Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೋಡಕವಿದ ವಾತಾವರಣ ಮುಂದುವರಿಕೆ : ಡಿ.5ರವರೆಗೂ ಮಳೆಯಾಗುವ ಮುನ್ಸೂಚನೆ

Facebook
Twitter
Telegram
WhatsApp

ಇತ್ತಿಚೆಗೆ ವರುಣ ರಾಯ ಕೃಪೆ ತೋರುತ್ತಿದ್ದಾನೆ ಎಂಬಂತೆ ಕಾಣುತ್ತಿದೆ. ಮಳೆ ಅಲ್ಲಲ್ಲಿ ಜೋರಾಗಿದೆ. ಆದರೆ ಈಗ ಬರುತ್ತಿರುವ ಮಳೆಗಾಗಿ ರೈತ ನಿಜಕ್ಕೂ ಕಾಯುತ್ತಿಲ್ಲ. ಈಗ ಮಳೆ ಬಾರದೆ ಇದ್ದರೆ ಸೂಕ್ತ ಎಂದು ಭಾವಿಸುವಾಗಲೇ ಜೋರು ಮಳೆಯಾಗುತ್ತಿದೆ. ಬೆಳೆದ ಬೆಳೆ ಅಷ್ಟೊ ಇಷ್ಟೋ ಕೈಗೆ ಬರುವಾಗ, ಮಳೆರಾಯನಿಂದ ಬೆಳೆಹಾನಿಯಾಗುವ ಸಾಧ್ಯತೆ ಇದೆ. ಭೂಮಿಗೆ ಬೀಜ ಬಿತ್ತಿ, ಅದು ಮೊಳಕೆಯೊಡೆದಾಗ ಬಾರದ ಮಳೆ ಕೈಗೆ ಸಿಗುವ ಬೆಳೆಯನ್ನು ಸರಿಯಾಗಿ ಸಿಗುವುದಕ್ಕೆ ಬಿಡುತ್ತಿಲ್ಲ. ಹೀಗಾಗಿ ಹಿಂಗಾರು ಮಳೆಯಿಂದ ರೈತ ನೊಂದಿದ್ದಾನೆ. ಇನ್ನು ಒಂದು ವಾರಗಳ ಕಾಲ‌ ಅಲ್ಲಲ್ಲಿ ಮಳೆಯಾಗುವ ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ.

 

ಡಿಸೆಂಬರ್ 5ರ ತನಕ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂಬ ಮುನ್ಸೂಚನೆ ನೀಡಿದೆ ಹವಮಾನ ಇಲಾಖೆ. ಡಿಸೆಂಬರ್ 1 ರಂದು ಕೂಡ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಂದು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂಬ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ತುಮಕೂರು ವಿಜಯನಗರಗಳಲ್ಲಿ ಮಳೆ ಸಾಧ್ಯತೆ ಇದೆ. ಸದ್ಯಕ್ಕೆ ಬೆಳೆ ಕೊಯ್ಲು ಮಾಡುವ ಸಮಯ. ಕೊಯ್ದು ಒಣಗಿಸಬೇಕು ಎನ್ನುವಾಗಲೇ ಎಷ್ಟೋ ಕಡೆ ಮಳೆ ಬಂದಿದೆ. ಕೊಯ್ದು ಕಣಕ್ಕೆ ಹಾಕಿರುವ ಬೆಳೆಯ ಮೇಲೂ ಎಷ್ಟೊ ಕಡೆ ವರುಣರಾಯ ಮಿಂದೆದ್ದು ಹೋಗಿದ್ದಾನೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!