Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಕೆ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.15 : ಮಧ್ಯ ಕರ್ನಾಟಕದ ಆರಾಧ್ಯ ದೈವ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಶ್ರೀ ಗುರು ತಿಪ್ಪೇರುದ್ರ ಸ್ವಾಮಿಯ ನಮ್ಮ ಜಿಲ್ಲೆಯ ಆರಾಧ್ಯ ದೈವ ಎಲ್ಲ ವರ್ಗ ಧರ್ಮದ ಜನ ತಮ್ಮದೇ ದೇವರು ಅಂತ ಭಕ್ತಿಯಿಂದ ಪೂಜಿಸುವ ಪುಣ್ಯ ಸ್ಥಳ ನಾಯಕನಹಟ್ಟಿ. ನಾನು ಸಹ ಶ್ರೀ ಗುರು ತಿಪ್ಪೇರುದ್ರ ಸ್ವಾಮಿಯ ಸ್ವಾಮಿ ಆಶೀರ್ವಾದದಿಂದ ಈ ರಾಜ್ಯದಲ್ಲಿ ಮಂತ್ರಿಯಾಗುವ ಭಾಗ್ಯ ಭಗವಂತ ಕರುಣಿಸಿದ್ದಾನೆ.

ಇಡೀ ರಾಜ್ಯದಲ್ಲಿ ಬರೆದ ಛಾಯೆ ಆವರಿಸಿದೆ.
ಸರ್ಕಾರ ಸಮರೋಪಾದಿಯಲ್ಲಿ ಏನೇನು ಪರಿಹಾರ ಕಾರ್ಯವನ್ನು ಮಾಡುಬೇಕೋ ಅವೆಲ್ಲವನ್ನೂ ಮಾಡುತ್ತದೆ. ರೈತರ ಪರವಾಗಿ ನಮ್ಮ ಸರ್ಕಾರವಿದೆ. ಬರದ ಛಾಯೆ ಆವರಿಸದಂತೆ ನೋಡಿಕೊಳ್ಳುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಶಂಕರ್ ಯಾದವ್, ಮಹಮ್ಮದ್ ಯುಸೆಫ್, ತಾರಕೇಶ್, ಸುನಿಲ್ ಕುಮಾರ್, ದಳವಾಯಿ ರುದ್ರಮನಿ, ಶ್ರೀ ಗುರು ತಿಪ್ಪೇರುದ್ರಸ್ವಾಮಿ ಕಾರ್ಯನಿರ್ವಾಣಧಿಕಾರಿ  ಎಚ್. ಗಂಗಾಧರಪ್ಪ, ಸಿಬ್ಬಂದಿ ಎಸ್ ಸತೀಶ್, ಪಿಎಸ್ಐ ದೇವರಾಜ್, ಪೊಲೀಸ್ ಪೇದೆ ಅಣ್ಣಪ್ಪ, ಸೇರಿದಂತೆ ಮುಖಂಡರು ಗ್ರಾಮಸ್ಥರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಸರ್ಕಾರಿ ನೌಕರರ ಸಂಘದ ಮತದಾರರ ಪಟ್ಟಿ ಆಕ್ಷೇಪಣೆ ಸಲ್ಲಿಕೆಗೆ ಜು.10 ಕೊನೆಯ ದಿನ..!

  ಸುದ್ದಿಒನ್, ಚಿತ್ರದುರ್ಗ, ಜುಲೈ. 08 : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕೈಗೊಂಡ ಸರ್ವಾನುಮತದ ನಿರ್ಣಯದಂತೆ ಚಿತ್ರದುರ್ಗ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಸಂಘದ 2024ರಿಂದ

ಮನೆಗೆ ಮಗನಂತಿದ್ದ.. ಮಕ್ಕಳಿಲ್ಲದ ಕೊರಗು ಅವನಿಗೆ ಕಾಡುತ್ತಿತ್ತು : ಮೃತ ಅಳಿಯನ ಬಗ್ಗೆ ಬಿಸಿ ಪಾಟೀಲ್ ಹೇಳಿದ್ದೇನು..?

ದಾವಣಗೆರೆ: ಇಂದು ಮಾಜಿ ಸಚಿವ ಬಿ.ಸಿ.ಪಾಟೀಲ್ 40 ವರ್ಷದ ಅಳಿಯ ಪ್ರತಾಪ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ಮೃತ ಅಳಿಯನ ಬಗ್ಗೆ ಮಾತನಾಡಿರುವ ಬಿ.ಸಿ.ಪಾಟೀಲ್, ಮನೆಗೆ ಮಗನಂತಿದ್ದ. ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದ ಎಂದಿದ್ದಾರೆ.

ಚಿತ್ರದುರ್ಗ | 8 ಲಕ್ಷ ಮೌಲ್ಯದ 80 ಮೊಬೈಲ್ ಫೋನ್ ಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು…!

ಸುದ್ದಿಒನ್, ಚಿತ್ರದುರ್ಗ, ಜುಲೈ.08 : ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಳುವಾಗಿದ್ದ 8 ಲಕ್ಷ ರೂಪಾಯಿ ಮೌಲ್ಯದ 80 ಮೊಬೈಲ್ ಫೋನ್​ಗಳನ್ನು ಇಂದು (ಜುಲೈ. 08) ಪ್ರಾಪರ್ಟಿ ರಿಟರ್ನ್‌ ಪರೇಡ್​ನಲ್ಲಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ನಗರದ ಜಿಲ್ಲಾ

error: Content is protected !!