Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅದ್ದೂರಿಯಾಗಿ ನೆರವೇರಿತು ನಿರ್ದೇಶಕ ತರುಣ್- ನಟಿ ಸೋನಲ್ ಮದುವೆ

Facebook
Twitter
Telegram
WhatsApp

 

ಬೆಂಗಳೂರು : ಕಳೆದ ಒಂದು ವರ್ಷದಿಂದ ಪ್ರೀತಿಸಿತ್ತಿದ್ದ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮೆಂಥೋರೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರುಹಿರಿಯರ ಆಶೀರ್ವಾದದೊಂದಿದೆ ತರುಣ್ ಮತ್ತು ಸೋನಲ್ ಸತಿ ಪತಿಗಳಾಗಿದ್ದಾರೆ. ಬೆಂಗಳೂರಿನಲ್ಲಿಯೇ ಸಾಂಪ್ರದಾಯಿಕವಾಗಿ ಮದುವೆ ನೆರವೇರಿದೆ.

ಇಬ್ಬರ ಮದುವೆಗೂ ಸ್ಯಾಂಡಲ್ ವುಡ್ ತಾರೆಯರು, ರಾಜಕಾರಣಿಗಳು ಬಂದು ಆಶೀರ್ವದಿಸಿದ್ದಾರೆ. ಇಂದು ತರುಣ್ ಸುಧೀರ್ ತಾಯಿ ಮಾಲತಿ ಸುಧೀಂದ್ರ ಅವರ ಕನಸು ನನಸಾದ ದಿನವಾಗಿದೆ. ಮಗನ ಮದುವೆಯನ್ನು ನೋಡಬೇಕೆಂಬ ಆಸೆ ಅವರದ್ದಾಗಿತ್ತು. ದೊಡ್ಡ ಮಗ ನಂದಕಿಶೋರ್ ಅವರಿಗೆ ಈಗಾಗಲೇ ಮದುವೆಯಾಗಿ ಮಗು ಕೂಡ ಇದೆ. ಆದರೆ ತರುಣ್ ಸುಧೀರ್ ಅವರಿಗೆ ಮದುವೆ ಫಿಕ್ಸ್ ಆಗುತ್ತಿಲ್ಲ ಎಂಬ ಕೊರಗು ಅವರಲ್ಲಿತ್ತು. ತರುಣ್ ಅವರನ್ನು ನೋಡಿಕೊಳ್ಳುವುದಕ್ಕೆ ಯಾರಾದರೂ ಬೇಕಿತ್ತು. ಈಗ ಆ ನೋವು ಕಡಿಮೆಯಾಗಿದೆ. ತಾನಂದುಕೊಂಡಂತೆ ಮಗನ ಮದುವೆಯನ್ನು ಅದ್ದೂರಿಯಾಗಿಯೇ ಮಾಡಿದ್ದಾರೆ.

ಸೋನಲ್ ಅವರನ್ನು ಗ್ರ್ಯಾಂಡ್ ಆಗಿ ಬರ ಮಾಡಿಕೊಂಡರು. ಯುವತಿಯರು ಡ್ಯಾನ್ಸ್ ಮಾಡುವ ಮೂಲಕ ಸೋನಲ್ ಅವರನ್ನು ಕರೆದುಕೊಂಡು ಬಂದಿದ್ದಾರೆ. ಹಿಂದೂ ಸಂಪ್ರದಾಯದಂತೆ ಇಬ್ಬರು ಮದುವೆಯಾಗಿದ್ದಾರೆ. ತರುಣ್ ಸುಧೀರ್ ತಾಳಿ ಕಟ್ಟುತ್ತಿದ್ದಂತೆ ಸೋನಲ್ ಭಾವುಕರಾಗಿದ್ದಾರೆ. ಕಣ್ಣಲ್ಲಿ ನೀರಿ ಬಂದಿದೆ. ಬಳಿಕ ತನ್ನ ತರುಣ್ ಸುಧೀರ್ ತನ್ನ ಪ್ರೀತಿಯ ಮಡದಿಯ ಹಣೆಗೆ ಮುತ್ತಿಟ್ಟಿದ್ದಾರೆ. ಇಂಡಸ್ಟ್ರಿಯ ಕಲಾವಿದರು, ಸ್ನೇಹಿತರೆಲ್ಲ ಸೇರಿ ತರಿಣ್ ಸುಧೀರ್ ಮದುವೆ ಆಗಮಿಸಿ, ನವ ವಧು ವರರಿಗೆ ಆಶೀರ್ವದಿಸಿದ್ದಾರೆ. ಅರಿಶಿನ ಶಾಸ್ತ್ರ, ಮೆಹಂದಿ ಶಾಸ್ತ್ರದಿಂದಾನೂ ಸ್ನೇಹಿತರು ಜೊತೆಗೆ ನಿಂತಿದ್ದಾರೆ. ಇಂದು ಹಿಂದೂ ಸಂಪ್ರದಾಯದಂತೆ ಮದುವೆ ನಡೆದಿದ್ದು, ಮಂಗಳೂರಿನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ನಡೆಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!