Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅರ್ಜುನ್ ಗಾಗಿ ಮುಂದುವರೆದ ಶೋಧ : ನಮ್ಮಪ್ಪನ ಮೂಳೆಯನ್ನಾದರೂ ಕೊಡಿ ಎಂದ ಇನ್ನೊಬ್ಬ ಯುವತಿ..!

Facebook
Twitter
Telegram
WhatsApp

ಶಿರೂರು ಗುಡ್ಡ ಕುಸಿತದಿಂದಾಗಿ ಹಲವು ಸಾವು ನೋವುಗಳಾಗಿವೆ. ಇನ್ನು ನಾಪತ್ತೆಯಾದವರ ಹುಡುಕಾಟವೂ ನಡೆಯುತ್ತಲೇ ಇದೆ. ಅದರಲ್ಲೂ ಕೇರಳ ಮೂಲದ ಅರ್ಜುನ್ ಲಾರಿ ಸಮೇತ ನಾಪತ್ತೆಯಾಗಿದ್ದು ಹುಡುಕಾಡುತ್ತಿದ್ದಾರೆ. ಇದೀಗ ಅರ್ಜುನ್ ಹುಡುಕಾಟದ ಬೆನ್ನಲ್ಲೇ ಇನ್ನಿಬ್ಬರು ನಾಪತ್ರೆಯಾದವರ ಕುಟುಂಬಸ್ಥರು ಒತ್ತಡ ಹಾಕುತ್ತಿದ್ದಾರೆ. ನಮ್ಮವರ ಮೂಳೆಯನ್ನಾದರೂ ಹುಡುಕಿಕೊಡಿ ಎನ್ನುತ್ತಿದ್ದಾರೆ.

ಇದೇ ಗುಡ್ಡ ಕುಸಿತದಲ್ಲಿ ಜಗನ್ನಾಥ್ ಹಾಗೂ ಲೋಕೇಶ್ ಎಂಬುವವರು ಕೂಡ ನಾಪತ್ತೆಯಾಗಿದ್ದರು. ಜುಲೈ 16ರಂದು ನಡೆದ ಗುಡ್ಡ ಕುಸಿತದಲ್ಲಿ ಜಗನ್ನಾಥ್ ಎಂಬುವವರು ಕಾಣೆಯಾಗಿದ್ದು, ಇಲ್ಲಿಯವರೆಗೂ ಅವರ ಸುಳಿವು ಕೂಡ ಸಿಕ್ಕಿಲ್ಲ. ಇದೋಗ ಅವರ ಮಗಳು ಪಲ್ಲವಿ ತಂದೆಯನ್ನು ಹುಡುಕಿಕೊಡುವಂತೆ ಮನವಿ ಮಾಡಿದ್ದಾರೆ.

ತಂದೆ ಸಿಗದ ಬಗ್ಗೆ ಕಣ್ಣೀರಾಕಿರುವ ಪಲ್ಲವಿ, ನಮ್ಮ ತಂದೆ ಕಾಣೆಯಾಗಿ 12 ದಿನ ಆಯ್ತು. ಏನು ಸುದ್ದಿ ಇಲ್ಲ. ಅವರನ್ನು ಹುಡುಕಿಕೊಡಿ. ಅವರನ್ನು ನಾವೂ ನೋಡಬೇಕು. ಕಾರ್ಯಾಚರಣೆ ಬಗ್ಗೆ ಏನು ಗೊತ್ತಾಗುತ್ತಿಲ್ಲ. ಬರೀ ಅರ್ಜುನ್, ಲಾರಿ ಅಂತಷ್ಟೇ ಹೇಳುತ್ತಿದ್ದಾರೆ. ನಮ್ಮ ಅಪ್ಪನ ಬಗ್ಗೆ ಏನು ಮಾತನಾಡುತ್ತಿಲ್ಲ. ಸರ್ಕಾರದವರು, ಜನಪ್ರತಿನಿಧಿಗಳು ಹುಡುಕಿಕೊಡುತ್ತೇವೆ ಎನ್ನುತ್ತಿದ್ದಾರೆ. ಅಮ್ಮ ಸರಿಯಾಗಿ ಊಟ ಮಾಡುತ್ತಿಲ್ಲ. ಮಾವ, ಅತ್ತೆ ಅವರ ನೆನಪಿನಲ್ಲಿಯೇ ಇದ್ದಾರೆ. ಅವರ ಮೂಳೆ ಸಿಕ್ಕ ಲರು ಸಾಕು ಹುಡುಕಿಕೊಡಿ ಎಂದು ಪಲ್ಲವಿ ಮನವಿ ಮಾಡಿದ್ದಾರೆ.

ಲೋಕೇಶ್ ಎಂಬಾತ ಕೂಡ ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದಾನೆ. ಚಾಲಕನ ಜೆಲಸ ಮಾಡುತ್ತಿದ್ದ ಲೋಕೇಶ್ ಗುಡ್ಡ ಕುಸಿತಕ್ಕೂ ಮೊದಲು ಹೊಟೇಲ್ ಒಂದರಲ್ಲಿ ಕಾಣಿಸಿದ್ದ ಎನ್ನಲಾಗಿದೆ. ಹೀಗಾಗಿ ಲೋಕೇಶ್ ಅವರಿಗೂ ಹುಡುಕಾಟ ನಡೆಯಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!