Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಲಿತರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಬಾರದು : ಧರ್ಮಸೇನಾ

Facebook
Twitter
Telegram
WhatsApp

ಬೆಂಗಳೂರು: ಛಲವಾದಿ ನಾರಾಯಣಸ್ವಾಮಿ ವಿರುದ್ಧ ಮಾಜಿ ಎಂಎಲ್ ಸಿ ಧರ್ಮಸೇನಾ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ನಾಯಕರ‌ ಮೇಲೆ ಇಲ್ಲ ಸಲ್ಲದ ಹೇಳಿಕೆ ಕೊಡುತ್ತಾರೆ. ದಲಿತರನ್ನ ಧಿಕ್ಕು ತಪ್ಪಿಸುತ್ತಿದ್ದಾರೆ. ನಾಯಕರಾದವರು ಧಿಕ್ಕುತಪ್ಪಿಸುವ ಕೆಲಸ ಮಾಡಬಾರದು. ಎಸ್ಸಿಪಿ,ಟಿಎಸ್ಪಿ ಹಣವನ್ನ ಇನ್ನೂ ಕೊಟ್ಟಿಲ್ಲ ಎಂದಿದ್ದಾರೆ.

ನಾವು ದಲಿತ ವರ್ಗದಲ್ಲಿ ಹುಟ್ಟಿದವರು. ನಿಮಗೆ ಮಂತ್ರಿ ಸ್ಥಾನವನ್ನ ಕೊಟ್ಟಿಲ್ಲ. ನಿಮ್ಮ ಸಮುದಾಯಕ್ಕೆ ಮಂತ್ರಿ ಸ್ಥಾನ ಕೊಡಿಸಿಲ್ಲ. ಅದನ್ನ ನೀವು ಕೊಡಿಸುವ ಕೆಲಸ ಮಾಡಿ. ಛಲವಾದಿ ನಾರಾಯಣಸ್ವಾಮಿ ವಿರುದ್ಧ ಧರ್ಮಸೇನಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೀವು ಅಂಡರ್ ವೇರ್ ಹೊತ್ತು ತರೋದು ಸರಿಯಲ್ಲ. ನಾವು ೧೧೦ ಕೋಟಿ ಜನ ರಾಜ್ಯದಲ್ಲಿದ್ದೇವೆ. ನಮ್ಮ ಅಷ್ಟೂ ಜನರಿಗೆ ನಿಮ್ಮಿಂದ ನೋವಾಗಿದೆ. ನಿಮ್ಮಿಂದ ನಮಗೆ ೨ ರೀತಿಯಲ್ಲಿ‌ ನೋವಾಗಿದೆ. ಹಿರಿಯರ ಬಗ್ಗೆ ಗೌರವ ಕೊಡುವುದನ್ನ ಕಲಿಯಿರಿ. ನಿಮ್ಮ ಹೇಳಿಕೆಗಳನ್ನ ನಿಲ್ಲಿಸಿ. ಇರುವಷ್ಟು ದಿನ ದಲಿತರ ಪರ ಕೆಲಸ ಮಾಡಿಸಿ. ನಿಮಗೆ ಇರೋದೇ ಐದಾರು ತಿಂಗಳ ಸಮಯ ಮಾತ್ರ

ಶಾಸಕರಾಗಿ ಅನುಭವ ಕಲಿಯೋಕೆ ೫ ವರ್ಷ ಬೇಕು. ನಿಮ್ಮಿಂದ ಕೆಲಸ ಮಾಡಿಸೋಕೂ‌ ಆಗಲ್ಲ. ಹಾಗಾಗಿ ಇನ್ಮುಂದೆ ಇಂತಹ ಹೇಳಿಕೆಗಳನ್ನ ಕೈಬಿಡಿ ಎಂದು ಛಲವಾದಿ ನಾರಾಯಣಸ್ವಾಮಿ ವಿರುದ್ಧ ಕೆಪಿಸಿಸಿ ಎಸ್ಸಿ ಘಟಕದ ಅಧ್ಯಕ್ಷ ಧರ್ಮಸೇನಾ ಲೇವಡಿ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಸವತತ್ವ ಮಹಾವಿದ್ಯಾಲಯ ಹಾಗೂ ವಚನ ಕಮ್ಮಟ ಶ್ರೀ ಮಠದ ಎರಡು ಕಣ್ಣುಗಳು : ಡಾ. ಬಸವರಮಾನಂದ ಸ್ವಾಮಿಗಳು

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150 ನೇ ಜಯಂತ್ಯುತ್ಸವ ಹಾಗೂ ಶರಣ ಸಂಸ್ಕøತಿ ಉತ್ಸವ-2024 ರ ಕಾರ್ಯಕ್ರಮದಲ್ಲಿ ವಚನ ಕಮ್ಮಟ ಪರೀಕ್ಷೆಯ ರ‌್ಯಾಂಕ್ ವಿಜೇತರರಿಗೆ ಬಹುಮಾನ

ಶರಣ ಸಂಸ್ಕøತಿ 2024 : ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಜಯದೇವ ಶ್ರೀಗಳ ಬೆಳ್ಳಿಮೂರ್ತಿಯ ಪಲ್ಲಕ್ಕಿ ಉತ್ಸವ ಹಾಗೂ ಪಥ ಸಂಚಲನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150 ನೇ ಜಯಂತ್ಯುತ್ಸವ ಹಾಗೂ ಶರಣ ಸಂಸ್ಕೃತಿ 2024ರ ಅಂಗವಾಗಿ ಶ್ರೀಜಯದೇವ ಕಪ್ ಪಂದ್ಯಾವಳಿಯ ನಿಮಿತ್ತ ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಜಯದೇವ

Exit Poll-2024 : ಹರಿಯಾಣ ಜಮ್ಮು ಮತ್ತು ಕಾಶ್ಮೀರದಲ್ಲಿ ರೋಚಕ ಫಲಿತಾಂಶ : ಇಲ್ಲಿದೆ ಎಕ್ಸಿಟ್ ಪೋಲ್‌ ಮಾಹಿತಿ…!

  ಸುದ್ದಿಒನ್, ಅಕ್ಟೋಬರ್. 05 : ಹರಿಯಾಣದ ಎಲ್ಲಾ 90 ವಿಧಾನಸಭಾ ಕ್ಷೇತ್ರಗಳಲ್ಲಿ ಶನಿವಾರ (ಅಕ್ಟೋಬರ್ 5) ಮತದಾನ ಪೂರ್ಣಗೊಂಡಿದೆ. ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಅಕ್ಟೋಬರ್

error: Content is protected !!