Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿಗೆ ಸೋಲಿನ ಬೀತಿ ಕಾಡುತ್ತಿದೆ: ಡಿ ಕೆ ಶಿವಕುಮಾರ್

Facebook
Twitter
Telegram
WhatsApp

ಹುಬ್ಬಳ್ಳಿ: ಬಹಳ ಬಲಿಷ್ಠವಾದ ಸರ್ಕಾರ ಇದ್ದರೂ ಹಾನಗಲ್ ನಲ್ಲಿ ಮುಖ್ಯಮಂತ್ರಿಗಳು ಬೀಡು ಬಿಟ್ಟಿದ್ದಾರೆ. ಮಂತ್ರಿಗಳೆಲ್ಲಾ ಬಂದಿದ್ದಾರೆ, ಚೀಲಗಳನ್ನು ತಂದಿದ್ದಾರೆ. ಇದನ್ನು ನೋಡಿದರೆ ಸೋಲಿನ ಭೀತಿ ಕಾಡುತ್ತಿರುವುದು ಸ್ಪಷ್ಟವಲ್ಲವೇ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.

ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿ ಹಣ ಹಂಚುತ್ತಿರುವ ವಿಚಾರವಾಗಿ ಕಾಂಗ್ರೆಸ್ ಕೇವಲ ಆರೋಪ ಮಾಡುತ್ತಿದ್ದೆಯೇ ಹೊರತು, ಅದಕ್ಕೆ ಸಾಕ್ಷಿ ನೀಡುತ್ತಿಲ್ಲ ಎಂಬ ಬಿಜೆಪಿಯ ನಾಯಕರ ಹೇಳಿಕೆಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಅವರಿಗೆ ವಿಡಿಯೋ ಸಾಕ್ಷಿ ಬಿಡಬೇಕಾ? ಹಾಗಿದ್ದರೆ, ಅವರು ದುಡ್ಡು ಹಂಚುತ್ತಿರುವ ವಿಡಿಯೋ ಮಾಡಿ ಅದನ್ನು ಪ್ರಕಟಿಸುವಂತೆ ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ.

ಹಿಂದೆ ನಾವು ಈ ರೀತಿ ಸಾಕಷ್ಟು ಸಾಕ್ಷಿಗಳನ್ನು ಬಹಿರಂಗಪಡಿಸಿದ್ದರೂ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈಗ ಮತ್ತೊಮ್ಮೆ ಬಹಿರಂಗ ಮಾಡುತ್ತೇವೆ. ಅದು ದೊಡ್ಡ ವಿಚಾರವಲ್ಲ ಎಂದರು.

ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವಿಚಾರ ಏನೆಂದರೆ, ಈ ಹಿಂದೆ ಬಿಜೆಪಿ ನಾಯಕರು ಜನರಿಗೆ ಕೊಟ್ಟಿದ್ದ ಮಾತು ಏನು? ಅಧಿಕಾರಕ್ಕೆ ಬಂದ ನಂತರ ಅವರು ಉಳಿಸಿಕೊಂಡಿದ್ದಾರಾ? ಇಲ್ಲವಾ? ಎಂಬುದಷ್ಟೇ. ಕೋವಿಡ್ ಸಂದರ್ಭದಲ್ಲಿ ಜನರಿಗೆ ಕೊಟ್ಟ ಮಾತು ಉಳಿಸಿಕೊಂಡರಾ? ಡಬಲ್ ಇಂಜಿನ್ ಸರ್ಕಾರ ಕೊಡಿ ರೈತರ ಆದಾಯ ಡಬಲ್ ಮಾಡುತ್ತೇವೆ ಎಂದಿದ್ದರು. ಈಗ ಎಲ್ಲ ರೈತರ ಆದಾಯ ಡಬಲ್ ಆಗಿದೆಯಾ ಎಂದು ರೈತರನ್ನು ಕೇಳಿದರೆ, ಎಲ್ಲರೂ ಆಗಿಲ್ಲ ಅಂತಲೇ ಹೇಳುತ್ತಿದ್ದಾರೆ.

ಬದಲಿಗೆ ರಸಗೊಬ್ಬರ ಬೆಲೆ ಏರಿಕೆ ಹಾಗೂ ಮಾರುಕಟ್ಟೆ ಇಲ್ಲದೇ ಅವರ ಜೀವನ ದುಸ್ಥಿತಿಗೆ ಸಾಗಿದೆ. ಇನ್ನು ಕಾರ್ಮಿಕರಿಗೆ ಸರ್ಕಾರ ಘೋಷಿಸಿದ ಪರಿಹಾರ ಸಿಕ್ಕಿಲ್ಲ. ಈ ಸರ್ಕಾರದಿಂದ ಯಾರೊಬ್ಬರಿಗೂ ಸಹಾಯವಾಗಿಲ್ಲ. ನಾನು ಕೇಳಿದ ರೈತ, ಕಾರ್ಮಿಕ, ಚಾಲಕ, ವರ್ತಕ, ಬೀದಿ ವ್ಯಾಪಾರಿಗಳು ಎಲ್ಲರೂ ಈ ಸರ್ಕಾರದಿಂದ ನಮಗೆ ಸಹಾಯವಾಗಿಲ್ಲ ಎಂದೇ ಹೇಳುತ್ತಿದ್ದಾರೆ. ಇಷ್ಟಾದರೂ ಬಿಜೆಪಿಯವರು ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಿದ್ದಾರೆ? ಜನ ಅವರಿಗೆ ಮತ ಯಾಕೆ ನೀಡಬೇಕು? ಎಂದು ಪ್ರಶ್ನಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

ಸಾಲ ಇರುವ ಜಮೀನು ನೀಡಿ ಜ್ಯೂ.ಎನ್ಟಿಆರ್ ಗೆ ಮೋಸ ಮಾಡಿದ ಯುವತಿ ವಿರುದ್ಧ ನಟ ದೂರು..!

ಜ್ಯೂ. NTR ಆಸ್ತಿಯೊಂದನ್ನು ಖರೀದಿಸಲು ಹೋಗಿ ಮೋಸ ಹೋಗಿದ್ದಾರೆ. ಇದೀಗ ಮೋಸ ಮಾಡಿದ ಯುವತಿ ವಿರುದ್ಧ ಕೋರ್ಟ್ ಮೊರೆ ಹೋಗಿದ್ದಾರೆ. ಆಸ್ತಿ ಮೇಲೆ ಕೋಟ್ಯಾಂತರ ರೂಪಾಯಿ ಸಾಲವಿದ್ದು, ನ್ಯಾಯ ಕೇಳುತ್ತಿದ್ದಾರೆ. ಜ್ಯೂ. NTR, ಆರ್

error: Content is protected !!