Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

CSK ನಾಯಕನ ಸ್ಥಾನ ಬದಲಾವಣೆ : ಧೋನಿ ಸ್ಥಾನಕ್ಕೆ ಬಂದ್ರು ಋತುರಾಜ್ ಗಾಯಕ್ವಾಡ್

Facebook
Twitter
Telegram
WhatsApp

ಚೆನ್ನೈ: ಐಪಿಎಲ್ ಆಟಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಇರುವಾಗಲೇ CSK ಫ್ಯಾನ್ಸ್ ಗೆ ಆಘಾತವಾದ ಸುದ್ದಿಯೊಂದು ಹೊರಬಿದ್ದಿದೆ. ಮಹೇಂದ್ರ ಸಿಂಗ್ ಧೋನಿ ನಾಯಕತ್ವ ಬದಲಾವಣೆಯಾಗಿದ್ದು, ಆ ಜಾಗಕ್ಕೆ ಋತುರಾಜ್ ಗಾಯಕ್ವಾಡ್ ಆಯ್ಕೆಯಾಗಿದ್ದಾರೆ. ಧೋನಿ ನಾಯಕತ್ವದಿಂದ ಇಳಿದ ಮಾಹಿತಿಯನ್ನು ಐಪಿಎಲ್ ಮೂಲಗಳು ಖಚಿತಪಡಿಸಿವೆ.

ಐಪಿಎಲ್ ನ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿಯಾಗಿದ್ದರು. ಐದು ಬಾರಿ ಚಾಂಪಿಯನ್ ಆಗಿದ್ದರು. ಇದೀಗ ದಿಢೀರನೇ ನಾಯಕತ್ವ ಬದಲಾವಣೆಯಾಗಿದೆ. 2019ರಿಂದ ಐಪಿಎಲ್ ನಲ್ಲಿ ಆಡುತ್ತಿರುವ ಋತುರಾಜ್, ಐಪಿಎಲ್ 2021ರಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅವಿಭಾಜ್ಯ ಅಂಗವಾಗಿದ್ದಾರೆ. ಒಂದು ಋತುವಿನಲ್ಲಿ 635 ರನ್ ಗಳನ್ನು ಗಳಿಸಿದ್ದಾರೆ‌. ಏಷ್ಯನ್ ಗೇಮ್ ನಲ್ಲಿ ಗಾಯಕ್ವಾಡ್ ಮೂರು ಟಿ 20 ಪಂದ್ಯಗಳಲ್ಲಿ ಟೀಂ ಇಂಡಿಯಾವನ್ನು ಮುನ್ನೆಡೆಸಿದ್ದಾರೆ. ಅಲ್ಲಿ ಭಾರತ ಟ್ರೋಫಿ ಗೆದ್ದಿದೆ.

ಐಪಿಎಲ್ 2024 ಪ್ರಾರಂಭವಾಗುವ ಮುನ್ನವೇ ಎಂ ಎಸ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವವನ್ನು ಋತುರಾಜ್ ಗಾಯಕ್ವಾಡ್ ಗೆ ಹಸ್ತಾಂತರಿಸಿದ್ದಾರೆ. ಋತುರಾಜ್ 2019 ರಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿದ್ದಾರೆ. ಎಂ ಎಸ್ ಧೋನಿ 2022ರಲ್ಲಿ ರವೀಂದ್ರ ಜಡೇಜಾಗೆ ನಾಯಕತ್ವವನ್ನು ಹಸ್ತಾಂತರ ಮಾಡಿದ್ದರು. ಆ ವೇಳೆಯಿಂದಾನೇ ಸಿ ಎಸ್ ಕೆ ಧೋನಿಯ ಉತ್ತರಾಧಿಕಾರಿಯ ಹುಡುಕಾಟ ಶುರು ಮಾಡಿತ್ತು. ಆದರೆ ಅದರಲ್ಲಿ ಸಿ ಎಸ್ ಕೆ ವಿಫಲಗೊಂಡಿತ್ತು. ಅಪೇಕ್ಷಣೀಯ ಫಲಿತಾಂಶಗಳನ್ನು ಪಡೆಯುವಲ್ಲಿ ವಿಫಲವಾದಾಗ ಹಡೇಜಾ ಅವರಿಂದ ಧೋನಿ ಮತ್ತೆ ಅಧಿಕಾರ ಪಡೆದುಕೊಂಡಿದ್ದರು. ಕಳೆದ ವರ್ಷದ ಐಪಿಎಲ್ ನಲ್ಲಿ ಧೋನಿ ತಮ್ಮ ಸಿ ಎಸ್ ಕೆ ತಂಡವನ್ನು ಐದನೇ ಬಾರಿಗೆ ಪ್ರಶ್ತಿ ಗೆಲ್ಲುವ ಮೂಲಕ ಮುನ್ನೆಡೆಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

ಮುತ್ತಪ್ಪ ರೈ ಆಸ್ತಿ ವಿವಾದ ಇತ್ಯರ್ಥ : ಎರಡನೇ ಪತ್ನಿಗೆ 100 ಕೋಟಿ ಆಸ್ತಿ

ಬೆಂಗಳೂರು :ಮಾಜಿ ಡಾನ್ ಮುತ್ತಪ್ಪ ರೈ ಸಾವನ್ನಪ್ಪಿದ ಬಳಿಕ ಅವರ ಆಸ್ತಿ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಅದರಲ್ಲೂ ಸಾವಿರಾರು ಕೋಟಿ ಆಸ್ತಿಯನ್ನು ಮುತ್ತಪ್ಪ ರೈ ಸಾಯುವುದಕ್ಕೂ ಮುನ್ನ ಮನೆಕೆಲಸದವರಿಗೂ ಸೇರಿ ಬರೆದಿದ್ದರು. 2019ರಲ್ಲಿ

error: Content is protected !!