Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಳ್ಳಾರಿ ಜೈಲಿನಲ್ಲಿ ದರ್ಶನ್ ಲಾಕ್ : ಕುಟುಂಬಸ್ಥರು ಬಿಟ್ರೆ ಸ್ನೇಹಿತರು, ಸೆಲೆಬ್ರೆಟಿಗಳಿಗೆ ಭೇಟಿಗಿಲ್ಲ ಅವಕಾಶ..!

Facebook
Twitter
Telegram
WhatsApp

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲು ಸೇರಿದ್ದಾರೆ. ಬಳ್ಳಾರಿಗೆ ಹೋದ ಮೇಲೆ ಕೈದಿ ಸಂಖ್ಯೆ ಕೂಡ ಬದಲಾಗಿದೆ. 511 ಕೈದಿಯಾಗಿದ್ದಾರೆ. ಬಳ್ಳಾರಿಗೆ ದರ್ಶನ್ ಬರುತ್ತಿದ್ದಾರೆಂದು ತಿಳಿದಾಗಲೇ ಸಹಸ್ರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜೈಲು ಬಳಿ ಸೇರಿದ್ದರು. ಬೆಂಗಳೂರಿನಲ್ಲಿಯೇ ಇದ್ದಾಗ ದರ್ಶನ್ ಅವರನ್ನು ನೋಡುವುದಕ್ಕೆ ಸ್ನೇಹಿತರು ಕೂಡ ಬರುತ್ತಿದ್ದರು. ಆದರೆ ಈಗ ಬಳ್ಳಾರಿ ಜೈಲಿನಲ್ಲಿ ಹೊಸ ರೂಲ್ಸ್ ಮಾಡಿದ್ದು, ದರ್ಶನ್ ಅವರನ್ನು ನೋಡಲು ಕೇವಲ ಅವರ ಕುಟುಂಬಸ್ಥರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಈ ಬಗ್ಗೆ ಡಿಐಜಿ ಟಿಪಿ ಶೇಷಾರವರು ಮಾಹಿತಿ ನೀಡಿದ್ದು, ಖಡಕ್ ಎಚ್ಚರಿಕೆಯನ್ನು ಕೊಟ್ಟಿದ್ದಾರೆ. ದರ್ಶನ್ ಅವರನ್ನು ನೋಡಲು ಅವರ ಮೊದಲ ರಕ್ತಸಂಬಂಧಿಗಳಿಗೆ ಬಿಟ್ಟರೆ ಬೇರೆ ಯಾರಿಗೂ ಅವಕಾಶವಿಲ್ಲ. ಅದನ್ನು ಬಿಟ್ಟರೆ ವಕೀಲರಿಗೆ ಮಾತ್ರ ಅವಕಾಶವಿದೆ. ಸ್ನೇಹಿತರು, ಸೆಲೆಬ್ರೆಟಿಗಳಿಗೆ ಅವಕಾಶವಿರುವುದಿಲ್ಲ. ಅವರ್ಯಾರೆ ಬಂದರು ಭೇಟಿಗೆ ಅವಕಾಶ ನೀಡುವುದಿಲ್ಲ. ದರ್ಶನ್ ಅವರನ್ನು ಹೈ ಸೆಕ್ಯುರಿಟಿ ಸೆಲ್ ನ್ಳಿ ಇರಿಸಲಾಗಿದೆ. 15 ಸೆಲ್ ಗಳ ಪೈಕಿ ಬೇರೆ ಬೇರೆ ಸ್ಥಳದಲ್ಲಿ ನಾಲ್ಕು ಜನ ಕೈದಿಗಳಿದ್ದಾರೆ. ದರ್ಶನ್ ಅಕ್ಕ ಪಕ್ಕ ಯಾರೂ ಇಲ್ಲ.

ದರ್ಶನ್ ಸೆಲ್ ಮುಂದೆ ಮೂರು ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಬಾಡಿವೂರ್ನ್ ಕ್ಯಾಮೆರಾ ಮೂಲಕ ನಿಗಾ ವಹಿಸಲಾಗಿದೆ. ದರ್ಶನ್ ಮೇಲೆ ಜಾಸ್ತಿ ನಿಗಾ ಇಡಲಾಗಿದೆ. ದರ್ಶನ್ ಗೆ ಬೆನ್ನು ನೋವಿದೆ. ಮೋಷನ್ ಸಮಸ್ಯೆಯಿಂದ ಊಟ ಬೇಡ ಎನ್ನುತ್ತಿದ್ದಾರೆ. ಜೈಲು ಊಟವನ್ನು ಸರಿಯಾಗಿ ನೀಡಲಾಗುತ್ತಿದೆ. ಮೆಡಿಕಲ್ ರಿಪೋರ್ಟ್ ಪರಿಶೀಲನೆ ಮಾಡ್ತೀವಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!