನಿವಾಸ್, ಎನ್.ಎಂ.ಪುಷ್ಪವಲ್ಲಿ, ಬಿ.ಎಸ್.ಕೃಷ್ಣ, ಮುದ್ದುರಂಗಪ್ಪ, ನೀಲಪ್ಪ, ಮುರುಗೇಶ್, ಅನ್ವರ್‍ಪಾಷ ಇನ್ನು ಅನೇಕರು ಉಪಯುಕ್ತ ಸಲಹೆಗಳನ್ನು ನೀಡಿದರು.

ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿ ಉಪಾಧ್ಯಕ್ಷ ಡಾ.ರಹಮತ್‍ವುಲ್ಲಾ, ನಿರ್ದೇಶಕರುಗಳಾದ ನಾಗರಾಜ್‍ಬೇದ್ರೆ, ಸೂರ್ಯಪ್ರಕಾಶ್, ಚಂದ್ರಣ್ಣ, ಚಿಕ್ಕಣ್ಣ, ಶ್ರೀನಿವಾಸ್‍ಮೂರ್ತಿ, ಸೊಸೈಟಿಯ ವ್ಯವಸ್ಥಾಪಕ ಮಹಮದ್ ನಯೀಂ ವೇದಿಕೆಯಲ್ಲಿದ್ದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!