Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿಯ ‘ಜನ ಸ್ವರಾಜ್’ ಯಾತ್ರೆಗೆ ಡೇಟ್ ಫಿಕ್ಸ್..!

Facebook
Twitter
Telegram
WhatsApp

 

ಬೆಂಗಳೂರು: ಬಿಜೆಪಿಯಲ್ಲಿ ಈಗ ರಾಜ್ಯ ಪ್ರವಾಸ ಶುರುವಾಗಿದೆ. ಮಾಜಿ ಸಿಎಂ ಯಡಿಯೂರಪ್ಪ 4 ತಂಡಗಳನ್ನ ರಚಿಸಿದ್ದು, ಎಲ್ಲೆಡೆ ರಾಜ್ಯ ಪ್ರವಾಸ ಮಾಡಲಿದ್ದಾರೆ. ಜಿಲ್ಲೆಗಳಿಗೆ ತೆರಳಿ ಸಮಸ್ಯೆ ಆಲಿಸಲಿದ್ದಾರೆ. ಜನ ಸ್ವರಾಜ್ ಯಾತ್ರೆ ಇದೇ ತಿಂಗಳ 19 ರಿಂದ ಶುರುವಾಗಲಿದೆ.

ಈ ನಾಲ್ಕು ತಂಡಗಳಲ್ಲಿ 6 ನಾಯಕರು ಇರಲಿದ್ದಾರೆ. ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಈಶ್ವರಪ್ಪ ಇರಲಿದ್ದಾರೆ. ಒಂದೊಂದು ಕಡೆ ಒಬ್ಬೊಬ್ಬರ ಟೀಂ ಹೊರಡಲಿದೆ. ನ.19ರಿಂದ 22ರವರೆಗೆ ಈ ಪ್ರವಾಸ ಮುಂದುವರೆಯಲಿದೆ.

ಯಡಿಯೂರಪ್ಪ ನೇತೃತ್ವದಲ್ಲಿ ಉತ್ತರ ಕನ್ನಡ, ಹಾವೇರಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ, ಬೆಳಗಾವಿಯಲ್ಲಿ ಪ್ರವಾಸ ನಡೆದ್ರೆ,

ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್​ ಗೆ ನಳೀನ್ ಕುಮಾರ್ ಕಟೀಲ್ ಆಂಡ್ ಟೀಂ ಹೊರಡಲಿದೆ.

ಇನ್ನು ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಮಂಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನದಲ್ಲಿ ಪ್ರವಾಸಕ್ಕೆ ಎಸ್ ಈಶ್ವರಪ್ಪ ಆಂಡ್ ಟೀಂ ನಿಂದ ಶುರುವಾಗುತ್ತೆ.

ಜಗದೀಶ್​ ಶೆಟ್ಟರ್​ ತಂಡ ದಾವಣಗೆರೆ, ಚಿತ್ರದುರ್ಗ, ತುಮಕೂರು , ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!