Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಿನಗೂಲಿ ನೌಕರನಾಗಿದ್ದವ ಅಧಿಕಾರಿಯಾಗಿ ಬಡ್ತಿ : ಅಕ್ರಮ ನೇಮಕವೆಂದು ತೋಟಗಾರಿಕಾ ಅಧಿಕಾರಿ ವಜಾ..!

Facebook
Twitter
Telegram
WhatsApp

ಹಾವೇರಿ: ಸುಳ್ಳು ದಾಖಲೆ ನೀಡಿ ಅಕ್ರಮವಾಗಿ ನೇಮಕವಾಗಿದ್ದ ಅಧಿಕಾರಿಯನ್ನು ವಜಾಗೊಳಿಸಲಾಗಿದೆ. ಬಸವರಾಜಪ್ಪ ನಿಂಗಪ್ಪ ಬರೇಗಾರ ಹಾವೇರಿ ತೋಟಗಾರಿಕಾ ಇಲಾಖೆಯಲ್ಲಿ ಸಹಾಯಕ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು. ಆದರೆ ಇವರ ನೇಮಕಾತಿಯೇ ಅಕ್ರಮವೆಂದು ತಿಳಿದ ಮೇಲೆ ವಜಾಗೊಳಿಸಲಾಗಿದೆ.

ಬಸವರಾಜಪ್ಪ ಮೇಲೆ ದೂರುಗಳು ಬಂದಿದ್ದವು. ಈ ದೂರನ್ನ ಪರಿಶೀಲನೆ ನಡೆಸಲಾಗಿತ್ತು. ಸಮಿತಿಯು ಈ ಸಂಬಂಧ ಪರಿಶೀಲನೆ ನಡೆಸಿ, ವರದಿ ನೀಡಿತ್ತು. ಬಸವರಾಜಪ್ಪ ನಿಯಮಬಾಹಿರವಾಗಿ ನೇಮಕಾತಿಗೊಂಡಿರುವುದು ವರದಿಯಲ್ಲಿ ಬಹಿರಂಗವಾದ ಮೇಲೆ ತೋಟಗಾರಿಕಾ ನಿರ್ದೇಶಕರು ವಜಾಗೊಳಿಸಿ, ಆದೇಶ ಹೊರಡಿಸಿದ್ದಾರೆ. ಬಸವರಾಜಪ್ಪ ಈ ಮೊದಲು ತೋಟಗಾರಿಕಾ ಇಲಾಖೆಯಲ್ಲಿಯೇ ದಿನಗೂಲಿ ನೌಕರರಾಗಿ ಕೆಲಸ ಮಾಡುತ್ತಿದ್ದರು. ಆ ಬಳಿಕ ಹಾವೇರಿಯ ತೋಟಗಾರಿಕಾ ಇಲಾಕಲೆಯ ಅಧಿಕಾರಿಯಾಗಿ ಬಡ್ತಿ ಪಡೆದಿದ್ದರು. ಈ ನೇಮಕಾತಿ ಅಕ್ರಮ ಎಂದು ವರದಿಯಲ್ಲಿ ತಿಳಿದು ಬಂದಿದೆ..

1981ರಿಂದ 1991ರವರೆಗೆ ದಿನಗೂಲಿ ನೌಕರನಾಗಿ ಬಸವರಾಜಪ್ಪ ಕೆಲಸ ಮಾಡುತ್ತಿದ್ದರು ಎಂಬುದಾಗಿ ಸುಳ್ಳು ದಾಖಲೆಯನ್ನು ಸೃಷ್ಟಿಸಿದ್ದರು. ಈ ಮೂಲಕ 1992ರಿಂದ ತೋಟಗಾರಿಕಾ ಅಧಿಕಾರಿಯಾಗಿ ನೇಮಕಗೊಂಡರು. 2012ರಲ್ಲಿ ಮುಂಬಡ್ತಿ ಕೂಡ ನೀಡಿದ್ದರು. 1981ರಿಂದ 1991ರವರೆಗೆ ದಿನಗೂಲಿ ನೌಕರನಾಗಿ ಕೆಲಸ ಮಾಡಿರುವುದಾಗಿ ದಾಖಲೆ ನೀಡಿದ್ದರು. ಆದರೆ, ಆ ಅವಧಿಯಲ್ಲಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ರೆಗ್ಯುಲರ್‌ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡಿದ್ದರು ಎಂಬುವುದು ದೃಢಪಟ್ಟಿದೆ.

 

10 ವರ್ಷಗಳ ನಿರಂತರ ಸೇವೆ ಪೂರೈಸದೆ ಸಕ್ರಮಾತಿ ಷರತ್ತುಗಳನ್ನು ಉಲ್ಲಂಘಿಸಿ ನೇಮಕವಾಗಿರುವುದು ಸಮಿತಿ ಪರಿಶೀಲನೆ ವೇಳೆ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಹಾವೇರಿ ಸಹಾಯಕ ತೋಟಗಾರಿಕೆ ಅಧಿಕಾರಿ ಬಸವರಾಜಪ್ಪ ನಿಂಗಪ್ಪ ಬರೇಗಾರ ಅವರನ್ನು ಇಲಾಖೆ ನಿರ್ದೇಶಕರು ಸೇವೆಯಿಂದ ವಜಾಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!