Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಸಿಎಂ ಹೆಚ್ಚುವರಿ ಹುದ್ದೆ ವಿಚಾರ : ಬಹಿರಂಗವಾಗಿ ಚರ್ಚೆ ಮಾಡದಂತೆ ಸಿಎಂ ಎಚ್ಚರಿಕೆ..!

Facebook
Twitter
Telegram
WhatsApp

ಬೆಂಗಳೂರು: ಸರ್ಕಾರ ರಚನೆಯಾದಾಗಿನಿಂದ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಠಿಯಾಗಲಿ ಎಂದು ಸಾಕಷ್ಟು ಸಚುವರು, ಶಾಸಕರು ಡಿಮ್ಯಾಂಡ್ ಇಡುತ್ತಲೇ ಇದ್ದಾರೆ. ಆದರೆ ಸಿಎಂ ಸ್ಥಾನ ಬಿಟ್ಟುಕೊಡುವುದಕ್ಕೆ ಡಿಕೆ ಶಿವಕುಮಾರ್ ಅವರು ಡಿಮ್ಯಾಂಡ್ ಇಟ್ಟಿದ್ದರು ಎನ್ನಲಾಗಿದೆ. ಡಿಸಿಎಂ ಸ್ಥಾನ ಒಂದೇ ಇರಬೇಕು ಎಂಬ ಡಿಮ್ಯಾಂಡ್ ಇಟ್ಟಿದ್ದರು ಎನ್ನಲಾಗಿದೆ. ಹೀಗಾಗಿ ಡಿಸಿಎಂ ಸ್ಥಾನ ಹೆಚ್ಚು ಮಾಡಲು ಹೈಕಮಾಂಡ್ ಕೂಡ ಒಪ್ಪುತ್ತಿಲ್ಲ ಎನ್ನಲಾಗಿದೆ. ಇದರ ಮಧ್ಯೆ ರಾಜ್ಯದಲ್ಲಿ ಡಿಸಿಎಂ ಹೆಚ್ಚುವರಿ ಹುದ್ದೆಗಳ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸಚಿವ ಕೆ.ಎನ್.ರಾಜಣ್ಣ ಅವರು ಕೂಡ ಹೆಚ್ಚುವರಿ ಹುದ್ದೆ ಬಗ್ಗೆ ಮಾತನಾಡಿದ್ದಾರೆ. ಹೀಗಾಗಿ ಅವರಿಗೆ ದೂರವಾಣಿ ಕರೆ ಮೂಲಕವೇ ಎಚ್ಚರಿಕೆ ಕೊಟ್ಟಿದ್ದಾರೆ. ಇನ್ನು ಈ ರೀತಿ ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿದ್ದರೆ ಪಕ್ಷಕ್ಕೆ ಹಾಗೂ ಸರ್ಕಾರದ ಮೇಲೆಯೇ ಪರಿಣಾಮ ಬೀರುತ್ತದೆ. ಹೀಗಾಗಿ ಡಿಸಿಎಂ ವಿಚಾರವಾಗಿ ಯಾರೂ ಬಹಿರಂಗ ಹೇಳಿಕೆಗಳನ್ನು ನೀಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

 

ಇನ್ನು ಇದೇ ವಿಚಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸಹ ಬೇಸರ ಮಾಡಿಕೊಂಡಿದ್ದಾರೆ. ಯಾರೂ ಏನು ಬೇಕಾದರೂ ಹೇಳಲಿ. ಈ ಬಗ್ಗೆ ನಾನು ಬಹಿರಂಗವಾಗಿ ಚರ್ಚೆ ನಡೆಸಲ್ಲ. ಹೈಕಮಾಂಡ್ ಇದೆ. ಅವರು ಏನು ತೀರ್ಮಾನ ಮಾಡುತ್ತಾರೋ ಮಾಡಲಿ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಿದರೆ ಸಂತೋಷ. ಅದು ಕೂಡ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಬೇಸರ ಹೊರಹಾಕಿದ್ದಾರೆ.

ಆಗಾಗ ಸಿಎಂ ಹಾಗೂ ಡಿಸಿಎಂ ಬಣದ ನಡುವೆ ಈ ವಿಚಾರವಾಗಿ ಬಹಿರಂಗವಾಗಿ ಹೇಳಿಕೆಗಳನ್ನು ನೀಡಿ ಬಿಡುತ್ತಾರೆ. ಈಗಲೂ ಅದೇ ಆಗಿದ್ದು, ಅದಕ್ಕೆ ಸಿಎಂ ಎಚ್ಚರಿಕೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುಡಾ ನಿವೇಶನ ಹಂಚಿಕೆ: ರಾಜಕೀಯ ಪ್ರೇರಿತ ಆರೋಪಗಳು; ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜುಲೈ 04: ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತ ಆರೋಪಗಳೇ ಹೊರತು ಅಂಕಿಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ.ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಬಿಜೆಪಿಯವರಿಗೆ ಬೇರೇನೂ

ಚಿತ್ರದುರ್ಗ | ಅನಧಿಕೃತ ಕಬ್ಬಿಣದ ಅದಿರು ಸಾಗಾಣಿಕೆ ವಾಹನಗಳ ವಶ

ಚಿತ್ರದುರ್ಗ. ಜುಲೈ04 : ಅನಧಿಕೃತವಾಗಿ ಕಬ್ಬಿಣದ ಅದಿರು ಸಾಗಾಣಿಕೆ ಮಾಡುತ್ತಿದ್ದ ವಾಹನಗಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಚಳ್ಳಕೆರೆಯಲ್ಲಿ ಬುಧವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ

ಚಿತ್ರದುರ್ಗದ ಡಾ.ಡಿ.ಎಂ.ಅಭಿನವ್‍ಗೆ ರಾಜ್ಯಮಟ್ಟದ ಶ್ರೇಷ್ಠ ಆರ್‍ಸಿಹೆಚ್ ಅಧಿಕಾರಿ ಪ್ರಶಸ್ತಿ

ಚಿತ್ರದುರ್ಗ. ಜುಲೈ04:  ಚಿತ್ರದುರ್ಗ ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಅವರಿಗೆ ರಾಜ್ಯಮಟ್ಟದ ಶ್ರೇಷ್ಠ ಆರ್‍ಸಿಹೆಚ್ ಅಧಿಕಾರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜುಲೈ 1ರಂದು ಬೆಂಗಳೂರಿನ ವಿಧಾನಸೌಧದ ಕೊಠಡಿ ಸಂಖ್ಯೆ 334ರಲ್ಲಿ ನಡೆದ ಆರೋಗ್ಯ ಸಚಿವರ ಅಧ್ಯಕ್ಷತೆಯಲ್ಲಿ

error: Content is protected !!